ಇಂದು ಬೆಳಗ್ಗೆ ಮಹತ್ವಾಕಾಂಕ್ಷಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ!

Published : Apr 14, 2024, 06:52 AM IST
ಇಂದು ಬೆಳಗ್ಗೆ ಮಹತ್ವಾಕಾಂಕ್ಷಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ!

ಸಾರಾಂಶ

ಲೋಕಸಭಾ ಚುನಾವಣೆಗೆ ಬಿಜೆಪಿ ಭಾನುವಾರ ಬೆಳಗ್ಗೆ 8.30ಕ್ಕೆ ಬಹುನಿರೀಕ್ಷಿತ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ವಿಕಸಿತ ಭಾರತ ಹಾಗೂ ಮೋದಿ ಕಿ ಗ್ಯಾರಂಟಿ ಪರಿಕಲ್ಪನೆಗಳು ಪ್ರಮುಖವಾಗಿ ಪ್ರಣಾಳಿಕೆಯಲ್ಲಿ ಬಿಂಬಿತ ಆಗುವ ಸಾಧ್ಯತೆ ಇದೆ.

ನವದೆಹಲಿ (ಏ.14): ಲೋಕಸಭಾ ಚುನಾವಣೆಗೆ ಬಿಜೆಪಿ ಭಾನುವಾರ ಬೆಳಗ್ಗೆ 8.30ಕ್ಕೆ ಬಹುನಿರೀಕ್ಷಿತ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ವಿಕಸಿತ ಭಾರತ ಹಾಗೂ ಮೋದಿ ಕಿ ಗ್ಯಾರಂಟಿ ಪರಿಕಲ್ಪನೆಗಳು ಪ್ರಮುಖವಾಗಿ ಪ್ರಣಾಳಿಕೆಯಲ್ಲಿ ಬಿಂಬಿತ ಆಗುವ ಸಾಧ್ಯತೆ ಇದೆ.

ಅಂಬೇಡ್ಕರ್‌ ಜಯಂತಿಯಂದೇ ಪಕ್ಷದ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಖುದ್ದು ಹಾಜರಾಗುವ ನಿರೀಕ್ಷೆ ಇದೆ.

ರಕ್ಷಣಾ ಸಚಿವ ರಾಜನಾಥ ಸಿಂಗ್‌ ನೇತೃತ್ವದ 27 ಜನರ ಪ್ರಣಾಳಿಕೆ ಸಮಿತಿ ಜನಾಭಿಪ್ರಾಯ ಸಂಗ್ರಹಿಸಿ, ಇದನ್ನು ಸಿದ್ಧಪಡಿಸಿದೆ. ಬಿಜೆಪಿಗೆ ಒಟ್ಟಾರೆ 15 ಲಕ್ಷ ಅಭಿಪ್ರಾಯಗಳು ಬಂದಿದ್ದು, ಅದರಲ್ಲಿ ನಮೋ ಆ್ಯಪ್‌ ಒಂದರಿಂದಲೇ ಬರೋಬ್ಬರಿ 4 ಲಕ್ಷ ಅಭಿಪ್ರಾಯಗಳು ಸಂಗ್ರಹವಾಗಿವೆ. ಜೊತೆಗೆ 10 ಲಕ್ಷಕ್ಕೂ ಅಧಿಕ ಮಂದಿ ವಿಡಿಯೋ ಸಂದೇಶದ ಮೂಲಕ ಪ್ರಣಾಳಿಕೆಯ ತಯಾರಿಕೆಗೆ ತಮ್ಮ ಸಲಹೆ ನೀಡಿದ್ದಾರೆ.

ಮಿಠಾಯಿ ಅಂಗಡಿಗೆ ಹಠಾತ್ ಭೇಟಿ; ಜಾಮೂನು ತಿಂದು ಸ್ಟಾಲಿನ್‌ಗೆ ಮೈಸೂರು ಪಾಕ್ ತಿನ್ನಿಸಿದ ರಾಹುಲ್ ಗಾಂಧಿ!

ಯಾವ ವಿಷಯ ಪ್ರಮುಖ?: ಮೋದಿ ಅವರು ಬಹುವಾಗಿ ಹೇಳುವ ಮೋದಿ ಕಿ ಗ್ಯಾರಂಟಿ ಇದರಲ್ಲಿ ಪ್ರಮುಖವಾಗಿ ಪ್ರಸ್ತಾಪ ಆಗಬಹುದು. ಜತೆಗೆ ರೈತರು ಮಹಿಳೆಯರು, ಬಡವರು ಮತ್ತು ಯುವಜನರ ಏಳಿಗೆಗೆ ಹಲವು ಅಭಿವೃದ್ಧಿಪರ ಯೋಜನೆಗಳನ್ನು ಪ್ರಕಟಿಸಿ, 2047ರಲ್ಲಿ ಭಾರತ ಇರಬೇಕಾದ ದೂರದೃಷ್ಟಿಯನ್ನು ಇದು ಒಳಗೊಳ್ಳಲಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ