
ಹಾಸನ(ಜ.15): ‘ಜೆಡಿಎಸ್ ಬಗ್ಗೆ ಮಾತನಾಡಲ್ಲ, ಏಕೆಂದರೆ ಅದು ಜೋಕರ್ ಇದ್ದಂಗೆ. ಅವರು ಅಧಿಕಾರಕ್ಕೆ ಬರಲ್ಲ’ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವ್ಯಂಗ್ಯಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಗರಂ ಆಗಿದ್ದಾರೆ.
ಹಾಗಿದ್ದ ಮೇಲೆ ಅವರು ಜೆಡಿಎಸ್ನಿಂದ ಬಂದವರನ್ನು ಏಕೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇಂಥವರ ಮಾತನ್ನು ನಂಬಿಕೊಂಡು ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ಗೆ ಹೋಗುತ್ತೇನೆ ಎಂದರೆ ಹೋಗಲಿ ಬಿಡಿ, ನಾನೇನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಬಿಜೆಪಿಯಂಥ ಭ್ರಷ್ಟ ಸರ್ಕಾರವನ್ನು 4 ದಶಕದಲ್ಲೇ ನೋಡಿಲ್ಲ: ಸಿದ್ದರಾಮಯ್ಯ ಕಿಡಿ
ಜೆಡಿಎಸ್ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಎ.ಟಿ.ರಾಮಸ್ವಾಮಿ ಹಾಗೂ ವೈ.ಎಸ್.ವಿ. ದತ್ತ ಅವರು ಪಕ್ಷ ಬಿಡುವುದಾಗಿ ಈವರೆಗೂ ನನ್ನ ಬಳಿ ಹೇಳಿಲ್ಲ. ಆದರೆ, ಪಕ್ಷ ಬಿಡುವುದಿಲ್ಲ ಎಂದು ನನ್ನ ಬಳಿ ಹೇಳಿಕೊಂಡಿದ್ದಾರೆ. ವೈ.ಎಸ್.ವಿ.ದತ್ತ ಅವರಿಗೆ ನಮ್ಮ ಪಕ್ಷದಲ್ಲಿ ಎಂಎಲ್ಸಿ, ಎಂಎಲ್ಎ ಎಲ್ಲಾ ಅಧಿಕಾರಗಳನ್ನು ನೀಡಲಾಗಿತ್ತು. ಇದೀಗ ಕಾಂಗ್ರೆಸ್ ಕಡೆ ಅವರಿಗೆ ಒಳಿತಾಗುವುದಿದ್ದರೆ ಹೋಗಲಿ. ಯಾರಾರಯರು ಜೆಡಿಎಸ್ ತೊರೆಯಲು ಹೊರಟಿದ್ದಾರೋ ಅವರಿಗೆಲ್ಲಾ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.