ಅರ್ಜುನನಾಗಿ ಬರಬೇಕಿತ್ತು, ಕೃಷ್ಣನಾಗಿ ಬಂದಿದ್ದೇನೆ: ಶಂಕರ್‌

Published : Nov 18, 2019, 12:08 PM IST
ಅರ್ಜುನನಾಗಿ ಬರಬೇಕಿತ್ತು, ಕೃಷ್ಣನಾಗಿ ಬಂದಿದ್ದೇನೆ: ಶಂಕರ್‌

ಸಾರಾಂಶ

ಕಾವೇರಿದ ಚುನಾವಣಾ ಕಣ| ಮತದಾರನ ಓಲೈಕೆಗಾಗಿ ರಾಜಕೀಯ ನಾಯಕರ ಕಸರತ್ತು| ಅರ್ಜುನನಾಗಿ ಬರಬೇಕಿತ್ತು, ಕೃಷ್ಣನಾಗಿ ಬಂದಿದ್ದೇನೆ: ಶಂಕರ್‌

ರಾಣೆಬೆನ್ನೂರು[ನ.18]: ನಾನು ಅರ್ಜುನನಾಗಿ ಯುದ್ಧಕ್ಕೆ ಬರಬೇಕಿತ್ತು. ಆದರೆ, ಶ್ರೀಕೃಷ್ಣನಾಗಿ ಚುನಾವಣೆಗೆ ಬಂದಿದ್ದೇನೆ. ಒಂದು ತಪ್ಪಿನಿಂದ ಹೀಗಾಗಿದ್ದು, ಕ್ಷೇತ್ರದ ಜನರ ಕ್ಷಮೆ ಕೋರುತ್ತೇನೆ. ಎಲ್ಲರೂ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದು ಅನರ್ಹ ಶಾಸಕ, ಮಾಜಿ ಸಚಿವ ಆರ್‌.ಶಂಕರ್‌ ಹೇಳಿದರು.

ರಾಣಿಬೆನ್ನೂರಿನ ತಮ್ಮ ನಿವಾಸದಲ್ಲಿ ಬೆಂಬಲಿಗರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನಾನು ಚುನಾವಣೆಗೆ ಹೆದರಿ ಸ್ಪರ್ಧೆಯಿಂದ ಹಿಂದಕ್ಕೆ ಸರಿದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್‌ ಸೂಚನೆಗೆ ತಲೆಬಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ನಿರ್ಧಾರದಿಂದ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದರು.

ಕ್ಷೇತ್ರದ ಅಭಿವೃದ್ಧಿ ಸಲುವಾಗಿ ಬಿಜೆಪಿ ಸೇರಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದ ಕಾರಣ ಅನರ್ಹತೆ ಆಗುವುದಿಲ್ಲ ಎಂದು ಭಾವಿಸಿದ್ದೆ. ಆದರೆ, ಸುಪ್ರೀಂ ಕೋರ್ಟ್‌ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು. ನಾನು ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದ್ದು, ಕಾರ್ಯಕರ್ತರ ಒತ್ತಾಯದಂತೆ ಮುಖ್ಯಮಂತ್ರಿ ಬಳಿ ಬಿ ಫಾರಂ ಕೊಡಬೇಕು ಎಂದು ಒತ್ತಾಯ ಮಾಡಿದೆ. ಆದರೆ, ಮುಖ್ಯಮಂತ್ರಿಗಳು ನನ್ನನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಿ, ಮಂತ್ರಿ ಮಾಡುವ ಭರವಸೆ ನೀಡಿದ್ದಾರೆ. ಹೀಗಾಗಿ ಎಲ್ಲರೂ ಸೇರಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದು ಮನವಿ ಮಾಡಿದರು.

ಕೆಪಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ನಾನು ಬಿಜೆಪಿ ಸೇರಿರುವುದರಿಂದ ಕೆಪಿಜೆಪಿ ಕಾರ್ಯಕರ್ತರು ಬಿಜೆಪಿ ಸೇರಬೇಕು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರಲ್ಲೇ ಮಾತನಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯ ಹಿಂದಿನ ರಹಸ್ಯವೇನು?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ