ಆಳಂದ ಮತಗಳ್ಳತನ: ರಾಹುಲ್‌ ಗಾಂಧಿ ಆರೋಪಕ್ಕೆ ಚುನಾವಣಾ ಆಯೋಗದ ವಿರುದ್ಧ ಸಚಿವರ ಆಕ್ರೋಶ

Published : Sep 19, 2025, 05:46 AM IST
Rahul Gandhi

ಸಾರಾಂಶ

ಆಳಂದ ವಿಧಾನಸಭಾ ಕ್ಷೇತ್ರದ ಮತಗಳವು ಬಗ್ಗೆ ರಾಹುಲ್‌ ಗಾಂಧಿ ಅವರು ಮಾಡಿರುವ ಆರೋಪಗಳೆಲ್ಲವೂ ಸತ್ಯ ಎಂದು ಸಮರ್ಥಿಸಿಕೊಂಡಿರುವ ರಾಜ್ಯ ಸರ್ಕಾರದ ಹಲವು ಸಚಿವರು, ‘ಈ ಮತಗಳ್ಳತನ 100 ಪರ್ಸೆಂಟ್‌ ಬಿಜೆಪಿ ಕೆಲಸ.

ಬೆಂಗಳೂರು (ಸೆ.19): ಆಳಂದ ವಿಧಾನಸಭಾ ಕ್ಷೇತ್ರದ ಮತಗಳವು ಬಗ್ಗೆ ರಾಹುಲ್‌ ಗಾಂಧಿ ಅವರು ಮಾಡಿರುವ ಆರೋಪಗಳೆಲ್ಲವೂ ಸತ್ಯ ಎಂದು ಸಮರ್ಥಿಸಿಕೊಂಡಿರುವ ರಾಜ್ಯ ಸರ್ಕಾರದ ಹಲವು ಸಚಿವರು, ‘ಈ ಮತಗಳ್ಳತನ 100 ಪರ್ಸೆಂಟ್‌ ಬಿಜೆಪಿ ಕೆಲಸ. ಇದಕ್ಕೆ ನಮ್ಮ ಬಳಿ ಅಧಿಕೃತ ದಾಖಲೆಗಳಿವೆ. ಸಮಯ ಬಂದಾಗ ಬಹಿರಂಗಪಡಿಸುತ್ತೇವೆ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ.’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರಾದ ರಾಮಲಿಂಗಾರೆಡ್ಡಿ, ಪ್ರಿಯಾಂಕ್‌ ಖರ್ಗೆ, ಈಶ್ವರ್‌ ಖಂಡ್ರೆ, ಶರಣ್‌ ಪ್ರಕಾಶ್‌ ಪಾಟೀಲ್‌ ಮತ್ತಿತರ ನಾಯಕರು ಚುನಾವಣಾ ಆಯೋಗದ ವಿರುದ್ಧವೂ ಆಕ್ರೋಶ ಹೊರಹಾಕಿದರು. ಚುನಾವಣಾ ಆಯೋಗ ಮತಗಳ್ಳತನದ ಆರೋಪಕ್ಕೆ ಸಂಬಂಧಿಸಿ ದಾಖಲೆ, ಮಾಹಿತಿ ನೀಡಿ ಸಿಒಡಿ ತನಿಖೆಗೆ ಸಹಕರಿಸದೆ ಬಿಜೆಪಿಯವರ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ದೂರಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ದೇಶದಲ್ಲಿ ಬಿಜೆಪಿ ಜನಪ್ರಿಯತೆ ಕಡಿಮೆ ಆಗಿದ್ದರಿಂದ ಮತಗಳ್ಳತನದಿಂದ ಅಧಿಕಾರಕ್ಕೆ ಬರುವ ಕೆಲಸಕ್ಕಿಳಿದಿದ್ದಾರೆ. ಎಲ್ಲೆಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದೆ ಅಲ್ಲೆಲ್ಲ ಇಂತಹ ಅಕ್ರಮ ಪ್ರಯೋಗ ನಡೆಸುತ್ತಿದ್ದಾರೆ. ನ್ಯಾಯಯುತವಾಗಿ ಕಳೆದ ಲೋಕಸಭಾ ಚುನಾವಣೆ ನಡೆದಿದ್ದರೆ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದರು.

ಮಾಹಿತಿ ಹೊರಬಂದ್ರೆ ಸರ್ಕಾರ ಪತನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ, ನನಗೆ 100 ಪರ್ಸೆಂಟ್‌ ಮಾಹಿತಿ ಇದೆ. ಈ ಮತಗಳ್ಳತನ ಬಿಜೆಪಿಯವರೇ ಮಾಡುತ್ತಿರುವುದು. ಇದಕ್ಕೆ ನನ್ನ ಬಳಿ ಅಧಿಕೃತ ದಾಖಲೆಯೂ ಇದೆ. ಆದರೆ, ಆಯೋಗದಿಂದಲೇ ಇದು ಹೊರಬರಬೇಕು. ಸಮಯ ಬಂದಾಗ ನಾವೂ ಇದನ್ನು ಬಹಿರಂಗಪಡಿಸುತ್ತೇವೆ. ಆಳಂದ ಮತಗಳವು ಪ್ರಕರಣ ದಾಖಲಾಗಿ ಎರಡು ವರ್ಷ ಕಳೆದರೂ ಚುನಾವಣಾ ಆಯೋಗ ಮಾಹಿತಿ ನೀಡಿ ಸಿಒಡಿ ತನಿಖೆಗೆ ಸಹಕರಿಸುತ್ತಿಲ್ಲ. ಕೆಲ ಶಕ್ತಿಗಳನ್ನು ರಕ್ಷಿಸು ಕೆಲಸ ನಡೆಯುತ್ತಿದೆ. ಈ ಮಾಹಿತಿ ಹೊರಬಂದರೆ ಕೇಂದ್ರ ಸರ್ಕಾರವೇ ಬಿದ್ದು ಹೋಗುತ್ತದೆ ಎಂದರು.

ರಾಹುಲ್‌ ಜೊತೆ ಇದ್ದೇವೆ

ಸಚಿವರಾದ ಈಶ್ವರ್‌ ಖಂಡ್ರೆ ಮತ್ತು ಶರಣ್‌ ಪ್ರಕಾಶ್‌ ಪಾಟೀಲ್‌, ರಾಹುಲ್‌ ಗಾಂಧಿ ಅವರು ಮಾಡಿರುವ ಮತಗಳ್ಳತನದ ಆರೋಪ ಸತ್ಯವಾದದ್ದು. ನಾವು ಅವೆಲ್ಲರೂ ಅವರೊಂದಿಗಿದ್ದೇವೆ. ಈ ಅಕ್ರಮದ ವಿರುದ್ಧ ಕಾಂಗ್ರೆಸ್‌ನ ನನ್ನ ಮತ ನನ್ನ ಹಕ್ಕು ಅಭಿಯಾನ ದೇಶಾದ್ಯಂತ ಮುಂದುವರೆಯಲಿದೆ. ಬಿಜೆಪಿ ಕುತಂತ್ರ ಬಯಲಾಗಲಿದೆ. ರಾಹುಲ್ ಗಾಂಧಿ ಅವರ ಕೈ ಬಲಪಡಿಸಿ ಮತ್ತೆ ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ