ಮೋದಿ ಸೋಲಿಸದಿದ್ದರೆ ಸಂವಿಧಾನ ಉಳಿಯದು: ಮಲ್ಲಿಕಾರ್ಜುನ ಖರ್ಗೆ

Published : Feb 22, 2024, 01:02 AM IST
ಮೋದಿ ಸೋಲಿಸದಿದ್ದರೆ ಸಂವಿಧಾನ ಉಳಿಯದು: ಮಲ್ಲಿಕಾರ್ಜುನ ಖರ್ಗೆ

ಸಾರಾಂಶ

ಕಲಂ 371ಜೆ ಆಗಬಾರದೆಂಬ ನಿಲುವು ಮಾಜಿ ಉಪಪ್ರಧಾನಿ ಎಲ್‌.ಕೆ.ಆಡ್ವಾಣಿ ಅವರದ್ದಾಗಿತ್ತು. ಇದೇ ಸಂದರ್ಭದಲ್ಲಿ ಎದುರಾದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಸೋನಿಯಾ ಗಾಂಧಿ ನನಗೆ ಸೂಚಿಸಿದಾಗ ನಾನು ಕಲಂ 371ಜೆ ತಿದ್ದುಪಡಿ ಮಾಡಿಕೊಡುವ ಭರವಸೆ ನೀಡಿದರೆ ಮಾತ್ರ ಸ್ಪರ್ಧಿಸುವುದಾಗಿ ಹೇಳಿದ್ದೆ. ಕೊನೆಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಸಂಸತ್ತಿನಲ್ಲಿ ಎಲ್ಲರ ಸಹಕಾರದಿಂದ ತಿದ್ದುಪಡಿ ಅಂಗೀಕರಿಸಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 

ಬೀದರ್‌(ಫೆ.22): ನಾನು ಪ್ರಚಾರಪ್ರಿಯ ಅಲ್ಲ. ಆದರೆ ಪ್ರಧಾನಿ ಮೋದಿ ಪ್ರಚಾರಕ್ಕಾಗಿ ಮುಗಿಬೀಳುತ್ತಾರೆ. ರೈಲಿನ ಹಸಿರು ಧ್ವಜ ತೋರಿಸಲೂ ಮುಂದೆ ನಿಲ್ಲುತ್ತಾರೆ. ಮನುವಾದವನ್ನು ತಂದು ಸಂವಿಧಾನ ಮುಗಿಸುವ ಕುತಂತ್ರ ನಡೆಸುತ್ತಿರುವ ಬಿಜೆಪಿ, ಆರೆಸ್ಸೆಸ್‌ನ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸದೇ ಇದ್ದಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಇರಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಮಂಗಳವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಅಭಿಮಾನಿಗಳು ಆಯೋಜಿಸಿದ್ದ ಅಭಿನಂದನಾ ಸಮಾರಂಭಧಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನಾಂದೇಡ್‌-ಬೆಂಗಳೂರು ರೈಲಿನ ಸಮಯ ಬದಲಾವಣೆ ಬದಲು ಹೊಸ ರೈಲು ಆರಂಭಿಸಿದೆ, ಬೀದರ್‌ ಕಲಬುರಗಿ ಮಾರ್ಗ ಪೂರ್ಣಗೊಳಿಸಿದೆ, ಹೈದರಾಬಾದ್‌ನಿಂದ ಹುಬ್ಬಳ್ಳಿ ರೈಲು ಆರಂಭಿಸಿದೆ. ಸೋಲಾಪುರದಿಂದ ಬೆಂಗಳೂರಿಗೆ ರೈಲು ನೀಡಿದೆ. ಹೀಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದರೂ ಪ್ರಚಾರಗಿಟ್ಟಿಸಿಕೊಳ್ಳುವ ತವಕಕ್ಕೆ ಬೀಳಲಿಲ್ಲ ಎಂದರು.

ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್, ಖರ್ಗೆರನ್ನು ಮರೆಯದಿರಲಿ: ಸಚಿವ ಈಶ್ವರ ಖಂಡ್ರೆ

ಕಲಂ 371ಜೆ ಆಗಬಾರದೆಂಬ ನಿಲುವು ಮಾಜಿ ಉಪಪ್ರಧಾನಿ ಎಲ್‌.ಕೆ.ಆಡ್ವಾಣಿ ಅವರದ್ದಾಗಿತ್ತು. ಇದೇ ಸಂದರ್ಭದಲ್ಲಿ ಎದುರಾದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಸೋನಿಯಾ ಗಾಂಧಿ ನನಗೆ ಸೂಚಿಸಿದಾಗ ನಾನು ಕಲಂ 371ಜೆ ತಿದ್ದುಪಡಿ ಮಾಡಿಕೊಡುವ ಭರವಸೆ ನೀಡಿದರೆ ಮಾತ್ರ ಸ್ಪರ್ಧಿಸುವುದಾಗಿ ಹೇಳಿದ್ದೆ. ಕೊನೆಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಸಂಸತ್ತಿನಲ್ಲಿ ಎಲ್ಲರ ಸಹಕಾರದಿಂದ ತಿದ್ದುಪಡಿ ಅಂಗೀಕರಿಸಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಕಾಂಗ್ರೆಸ್‌ನಿಂದ ಆಯ್ಕೆಯಾಗಿ ಹೋದವರು ಸಾಮಾಜಿಕ ಕಳಕಳಿಯ ತತ್ವ-ಸಿದ್ಧಾಂತ ಮರೆತು ದುಡ್ಡು, ಅಧಿಕಾರದ ಆಸೆ ಮತ್ತು ಅಸೂಯೆಯಿಂದ ಬಿಜೆಪಿ ಜೊತೆ ಸೇರಿ ನಮ್ಮ ಸರ್ಕಾರ ಬೀಳುವಂತಾಗಿವೆ. ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಗೋವಾಗಳಲ್ಲಿ ಇಂಥ ಸನ್ನಿವೇಶ ಕಂಡಿದ್ದೇನೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!