ಸಿದ್ದರಾಮಯ್ಯ ಭರವಸೆ ನಂಬಿ ಕೆಟ್ಟೆ: ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌

Published : May 31, 2023, 07:57 AM ISTUpdated : May 31, 2023, 08:51 AM IST
ಸಿದ್ದರಾಮಯ್ಯ ಭರವಸೆ ನಂಬಿ ಕೆಟ್ಟೆ: ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌

ಸಾರಾಂಶ

ಮಂತ್ರಿಗಿರಿಗಾಗಿ ನಾನು ಯಾರ ಬಾಗಿಲೂ ಕಾಯುವುದಿಲ್ಲ. ಸಿದ್ದರಾಮಯ್ಯ ಅವರು ಹೇಳಿದ್ದರೂ ಯಾಕೋ ನನಗೆ ಅವಕಾಶ ಸಿಕ್ಕಿಲ್ಲ: ಬಿ.ಆರ್‌.ಪಾಟೀಲ್‌

ಕಲಬುರಗಿ(ಮೇ.31): ಸಚಿವ ಸ್ಥಾನ ಸಿಗದ್ದಕ್ಕೆ ಆಳಂದ ಶಾಸಕ ಬಿ.ಆರ್‌.ಪಾಟೀಲರು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಧಿಕಾರಕ್ಕಾಗಿ ಭಿಕ್ಷೆ ಬೇಡುವ ಜಾಯಮಾನದವನು ನಾನಲ್ಲ. ಸಿದ್ದರಾಮಯ್ಯ ಅವರೇ ಚುನಾವಣಾ ಪ್ರಚಾರಕ್ಕೆ ಬಂದಾಗ ನನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದರು. ಅದನ್ನು ನಂಬಿ ನಾನು ಕೆಟ್ಟೆಎಂದು ಪಾಟೀಲರು ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂತ್ರಿಗಿರಿಗಾಗಿ ನಾನು ಯಾರ ಬಾಗಿಲೂ ಕಾಯುವುದಿಲ್ಲ. ಸಿದ್ದರಾಮಯ್ಯ ಅವರು ಹೇಳಿದ್ದರೂ ಯಾಕೋ ನನಗೆ ಅವಕಾಶ ಸಿಕ್ಕಿಲ್ಲ ಎಂದರು.

ಭ್ರಷ್ಟರ ವಿರುದ್ಧ ತನಿಖೆಯ 6ನೇ ಗ್ಯಾರಂಟಿ ಪಕ್ಕಾ: ಪ್ರಿಯಾಂಕ್‌ ಖರ್ಗೆ

ನಾನು ನಂಬಿದವರೇ ನನ್ನನ್ನು ಕೈ ಬಿಟ್ಟರು. ನಾನು ಎಂದೂ ಜೀವನದಲ್ಲಿ ಕೋಮುವಾದಿ ಪಕ್ಷದ ಜೊತೆಗೆ ಹೋಗಲ್ಲ. ಕೊನೆಯುಸಿರಿರುವವರೆಗೂ ಹೋರಾಟ ಮಾಡುತ್ತೇನೆ. ಜಿಲ್ಲೆಯಲ್ಲಿ ಕಿರಿಯರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಪ್ರಿಯಾಂಕ್‌ ಖರ್ಗೆ ಮತ್ತು ಡಾ.ಶರಣಪ್ರಕಾಶ್‌ ಪಾಟೀಲ ಅವರು ಹೆಚ್ಚು ಸಕ್ರಿಯವಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದು ಸ್ವಾಗತಾರ್ಹ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ