ಲೋಕಸಭೆಗೆ ಸ್ಪರ್ಧೆ ಇಲ್ಲ, ರಾಜ್ಯ ರಾಜಕಾರಣದಲ್ಲೇ ಇರುವೆ: ಸಿದ್ದರಾಮಯ್ಯ

Published : Feb 26, 2019, 09:05 AM IST
ಲೋಕಸಭೆಗೆ ಸ್ಪರ್ಧೆ ಇಲ್ಲ, ರಾಜ್ಯ ರಾಜಕಾರಣದಲ್ಲೇ ಇರುವೆ: ಸಿದ್ದರಾಮಯ್ಯ

ಸಾರಾಂಶ

ದಲಿತರಿಗೆ ಅನ್ಯಾಯ ಬಗ್ಗೆ ಪರಂಗೇ ಕೇಳಿ: ಸಿದ್ದರಾಮಯ್ಯ| ಲೋಕಸಭೆಗೆ ಸ್ಪರ್ಧೆ ಇಲ್ಲ, ರಾಜ್ಯ ರಾಜಕಾರಣದಲ್ಲೇ ಇರುವೆ

 ಹುಬ್ಬಳ್ಳಿ[ಫೆ.26]: ‘ಕಾಂಗ್ರೆಸ್‌ನಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಯಾವ ಮನಸ್ಥಿತಿಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಪರಮೇಶ್ವರ್‌ ಹೇಳಿಕೆ ಬಗ್ಗೆ ಕೇಳಿದಾಗ, ಪರಮೇಶ್ವರ ಅವರಿಗೆ ಕೇಳಿ ಎಂದರು. ಇದೇವೇಳೆ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಹೈಕಮಾಂಡ್‌ ನನಗೆ ಲೋಕಸಭಾ ಚುನಾವಣೆಗೆ ನಿಲ್ಲುವಂತೆ ಹೇಳುವುದಿಲ್ಲ ಎಂದು ತಿಳಿಸಿದರು.

ಸುಮಲತಾ ಸ್ಪರ್ಧೆ ನಿರ್ಧಾರವಾಗಿಲ್ಲ:

ಸುಮಲತಾ ಅಂಬರೀಷ್‌ ಮಂಡ್ಯದಿಂದ ಸ್ಪರ್ಧಿಸುವ ವಿಚಾರವಾಗಿ ನನ್ನನ್ನು ಭೇಟಿ ಮಾಡಿದ್ದರು. ಆದರೆ, ಈವರೆಗೂ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ವಿಷಯವಾಗಿ ಸೀಟು ಹಂಚಿಕೆಯಾಗಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ. ಆದರೆ ಮೈತ್ರಿಯಿಂದಲೇ ಚುನಾವಣೆ ಎದುರಿಸುತ್ತೇವೆ ಎಂದರು.

ಎಸ್‌ಐಟಿ ನನ್ನ ಪಾತ್ರವಿಲ್ಲ:

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಕೇಳಿ ಬಂದಿರುವ ಆಪರೇಷನ್‌ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ರಚನೆ ಮಾಡಿರುವುದು ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಂಡಂತಹ ನಿರ್ಧಾರ. ಅದರಲ್ಲಿ ನನ್ನ ಪಾತ್ರವೇನು ಇಲ್ಲ ಎಂದು ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?