ರೈತರಿಗೆ ಕೊಟ್ಟ ಎಲ್ಲ ನೋಟಿಸ್ ವಾಪಸ್: ಸಚಿವ ಜಮೀರ್ ಅಹಮ್ಮದ್

Published : Nov 04, 2024, 07:15 AM IST
ರೈತರಿಗೆ ಕೊಟ್ಟ ಎಲ್ಲ ನೋಟಿಸ್ ವಾಪಸ್: ಸಚಿವ ಜಮೀರ್ ಅಹಮ್ಮದ್

ಸಾರಾಂಶ

ರೈತರಿಗೆ ತೊಂದರೆ ಕೊಡಬೇಕು ಎಂಬ ಉದ್ದೇಶವಿಲ್ಲ. ರೈತರು ಆತಂಕ ಪಡುವುದು ಬೇಡ, ರೈತರಿಗೆ ತೊಂದರೆ ಆಗಲ್ಲ ಎಂದು ವಕ್ಫ್‌ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. 

ವಿಜಯಪುರ (ನ.04): ರೈತರಿಗೆ ತೊಂದರೆ ಕೊಡಬೇಕು ಎಂಬ ಉದ್ದೇಶವಿಲ್ಲ. ರೈತರು ಆತಂಕ ಪಡುವುದು ಬೇಡ, ರೈತರಿಗೆ ತೊಂದರೆ ಆಗಲ್ಲ ಎಂದು ವಕ್ಫ್‌ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ವಕ್ಫ್‌ ನೋಟಿಸ್ ವಾಪಸ್ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿರುವ ವಿಚಾರಕ್ಕೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರೈತರಿಗೆ ನೀಡಿದ ಎಲ್ಲ ನೋಟಿಸ್ ವಾಪಸ್ ಪಡೆಯುತ್ತಿದ್ದೇವೆ. ವಕ್ಫ್‌ ಅಧಿಕಾರಿಗಳಿಗೆ ಸೆಕ್ರೆಟರಿಗಳು ನೋಟಿಸ್ ವಾಪಸ್ ಪಡೆಯುವಂತೆ ಹೇಳಿದ್ದಾರೆ. ನನಗೂ ಮಾಹಿತಿ ಬಂದಿದೆ, ರೈತರಿಗೆ ಕೊಟ್ಟ ಎಲ್ಲ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ವಕ್ಫ್ ವಿಚಾರದಲ್ಲಿ ಬಿಜೆಪಿಯವರು ಅನಾವಶ್ಯಕವಾಗಿ ಗೊಂದಲ ಸೃಷ್ಟಿ ಮಾಡಿದ್ದಾರೆ. ಬಿಜೆಪಿಯವರಿಗೆ ಬೇರೆ ಯಾವುದೇ ವಿಷಯವಿಲ್ಲ. ಮುಡಾ ಹೋಯ್ತು ಈಗ ವಕ್ಫ್ ಬಂದಿದೆ. ಮುಡಾದಲ್ಲಿ ಏನಿಲ್ಲ ಎಂದು ಗೊತ್ತಾಯ್ತು, ಈಗ ವಕ್ಫ್ ಹಿಡಿದುಕೊಂಡಿದ್ದಾರೆ ಎಂದರು. ಈಗ ರಾಜ್ಯದಲ್ಲಿ ಬೈ ಎಲೆಕ್ಷನ್ ಇದೆ, ಮಹಾರಾಷ್ಟ್ರದಲ್ಲಿ ಚುನಾವಣೆ ಇದೆ. ಪೊಲಿಟಿಕಲ್ ಗಿಮಿಕ್‌ಗಾಗಿ ಇದನ್ನೆಲ್ಲ ಮಾಡುತ್ತಿದ್ದಾರೆ. ರಾಜಕೀಯ ಮಾಡುವ ಹಾಗಿದ್ದರೆ ನಮ್ಮ ಜೊತೆ ಮಾಡಿ, ಜನರ ದಾರಿ ತಪ್ಪಿಸಬೇಡಿ. ಉಪಚುನಾವಣೆ ಬಳಿಕ ಡಿಕೆಶಿ ಸಿಎಂ ಆಗಲಿದ್ದಾರೆ ಎಂಬ ಕೆಲ ಕಾಂಗ್ರೆಸ್ ನಾಯಕರ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಕೆಲವರು ಅವರವರ ಅಭಿಪ್ರಾಯ ಹೇಳುತ್ತಾರೆ, ನನ್ನ ಅಭಿಪ್ರಾಯ ನಾನು ಹೇಳಿರುವೆ. ಸಿಎಂ ಸ್ಥಾನದಲ್ಲಿ ಟಗರು ಕೂತಿದೆ ಅವರನ್ನು ಅಲ್ಲಾಡಿಸಲು ಆಗಲ್ಲ ಎಂದರು.

ವಕ್ಫ್ ನೋಟಿಸ್‌ ವಾಪಸ್‌ಗೆ ಸೂಚಿಸಿದ ಮೇಲೂ ಬಿಜೆಪಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ

41 ಮೋನೋಮೆಂಟ್ ಗೆ ವಕ್ಫ್ ಬೋರ್ಡ್ ನೋಟಿಸ್ ವಿಚಾರ: ಗೋಲಗುಂಬಜ್ ಅವರಿಗೆ ಬಿಟ್ಟು ಕೊಟ್ಟಿದ್ದೇವೆ. ಗೋಲಗುಂಜ್ ಅನ್ನು ಕೇಂದ್ರದವರು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾವು ಯಾರಿಗೂ ನೋಟಿಸ್ ಕೊಟ್ಟಿಲ್ಲ. ರೈತರ ಆಸ್ತಿ‌ಯನ್ನು ನಾವು ಮುಟ್ಟಲ್ಲ, ಆದರೆ ದಾನಿಗಳು ದಾನ ಮಾಡಿರುವ ಆಸ್ತಿ‌ ಅತಿಕ್ರಮಣ ಮಾಡಿದ್ದರೆ ನಾವು ಬಿಡಲ್ಲ. ವಕ್ಫ್ ಆಸ್ತಿಯನ್ನ ಶೇ.90 ರಷ್ಟು ಮುಸ್ಲಿಂರೇ ಒತ್ತುವರಿ ಮಾಡಿಕೊಂಡಿದ್ದಾರೆ. ಆ ಆಸ್ತಿಯನ್ನು ಮರಳಿ ಪಡೆಯುವ ಕೆಲಸ ಮಾಡುತ್ತೇನೆ. ಬೀದರ್‌ನಲ್ಲಿ ಅತಿಕ್ರಮಣ ಮಾಡಿದ್ದ 4 ಆಸ್ತಿಗಳನ್ನು ವಾಪಸ್ ಪಡೆದಿದ್ದೇವೆ, ಹಾಗೆ ಒತ್ತುವರಿ ಆಗಿದ್ದನ್ನು ವಾಪಸ್ ಪಡೆಯುತ್ತೇವೆ. ಒತ್ತುವರಿ ಮಾಡಿ‌ರುವವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳಲ್ಲ, ಮೊದಲು ನಮ್ಮ ಆಸ್ತಿ ವಾಪಸ್ ಪಡೆಯತ್ತೇವೆ ಎಂಬುದಾಗಿ ತಿಳಿಸಿದರು.

ಗ್ಯಾರಂಟಿ ಯೋಜನೆ ಸ್ಥಗಿತ ವಿಚಾರ: ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿ ವಾಪಸ್ ಸ್ಥಗಿತ ಮಾಡಲ್ಲ. ಲೋಕಸಭಾ ಚುನಾವಣೆ ಮೇಲೆ ಗ್ಯಾರಂಟಿ ಪರಿಣಾಮ ಬೀರಲ್ಲ. ಆಗ ಕೆಲ ನಾಯಕರು ಗ್ಯಾರಂಟಿ ತಗೆಯಿರಿ ಎಂದರು. ಆಗ ಸಿಎಂ ಸಿದ್ದರಾಮಯ್ಯನವರು ನಾನಿರುವವರೆಗೆ ಸರ್ಕಾರ ಇರುವ ವರೆಗೆ ಗ್ಯಾರಂಟಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳುದ್ದಾಗಿ ತಿಳಿಸಿದರು.

ವಕ್ಫ್‌ ಬಗ್ಗೆ ಜೋಶಿಗೆ ಬುದ್ದಿ ಇರಬೇಕು: ಅಲ್ಲಾನ ಆಸ್ತಿ ಎಲ್ಲಿಂದ ಬಂತು ಎಂಬ ಕೇಂದ್ರ ಸಚಿವ ಜೋಶಿ ಹೇಳಿಕೆ ವಿಚಾರಕ್ಕೆ ಉತ್ತರ ನೀಡಿ,ವಕ್ಫ್ ಬಗ್ಗೆ ಅವರಿಗೆ ಬುದ್ದಿ ಇರಬೇಕು, ವಕ್ಫ್ ಎಂದರೆ ಅಲ್ಲಾನ ಆಸ್ತಿ ಎನ್ನುತ್ತೇವೆ. ಇದು ಜೋಶಿ ಕೊಟ್ಟ ಆಸ್ತಿಯೇನಲ್ಲ, ಸರ್ಕಾರದಿಂದ ಕೊಟ್ಟ ಆಸ್ತಿಯೂ ಅಲ್ಲ. ಇದು ದಾನಿಗಳು ದಾನ ಮಾಡಿರುವ ಆಸ್ತಿಯಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಇದ್ದಾಗ ವಕ್ಫ್ ಆಸ್ತಿ ಅತಿಕ್ರಮಣ ಆಗುತ್ತಿದೆ ಎಂದು ಕಾರ್ಯಕ್ರಮದಲ್ಲಿ ಮಾತಾನಾಡಿದ್ದರು. ಹಾಗಿದ್ದರೆ ಬಸವರಾಜ ಬೊಮ್ಮಾಯಿ ಯಾಕೆ ಹಾಗೆ ಹೇಳುತ್ತಿದ್ದರು?. ವಕ್ಫ್ ಇರಲಿ, ಮುಜರಾಯಿ ಇರಲಿ ಎಲ್ಲವೂ ದೇವರ ಆಸ್ತಿ. ಮುಜರಾಯಿ ಇಲಾಖೆಯದ್ದು 36 ಸಾವಿರ ಎಕರೆ ಇದೆ. ಅದರಲ್ಲೂ 800 ಎಕರೆ ಅತಿಕ್ರಮಣವಾಗಿದೆ. ಇದನ್ನು ಬಿಜೆಪಿಯ ಬಸವರಾಜ ಬೊಮ್ಮಾಯಿಯವರೇ ಹೇಳಿಕೆ ನೀಡಿದ್ದಾರೆ. ಅವರು ಸಿಎಂ ಇದ್ದಾಗಲೇ ಈ ವಿಚಾರವಾಗಿ ಹೇಳಿದ್ದಾರೆ ಎಂದು ಜಮೀರ್‌ ತಿಳಿಸಿದರು.

ಶಾಸಕ ಯತ್ನಾಳ್‌ ಏನು ಮಾತಾಡುತ್ತಾರೋ ಭಗವಂತನೇ ಬಲ್ಲ: ವಿಜಯೇಂದ್ರ

ಹೊನವಾಡದಲ್ಲಿ 11ಎಕರೆ ಮಾತ್ರ ವಕ್ಫ್ ಆಸ್ತಿ ಇದೆ, 1,200 ಎಕರೆ ಇದೆ ಅಂತಾ ಹೇಳಿದ್ದಾರೆ. ಅಲ್ಲಿ ಯಾರಿಗೂ ನೋಟಿಸ್ ನೀಡಿಲ್ಲ. ಬಿಜೆಪಿ ಸರ್ಕಾದಲ್ಲೂ ವಕ್ಫ್ ನೋಟಿಸ್ ನೀಡಲಾಗಿದೆ. ವಕ್ಫ್‌ದಲ್ಲಿ ಒಂದು ಇಂಚು ಸರ್ಕಾರದ್ದಿಲ್ಲ ಇಲ್ಲ. ರಾಜ್ಯದಲ್ಲಿರುವ 1.12 ಲಕ್ಷ ಎಕರೆ ವಕ್ಫ್ ಆಸ್ತಿ ದಾನಿಗಳು ನೀಡಿರುವುದು. ಅದರಲ್ಲಿ 80 ಸಾವಿರ ಎಕರೆ ಅತಿಕ್ರಮಣವಾಗಿದೆ. ಕೇವಲ 33 ಸಾವಿರ ಎಕರೆ ವಕ್ಫ್ ಬೋರ್ಡ್ ಕೈಯಲ್ಲಿದೆ, ಅದನ್ನು ಉಳಿಸುವ ಕೆಲಸ ಮಾಡುತ್ತಿದ್ದೇನೆ.
-ಜಮೀರ್‌ ಅಹ್ಮದ್‌ಖಾನ್, ವಕ್ಫ್‌ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ