ದಲಿತರಿಗೆ ಕಾಂಗ್ರೆಸ್ ಕೊಟ್ಟ ಕೊಡಗೆ ಎಂದರೆ ಅಂಬೇಡ್ಕರ್‌ಗೆ ಅವಮಾನಿಸಿದ್ದು ಚುನಾವಣೇಲಿ ಕುತಂತ್ರದಿಂದ ಸೋಲಿಸಿದ್ದು: ಸಂಸದ ಜಿಗಜಿಣಗಿ

Published : Dec 29, 2024, 03:47 PM IST
ದಲಿತರಿಗೆ ಕಾಂಗ್ರೆಸ್ ಕೊಟ್ಟ ಕೊಡಗೆ ಎಂದರೆ ಅಂಬೇಡ್ಕರ್‌ಗೆ ಅವಮಾನಿಸಿದ್ದು ಚುನಾವಣೇಲಿ ಕುತಂತ್ರದಿಂದ ಸೋಲಿಸಿದ್ದು: ಸಂಸದ ಜಿಗಜಿಣಗಿ

ಸಾರಾಂಶ

ಕಾಂಗ್ರೆಸ್ ದಲಿತರನ್ನು ವೋಟಿಗಾಗಿ ಬಳಸಿಕೊಂಡಿದೆ ಮತ್ತು ಅವರ ಉದ್ಧಾರಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ. ಅಮಿತ್ ಶಾ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿದ ಜಿಗಜಿಣಗಿ, ಕಾಂಗ್ರೆಸ್‌ನ ಮೊಸಳೆ ಕಣ್ಣೀರಿಗೆ ಜನರು ಮರುಳಾಗಬಾರದು ಎಂದು ಹೇಳಿದರು.

ವಿಜಯಪುರ (ಡಿ.29): ದಲಿತರ ಪರವಾಗಿದ್ದೇವೆ ಎಂದು ಹೇಳುವ ಕಾಂಗ್ರೆಸ್‌ನವರು ದಲಿತರ ಸಲುವಾಗಿ ಮೊಸಳೆ ಕಣ್ಣೀರು ಹಾಕುವ ಪ್ರವೃತ್ತಿ ರೂಢಿಸಿಕೊಂಡಿದೆ. ದಲಿತರಿಗೆ ಕಾಂಗ್ರೆಸ್ ಕೊಟ್ಟ ಕೊಡುಗೆ ಏನು? ದಲಿತರ ಉದ್ಧಾರ ಮಾಡುತ್ತೇವೆ ಎಂದು ಬಾಯಲ್ಲಿ ಹೇಳಿದ್ದೇ ಬಂತು, ಇದುವರೆಗೂ ಏನೂ ಮಾಡಲಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದಲಿತರನ್ನು ವೋಟಿಗಾಗಿ ಉಪಯೋಗ ಮಾಡಿಕೊಂಡಿದ್ದು, ದಲಿತರಿಗೆ ಏನನ್ನು ಮಾಡದೆ, ಹೀನಾಯವಾಗಿ ನಡೆಸಿಕೊಳ್ಳುತ್ತ ಬಂದಿದೆ. ಡಾ.ಅಂಬೇಡ್ಕರಿಗೆ ಅವಮಾನ ಮಾಡಿದ್ದಲ್ಲದೇ, ಅಂಬೇಡ್ಕರ ಅವರನ್ನು ಸೋಲಿಸಿದವರಿಗೆ ಪ್ರಶಸ್ತಿ ಕೊಟ್ಟರು. ಇದೀಗ ದೊಡ್ಡದಾಗಿ ದಲಿತರ ಪರ ಎಂದು ಮೊಸಳೆ ಕಣ್ಣೀರು ಸುರಿಸುವುದನ್ನು ಬಿಡಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ತಿರುಚಿ ಅವರು ರಾಜೀನಾಮೆ ಕೊಡಬೇಕು ಎಂದು ಹೇಳುವ ಇವರ ನಾಟಕ ಬಹಳ‌ ದಿನ ನಡೆಯಲ್ಲ. ಕಾಂಗ್ರೆಸ್ ಮೊಸಳೆ ಕಣ್ಣೀರಿಗೆ ಜನರು ಮನಸೋಲಬಾರದು ಎಂದು ಜಿಗಜಿಣಗಿ ಮನವಿ ಮಾಡಿದರು. ಕಾಂಗ್ರೆಸ್ ನವರು ಒಳಸಂಚಿನಿಂದ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚಿ ಹೇಳುವ ಕೆಲಸ ಮಾಡುತ್ತಿದ್ದಾರೆ. ಅಂಬೇಡ್ಕರ ಅವರ ಅಂತಿಮ ಸಂಸ್ಕಾರಕ್ಕೆ ಆರು ಅಡಿ ಜಾಗ ಕೊಡದೆ, ಈಗ ದಲಿತರ ಪರ ಮಾತನಾಡುವ ಕಾಂಗ್ರೆಸ್‌ನವರಿಗೆ ನಾಚಿಕೆ ಆಗಬೇಕು ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಯಾವತ್ತೂ ಅಂಬೇಡ್ಕರ್‌ಗೆ ಒಳ್ಳೆಯದು ಬಯಸಿಲ್ಲ: ಸಂಸದ ಗದ್ದಿಗೌಡರ್ ಕಿಡಿ

ನಾನು ಮನಮೋಹನ ಸಿಂಗ್ ಕಾಲಿಗೆ ಬಿದ್ದಿದ್ದೆ:

ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಸಂಸದ ರಮೇಶ ಜಿಗಜಿಣಗಿ, ಮನಮೋಹನಸಿಂಗ್ ಅವರು ತುಂಬಾ ಒಳ್ಳೆಯವರು, ಅವರನ್ನು ಯಾರ್‍ಯಾರೋ ಯಾವುದೋ ರೀತಿ ಬಳಸಿಕೊಂಡರು. ಅವರು ದೇಶಕ್ಕೆ ಆರ್ಥಿಕ ನೀತಿಯ ಹಾದಿ ಹಾಕಿ ಕೊಟ್ಟವರು.

ದೇಶಕ್ಕೆ ಆರ್ಥಿಕ ನೀತಿ ಹಾಕಿ ಕೊಟ್ಟವರು ಮಾಜಿ ಪ್ರಧಾನಿ ಮನಮೋಹನಸಿಂಗ್. ಇವರಿಗೆ ಭಾರತ ರತ್ನ ಕೊಡ್ತಾರೆ ಎಂದರೆ ನಾನು ಸಪೋರ್ಟ್ ಮಾಡುತ್ತೇನೆ, ಇಂದಲ್ಲ ನಾಳೆ‌ ಅವರಿಗೆ ಭಾರತರತ್ನ ಕೊಟ್ಟೆ ಕೊಡುತ್ತಾರೆ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕುಚಬಾಳ ಮಾತನಾಡಿ, ಅಂಬೇಡ್ಕರ ಅವರ ಬಗ್ಗೆ ನಿರಂತರ ಅವಮಾನಗಳನ್ನ, ಅಪಮಾನ ಮಾಡಿಕೊಂಡು ಬಂದಿರುವ ಕಾಂಗ್ರೆಸ್ ಇಂದು ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಅಮಿತ್ ಶಾ ಅವರ ಹೇಳಿಕೆ ತಿರುಚಿ ಹೀಗೆ ಹೆಸರು ಹಾಳು ಮಾಡುತ್ತಿದ್ದಾರೆ. ಅಂಬೇಡ್ಕರ ಅವರನ್ನು ಜೀವಿತಾವಧಿಯಲ್ಲಿ ಹಾಗೂ ನಿಧನದ ಬಳಿಕ ಅವರ ಬಗ್ಗೆ ಇವರು ಮಾಡಿದ ವರ್ತನೆ, ಅವಮಾನ ಏನು ಎಂಬುದನ್ನು ಕಾಂಗ್ರೆಸ್ ನಾಯಕರು ನೆನಪಿಸಿಕೊಳ್ಳಬೇಕು. ದೇಶಕ್ಕೆ ಸಂವಿಧಾನ ಕೊಟ್ಟವರನ್ನು ಎರಡು ಬಾರಿ ಸೋಲಿಸಿ ಅಪಮಾನ ಮಾಡಿದ್ದಾರೆ. ಅವರ ಅಂತ್ಯಕ್ರಿಯೆಗೆ ದೆಹಲಿಯಲ್ಲಿ ಜಾಗ ಕೊಡಲಿಲ್ಲ, ಮೃತದೇಹ ಸಾಗಿಸಲು ವಿಮಾನ ಕೊಡಲಿಲ್ಲ. 1961ರಲ್ಲಿ ನೆಹರು ಅವರು ಪ್ರಧಾನಿ ಆದಾಗ, ಅಂಬೇಡ್ಕರ ಅವರು ಮೀಸಲಾತಿ ಕೊಟ್ಟಿದ್ದರ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಅಲ್ಲದೆ ಗಾಂಧಿ ಕುಟುಂಬದವರು ತಮಗೆ ತಾವೇ ಭಾರತರತ್ನ ಘೋಷಣೆ ಮಾಡಿಕೊಂಡಿದ್ದಾರೆ. ಆದರೆ ಎಲ್ಲರಿಗೂ ನ್ಯಾಯ ಒದಗಿಸಿದ ಅಂಬೇಡ್ಕರ ಅವರಿಗೆ ಯಾವುದು ಪ್ರಶಸ್ತಿ ಕೊಡಲಿಲ್ಲ. ಒಂದು ಸ್ಮಾರಕ ಕಟ್ಟಲಿಲ್ಲ. ಯಾವ ನೈತಿಕತಯಿಂದ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಅಂದರೆ ಅದು ಸುಡುವ ಮನೆ ಎಂದು ಅಂಬೇಡ್ಕರ ಆಗಲೇ ಹೇಳಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಸೋಮನಗೌಡ ಪಾಟೀಲ‌ ಸಾಸನೂರ, ರಮೇಶ ಭೂಸನೂರ, ಮುಖಂಡರಾದ ಚಂದ್ರಶೇಖರ ಕವಟಗಿ, ಕಾಸುಗೌಡ ಬಿರಾದಾರ, ವಿಜುಗೌಡ ಪಾಟೀಲ, ಮಳುಗೌಡ ಪಾಟೀಲ, ಪ್ರೇಮಾನಂದ‌ ಬಿರಾದಾರ, ಶಿವರುದ್ರ ಬಾಗಲಕೋಟ, ಸಂಜಯ ಐಹೊಳ್ಳಿ, ವಿವೇಕಾನಂದ ಡಬ್ಬಿ, ಈರಣ್ಣ ರಾವೂರ, ವಿಜಯ ಜೋಶಿ ಉಪಸ್ಥಿತರಿದ್ದರು.
ನೂರಲ್ಲ, ದಿನಕ್ಕೆ ಸಾವಿರ ಸಲ ಅಂಬೇಡ್ಕರ್ ಜಪ ಮಾಡುತ್ತೇನೆ; ಸಿಟಿ ರವಿ, ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ!

ಇಂಡಿ ತಾಲೂಕಿನ 76 ಹಳ್ಳಿಗಳಿಗೆ ಕುಡಿಯಲು ನೀರು ಇರಲಿಲ್ಲ. ಒಮ್ಮೆ ಅವರ ಭೇಟಿಗೆ ತೆರಳಿದ್ದೆ, ನನಗೆ ಅಂದೇ ಅಪಾಯಿಂಟಮೆಂಟ್ ಕೊಟ್ಟರು. ಸಮಸ್ಯೆ ಕೇಳಿದ ತಕ್ಷಣ ನೀರಿನ ಸಮಸ್ಯೆ ಬಗೆಹರಿಸಲು ಸಂಬಂಧಿಸಿದವರಿಗೆ ತಿಳಿಸಿದರು. ಆಗ ನಾನು ವಿರೋಧ ಪಕ್ಷದಲ್ಲಿದ್ದರೂ ಜನರಿಗಾಗಿ ಒಂದೇ ಮಾತಿಗೆ ಕೆಲಸ ಮಾಡಿಕೊಟ್ಟ ಮನಮೋಹನಸಿಂಗ್ ಅವರ ಕಾಲಿಗೆ ಬಿದ್ದಿದ್ದೆ.

ರಮೇಶ ಜಿಗಜಿಣಗಿ, ಸಂಸದ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌