2028ಕ್ಕೆ ಅಧಿಕಾರಕ್ಕೆ ಬರಲು ಬಿಜೆಪಿ ಬಿಗ್ ಪ್ಲಾನ್! ಮಾತುಕತೆ ವೇಳೆ ವಿಜಯೇಂದ್ರಗೆ ಅಮಿತ್ ಶಾ ಹೇಳಿದ ಆ ರಣತಂತ್ರವೇನ?

Kannadaprabha News   | Kannada Prabha
Published : Sep 20, 2026, 06:25 AM IST
BY Vijayendra Meet amit shah

ಸಾರಾಂಶ

ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿ.ವೈ. ವಿಜಯೇಂದ್ರ ಮತ್ತು ಬಿ.ಎಸ್‌. ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದರು. ಈ ವೇಳೆ 'ಬಳ್ಳಾರಿ ಚಲೋ' ಪಾದಯಾತ್ರೆಯ ಮಾಹಿತಿ ಪಡೆದ ಶಾ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಸೂಚಿಸಿದ್ದಾರೆ.

ಹುಬ್ಬಳ್ಳಿ (ಸೆ.20) ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಶನಿವಾರ ಬೆಳಗ್ಗೆ ನಗರದಲ್ಲಿ ಭೇಟಿಯಾಗಿ ಕೆಲಕಾಲ ಚರ್ಚೆ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುವಂತೆ ಅಮಿತ್‌ ಶಾ ಸೂಚಿಸಿದ್ದಾರೆ.

ಅಮಿತ್‌ ಶಾಗೆ ಬಳ್ಳಾರಿ ಪಾದಯಾತ್ರೆ ವಿವರ ನೀಡಿದ ವಿಜಯೇಂದ್ರ

ವಾಲ್ಮೀಕಿ ನಿಗಮದಲ್ಲಿನ ಹಗರಣದ ಹಣ ವಾಪಸ್‌ಗೆ ಆಗ್ರಹಿಸಿ ಇತ್ತೀಚೆಗೆ ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ನಡೆಸಲಾದ ಪಾದಯಾತ್ರೆಯ ವಿವರಗಳು, ಪಕ್ಷದಲ್ಲಿನ ಚಟುವಟಿಕೆಗಳ ಮಾಹಿತಿಯನ್ನು ಅಮಿತ್‌ ಶಾ ಅವರಿಗೆ ವಿಜಯೇಂದ್ರ ಅವರು ನೀಡಿದರು. ಈ ವಿಷಯವನ್ನು ಸ್ವತಃ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಇನ್ನಷ್ಟು ತೀವ್ರ

ರಾಜ್ಯದಲ್ಲಿನ ಪಕ್ಷದ ಚಟುವಟಿಕೆ, ಇತ್ತೀಚೆಗೆ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆ, ಅದರಿಂದಾದ ಪರಿಣಾಮಗಳ ಬಗ್ಗೆ ಅಮಿತ್‌ ಶಾ ಅವರಿಗೆ ಮಾಹಿತಿ ನೀಡಲಾಯಿತು. ಪಾದಯಾತ್ರೆಯ ಸಮಾರೋಪ ಸಮಾರಂಭದ ಜಾಗ ನಿಗದಿಪಡಿಸುವ ಕುರಿತು ಸರ್ಕಾರ ಮಾಡಿದ ಕಿರಿಕಿರಿ ಬಗ್ಗೆ ವಿವರಿಸಿದಾಗ, ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವಂತೆ ಅಮಿತ್‌ ಶಾ ಅವರು ಮಾರ್ಗದರ್ಶನ ನೀಡಿದರು. ಜತೆಗೆ, ಕೆಲ ಸಲಹೆ-ಸೂಚನೆ ನೀಡಿದರು ಎಂದು ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ʼಡಿಕೆ ಶಿವಕುಮಾರ್‌ ಸರ್ಕಾರದಲ್ಲಿ ಇನ್ನೂ ಎರಡು ವಿಕೆಟ್ ಪತನʼ ಆರ್‌ ಅಶೋಕ್‌ ಹೇಳಿದ ಸಚಿವರುಗಳು ಯಾರು?
ಸರ್ಕ್ಯೂಟ್ ಹೌಸ್‌ನಲ್ಲಿ ವಿವಾದಿತ ನಟಿಗೆ ಕಾನೂನು ಬಾಹಿರ ರಾಜಾತಿಥ್ಯ: ಸಂಕಷ್ಟದಲ್ಲಿ ವಿಐಪಿಗಳು! ತನಿಖೆ ಆರಂಭ