ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲ, ಕುತೂಹಲವೂ ಇಲ್ಲ: 'ಅರ್ಹ' ಶಾಸಕನ ಅಚ್ಚರಿಯ ಹೇಳಿಕೆ!

Published : Jan 16, 2020, 09:06 AM ISTUpdated : Jan 16, 2020, 09:17 AM IST
ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲ, ಕುತೂಹಲವೂ ಇಲ್ಲ: 'ಅರ್ಹ' ಶಾಸಕನ ಅಚ್ಚರಿಯ ಹೇಳಿಕೆ!

ಸಾರಾಂಶ

ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲ, ಕುತೂಹಲವೂ ಇಲ್ಲ| ವಿಜಯನಗರ ಜಿಲ್ಲೆ ರಚನೆಯ ಅಧಿಕೃತ ಆದೇಶ ಆದಷ್ಟುಬೇಗ ಹೊರಬೀಳಲೆಂದು ಕಾಯುತ್ತಿರುವೆ

ಕೊಟ್ಟೂರು[ಜ.16]: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುತೂಹಲ ನನಗೆ ಕಾಡುತ್ತಿಲ್ಲ. ಬದಲಾಗಿ ವಿಜಯನಗರ ಜಿಲ್ಲೆ ರಚನೆಯ ಅಧಿಕೃತ ಆದೇಶ ಆದಷ್ಟುಬೇಗ ಹೊರಬೀಳಲೆಂದು ಕಾಯುತ್ತಿರುವೆ ಎಂದು ಹೊಸಪೇಟೆ ಶಾಸಕ ಆನಂದ್‌ ಸಿಂಗ್‌ ಹೇಳಿದರು.

ಉಜ್ಜಯಿನಿಯ ಸದ್ದರ್ಮಪೀಠದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗುವ ಅವಶ್ಯಕತೆಯೂ ನನ​ಗಿ​ಲ್ಲ. ಸಚಿವ ಸಂಪುಟ ವಿಸ್ತ​ರಣೆ ಯಾವಾಗ ನಡೆ​ಯ​ಲಿದೆ ಎಂದು ನಾನು ಹೇಳಲಾರೆ. ಈ ವಿಷಯ ಕುರಿತು ದಿನಾಂಕ ನಿಗದಿ ಮಾಡಲು ಮುಖ್ಯಮಂತ್ರಿ ಮತ್ತು ಬಿಜೆಪಿ ವರಿಷ್ಠ ಮಂಡಳಿ ತೀರ್ಮಾನ ಕೈಗೊಳ್ಳಲಿದೆ ಎಂದ​ರು.

ವಿಜಯನಗರ ಜಿಲ್ಲೆಗೆ ಶಾಸಕ ಸಿಂಗ್‌ ಆಗ್ರಹ: ಸಿಎಂ ಮೌನ, ಹುಸಿಯಾದ ನಿರೀಕ್ಷೆ

ವಿಜಯನಗರ ಜಿಲ್ಲೆ ರಚನೆಗೆ ಈ ಹಿಂದೆ ಸಿಎಂ ಯಡಿಯೂರಪ್ಪ ಬಳಿ ನಿಯೋಗ ಒಯ್ದು ಮನವಿ ಪತ್ರ ಸಲ್ಲಿಸಿದ್ದೆ. ಜಿಲ್ಲೆ ರಚನೆ ವಿಷಯ ಇಷ್ಟೊಂದು ಮಹತ್ವ ಪಡೆಯಲು ಉಜ್ಜಯಿನಿ ಜಗದ್ಗುರುಗಳು ನಿಯೋಗದ ನೇತೃತ್ವ ವಹಿಸಿದ್ದೇ ಪ್ರಬಲ ಕಾರಣ.

ಜಗದ್ಗುರುಗಳ ಒತ್ತಾಸೆಯಿಂದ ಮುಖ್ಯಮಂತ್ರಿ ಕೂಡಲೇ ಬಳ್ಳಾರಿ ಜಿಲ್ಲಾಧಿಕಾರಿಗಳ ಮೂಲಕ ವಿಜಯನಗರ ಜಿಲ್ಲೆ ರಚನೆಯ ಪೂರಕ ಮಾಹಿತಿಗಳನ್ನು ಪಡೆದು ಆದೇಶ ಹೊರಡಿಸುವುದಾಗಿ ಮಾತು ಕೊಟ್ಟಿದ್ದರು. ಈಗಾಗಲೇ ಜಿಲ್ಲಾಡಳಿತ ಮತ್ತು ನಾನು ಇದಕ್ಕೆ ಸಂಬಂಧಿಸಿದ ಪೂರಕ ಮಾಹಿತಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದರು.

ಮಂತ್ರಿಗಿರಿ, ವಿಜಯನಗರ ಜಿಲ್ಲೆ ಎರಡನ್ನೂ ಪಡೆಯುತ್ತೇನೆ: ಆನಂದ ಸಿಂಗ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ