Bharat Jodo Yatra: ರಾಹುಲ್ ಕಾಲ್ನಡಿಗೆ ಬಿಜೆಪಿಗೆ ನಡುಕ: ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್

Published : Sep 26, 2022, 08:33 PM IST
Bharat Jodo Yatra: ರಾಹುಲ್ ಕಾಲ್ನಡಿಗೆ ಬಿಜೆಪಿಗೆ ನಡುಕ: ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್

ಸಾರಾಂಶ

ದೇಶದ ಏಕತೆಗಾಗಿ ರಾಷ್ಟ್ರ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿ ನಾಯಕರಲ್ಲಿ ನಡುಕು ಉಂಟು ಮಾಡಿದೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಹೇಳಿದರು. ಭರಮಸಾಗರದಲ್ಲಿ ಆಯೋಜಿಸಿದ್ದ ಯಾತ್ರೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು. 

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ (ಸೆ.26): ದೇಶದ ಏಕತೆಗಾಗಿ ರಾಷ್ಟ್ರ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿ ನಾಯಕರಲ್ಲಿ ನಡುಕು ಉಂಟು ಮಾಡಿದೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಹೇಳಿದರು. ಭರಮಸಾಗರದಲ್ಲಿ ಆಯೋಜಿಸಿದ್ದ ಯಾತ್ರೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು. ಯಾತ್ರೆಗೆ ವ್ಯಕ್ತವಾಗುತ್ತಿರುವ ಜನಬೆಂಬಲದಿಂದ ವಿಚಲಿತರಾಗಿರುವ ಬಿಜೆಪಿ ನಾಯಕರು, ಇಲ್ಲ-ಸಲ್ಲದ ಸುಳ್ಳು ಸುದ್ದಿ ಹರಡಿಸಲು ಯತ್ನಿಸಿ ವಿಫಲರಾಗುತ್ತಿದ್ದಾರೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ, ಪ್ರತಿ ವ್ಯಕ್ತಿ ಬ್ಯಾಂಕ್ ಖಾತೆಗೆ ಹದಿನೈದು ಲಕ್ಷ .

ಹೀಗೆ ಹೀಗೆ ಸಾಲು ಸಾಲು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಇದ್ದ ಕೆಲಸವನ್ನು ಕಿತ್ತುಕೊಳ್ಳುತ್ತಿದೆ. ಬೆಲೆ ಏರಿಕೆ ಮೂಲಕ ಜನರ ಹಣಕ್ಕೆ ಕನ್ನ ಹಾಕಿದೆ ಎಂದು ದೂರಿದರು. ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳದಿಂದ ಬಿಜೆಪಿ ಆಡಳಿತದ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಅಂದು ಬ್ರಿಟೀಷರ ವಿರುದ್ಧ ಗಾಂಧೀಜಿ ಸೇರಿ ಅನೇಕ ಮಹನೀಯರು ದಂಡಿ ಯಾತ್ರೆ, ಉಪ್ಪಿನ ಸತ್ಯಾಗ್ರಹ ಹೀಗೆ ವಿವಿಧ ರೀತಿ ಹೋರಾಟ ನಡೆಸಿದ್ದರು. ಇಂದು ಬಿಜೆಪಿ ದುರಾಡಳಿತ, ಧರ್ಮ, ಜಾತಿ ಮಧ್ಯೆ ವಿಷ ಬೀಜ ಬಿತ್ತುವ ವಿರುದ್ಧ ರಾಹುಲ್ ಗಾಂಧಿ ಅತ್ಯಂತ ದೊಡ್ಡ ಚಳವಳಿ ಹಮ್ಮಿಕೊಂಡಿದ್ದು, ದೂರ ಹಾಗೂ ಅವಧಿಯಲ್ಲಿ ದಾಖಲೆ ಆಗುತ್ತಿದೆ ಎಂದು ಹೇಳಿದರು. 

Chitradurga: ಟ್ಯಾಕ್ಸ್‌ ಕಟ್ಟಲು ನನ್ನ ಬಳಿ ಹಣವಿಲ್ಲ: ಸಚಿವ ಮಾಧುಸ್ವಾಮಿ

ಸಾವಿರಾರು ಕಿಮೀ ಪಾದಯಾತ್ರೆ ಮಾರ್ಗ ಮಧ್ಯದಲ್ಲಿ ರಾಹುಲ್ ಗಾಂಧಿ ಅವರು ಸ್ಥಳೀಯ, ಪ್ರಾದೇಶಿಕ ಸಮಸ್ಯೆಗಳ ಅಧ್ಯಯನ ಜೊತೆಗೆ ಜನರ ನೋವು ಆಲಿಸುತ್ತಿದ್ದಾರೆ. ಜನರೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಈ ಯಾತ್ರೆ ಭಾರತ ಜನರನ್ನು ಒಗ್ಗೂಡಿಸುವ ಪ್ರಮುಖ ಉದ್ದೇಶ ಹೊಂದಿದ್ದು, ಪಕ್ಷಾತೀತ ಚಳವಳಿಯಾಗಿ ರೂಪುಗೊಂಡಿದೆ ಎಂದರು.  ಕೆಪಿಸಿಸಿ ಉಪಾಧ್ಯಕ್ಷ‌, ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ನಲವತ್ತೈದು ವರ್ಷದ ರಾಜಕೀಯ ಜೀವನದಲ್ಕಿ ಸೋಲು-ಗೆಲುವು ಕಂಡಿರುವ ನಾನು ಸದಾ ಜನರೊಂದಿಗೆ ಇದ್ದೇನೆ. ಕಳೆದ ಬಾರಿ ಸಚಿವನಾಗಿ ಮಾಡಿದ್ದ ಕೆಲಸಗಳನ್ನು ಉದ್ಘಾಟನೆ ಮಾಡಲು ಕೂಡ ಈಗಿನವರಿಗೆ ಸಮಯ ಇಲ್ಲದಂತೆ ಎಂದರು. 

ನನ್ನ ಅವಧಿಯಲ್ಲಿ ಒಂದು ಜಾತಿ ಗಲಭೆಗಳು ಆಗದಂತೆ ಎಚ್ಚರವಹಿಸಿದ್ದೇ, ಆದರೆ ಈಗ ಜಾತಿ ಸಂಘರ್ಷ ಹೆಚ್ಚಾಗಿದೆ. ಜನ ನನ್ನ ಅವಧಿಯ ಆಡಳಿತ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇಲ್ಲಿ ಸೇರಿರುವ ಜನಸ್ತೋಮವೆ ಸಾಕ್ಷಿ ಎಂದು ಹೇಳಿದರು. ಬರೀ ಸುಳ್ಳುಗಳ‌ ಮೂಲಕ ಜನರನ್ನು ನಿರಂತರ ವಂಚಿಸಲು ಸಾಧ್ಯವೆಂಬುದು ಬಿಜೆಪಿ ನಾಯಕರು ಅರಿತುಕೊಳ್ಳಬೇಕು. ನಮ್ಮ ಸರ್ಕಾರವನ್ನು ಆಧಾರರಹಿತವಾಗಿ ದಸ್ ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದ ಭಾಷಣಕಾರನ ಪಕ್ಷ ನಲವತ್ತು ಪರ್ಸೆಂಟ್ ಪಡೆಯುತ್ತಿರುವುದನ್ನು ಗುತ್ತಿಗೆದಾರರೇ ಬಹಿರಂಗವಾಗಿ ಹೇಳುತ್ತಿದ್ದಾರೆ. 

ಅವರ ವಿರುದ್ಧ ಕ್ರಮ ಕೈಗೊಳ್ಳಲು ತಾಕತ್ ಇಲ್ಲದ ಬಿಜೆಪಿ ಸರ್ಕಾರ, ಭ್ರಷ್ಟಚಾರದ ವಿರುದ್ಧ ಆಂದೋಲನ ಆರಂಭಿಸಿರುವ ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಮುಂದಾಗಿರುವುದು ಹೇಡಿತನ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಯಾತ್ರೆ ಜಿಲ್ಲೆಗೆ ಆಗಮಿಸುತ್ತಿದ್ದಂತೆ ಅವರೊಂದಿಗೆ ಹೆಜ್ಜೆ ಹಾಕಲು ಹೊಳಲ್ಕೆರೆ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಉತ್ಸಹಕರಾಗಿದ್ದಾರೆ. ಇಲ್ಲಿಂದ ಹೆಚ್ಚು ಜನರು ಯಾತ್ರೆಯಲ್ಲಿ ಪಾಲ್ಗೊಂಡು ಇತಿಹಾಸ ನಿರ್ಮಿಸಲಿದ್ದಾರೆ ಎಂದರು.

Chitradurga: ಸಿಎಂ ಬೊಮ್ಮಾಯಿ ಸಹ ಪ್ರಾಮಾಣಿಕ ಹೆಜ್ಜೆಯಿಡುತ್ತಿದ್ದಾರೆ: ಯಡಿಯೂರಪ್ಪ

ಕ್ಷೇತ್ರದ ಉಸ್ತುವಾರಿ, ಕೆಪಿಸಿಸಿ ಕಾರ್ಯದರ್ಶಿ ಡಾ.ಸಾಸಲು ಸತೀಶ್ ಮಾತನಾಡಿ, ಚಿತ್ರದುರ್ಗ ಜಿಲ್ಲೆ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಅದರಲ್ಲೂ ಹೊಳಲ್ಕೆರೆ ಕ್ಷೇತ್ರದಲ್ಲಿ ಆಂಜನೇಯ ಅವರು ಸಚಿವರಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ದಾಖಲೆ ಆಗಿದೆ. ಈ ಕಾರಣಕ್ಕೆ ಕ್ಷೇತ್ರದಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಬಲಿಷ್ಠವಾಗಿದೆ. ಕ್ಷೇತ್ರದಲ್ಲಿನ ಪಕ್ಷ ಸಂಘಟನೆ ಶೈಲಿ, ಕಾರ್ಯಕರ್ತರ ಉತ್ಸಾಹ ರಾಜ್ಯಕ್ಕೆ ಮಾದರಿ ಆಗಿದೆ. ಈ ಬಾರಿ ಕ್ಷೇತ್ರದಲ್ಲಿ ಆಂಜನೇಯ ಅವರು ದಾಖಲೆ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಹೇಳಿದರು. ಕ್ಷೇತ್ರದ 39 ಗ್ರಾಮ ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತು ಮೂವತ್ತು ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ನಡೆಸುತ್ತಿರುವುದು ಪಕ್ಷದ ಬಲಿಷ್ಠತೆಗೆ ಸಾಕ್ಷಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!