NEET Row: ಎಲ್ಲಾ ಪ್ರಶ್ನೆಗೂ ಉತ್ತರ ಕೊಡ್ತೀನಿ, ಚರ್ಚೆಗೆ ಬನ್ನಿ; ವಿರೋಧ ಪಕ್ಷಗಳ ನಾಯಕರಿಗೆ ಅಮಿತ್ ಶಾ ಸವಾಲು

Published : Aug 12, 2026, 11:11 PM IST
Amit Shah Ready for NEET Debate in Parliament as Opposition Demands Accountability

ಸಾರಾಂಶ

ನೀಟ್ ಪರೀಕ್ಷೆ ವಿವಾದದ ಬಗ್ಗೆ ಸಂಸತ್ತಿನಲ್ಲಿ ಗದ್ದಲ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚರ್ಚೆಗೆ ಸಿದ್ಧರಿದ್ದು, 'ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುತ್ತೇನೆ' ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಈ ಮೂಲಕ ಕಲಾಪದ ಬಿಕ್ಕಟ್ಟು ಬಗೆಹರಿಸಲು ಮುಂದಾಗಿದ್ದಾರೆ.

ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ

ನೀಟ್ ಪೇಪರ್ ಲೀಕ್ ವಿವಾದದ ಬಗ್ಗೆ ಸಂಸತ್ತಿನಲ್ಲಿ ನಡೆಯುತ್ತಿರುವ ಗದ್ದಲ ಬುಧವಾರ ತಾರಕಕ್ಕೇರಿದೆ. ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಬಲ ಪ್ರಯೋಗ ಮಾಡಲಾಗಿದೆ ಇದಕ್ಕೆ ಗೃಹಸಚಿವ ಅಮಿತ್ ಶಾ ಉತ್ತರ ನೀಡಬೇಕು ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ವಾದ್ರಾ ಸೇರಿದಂತೆ ಇಂಡಿಯಾ ಒಕ್ಕೂಟದ ಲೀಡರ್‌ಗಳು ಟೀಕಿಸಿದ್ದರು. ಇದೀಗ ಈ ಗದ್ದಲದ ನಡುವೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 'ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು' ತಾವು ಸಿದ್ಧ ಎಂದು ಘೋಷಿಸಿದ್ದಾರೆ.

ಕಲಾಪದ ಬಿಕ್ಕಟ್ಟು ಬಗೆಹರಿಸಲು, ಅಮಿತ್ ಶಾ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಪರಸ್ಪರ ಒಮ್ಮತದ ಮೂಲಕ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಅವರು ಸ್ಪೀಕರ್‌ಗೆ ಮನವಿ ಮಾಡಿದ್ದಾರೆ. ಚರ್ಚೆಯುದ್ದಕ್ಕೂ ತಾವೇ ಖುದ್ದು ಹಾಜರಿದ್ದು ಸದನದ ಎಲ್ಲಾ ಕಳವಳಗಳಿಗೆ ಉತ್ತರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ವಿಪಕ್ಷಗಳ ಹೋರಾಟ ತೀವ್ರ

ಗೃಹ ಸಚಿವರು 'ಕಾಣೆಯಾಗಿದ್ದಾರೆ', 'ಪರಾರಿಯಾಗಿದ್ದಾರೆ' ಎಂದು ವಿಪಕ್ಷಗಳು ಸಂಸತ್ತಿನ ಆವರಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದವು. ಆದರೆ ಸದನ ನಡೆಯಲು ವಿಪಕ್ಷಗಳೇ ಬಿಡುತ್ತಿಲ್ಲ. ತಮ್ಮ ಈ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಆರೋಪಗಳನ್ನು ಮಾಡುತ್ತಿವೆ ಎಂದು ಅಮಿತ್ ಶಾ ತಿರುಗೇಟು ನೀಡಿದ್ದಾರೆ.

'ಬಿಸಿನೆಸ್ ಅಡ್ವೈಸರಿ ಕಮಿಟಿ ಸಭೆಯಲ್ಲಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ನೀಟ್ ಪರೀಕ್ಷೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ಪ್ರತಿಭಟನೆಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರದ ಪರವಾಗಿ ಒಪ್ಪಿಕೊಂಡಿದ್ದಾರೆ' ಎಂದು ಶಾ ಹೇಳಿದ್ದಾರೆ.

ವಿಪಕ್ಷಗಳೊಂದಿಗೆ ಸಮಾಲೋಚಿಸಿ, ಪರಸ್ಪರ ಒಮ್ಮತದ ಮೂಲಕ, ನಿಮಗೆ ಸೂಕ್ತವೆನಿಸುವಷ್ಟು ಸಮಯವನ್ನು ಚರ್ಚೆಗೆ ನಿಗದಿಪಡಿಸುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ. ಇಂದಿನಿಂದಲೇ ಚರ್ಚೆ ಆರಂಭವಾದರೂ ಸರಿ. ನಾನು ಸದನದಲ್ಲಿ ಹಾಜರಿದ್ದು, ವಿಪಕ್ಷಗಳು ಎತ್ತುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಿದ್ದೇನೆ' ಎಂದು ಶಾ ಸ್ಪೀಕರ್‌ಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ವಿಪಕ್ಷ ನಾಯಕರು 'ಅಮಿತ್ ಶಾ ಜವಾಬ್ ದೋ" (ಅಮಿತ್ ಶಾ, ಉತ್ತರ ಕೊಡಿ) ಎಂದು ಘೋಷಣೆ ಕೂಗುತ್ತಾ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ವಿಪಕ್ಷಗಳು ಗೃಹ ಸಚಿವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದವು.

ಸಂಸತ್ ಅಧಿವೇಶನ ಆರಂಭವಾದಾಗಿನಿಂದ ನಾನು ನಿರಂತರವಾಗಿ ಸಂಸತ್ತಿಗೆ ಬಂದು ನನ್ನ ಕಚೇರಿಯಲ್ಲಿ ಕುಳಿತಿರುತ್ತೇನೆ. ಎರಡೂ ಸದನಗಳಲ್ಲಿ ವಿಪಕ್ಷಗಳು ಕಲಾಪ ನಡೆಯಲು ಬಿಡದಿದ್ದಾಗ, ಅಲ್ಲಿಗೆ ಹೋಗಿ ಯಾರೇನು ಮಾಡಲು ಸಾಧ್ಯ? ಚರ್ಚೆಯ ವಿಷಯಕ್ಕೆ ಬಂದರೆ, ನಮ್ಮ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ನೀಟ್ ಕುರಿತ ವಿದ್ಯಾರ್ಥಿಗಳ ಪ್ರತಿಭಟನೆಯ ಪ್ರತಿಯೊಂದು ಆಯಾಮದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಚರ್ಚೆಗೆ ಸಮಯ ನಿಗದಿಪಡಿಸಲಿ, ವಿಪಕ್ಷಗಳು ಸಿದ್ಧವಾಗಲಿ. ಮೊದಲು ಅವರೂ ಇದನ್ನೇ ಕೇಳುತ್ತಿದ್ದರು. ನಾವು ಸರಿ ಎಂದಿದ್ದೇವೆ. ನನ್ನ ಕಡೆಯಿಂದ, ಸಂಸತ್ತಿನಲ್ಲಿ ಯಾವುದೇ ಪ್ರಶ್ನೆಗೆ ಉತ್ತರಿಸಲು ಸಿದ್ಧನಿದ್ದೇನೆ ಎಂದೂ ಹೇಳಿದ್ದೇನೆ. ಆದರೆ ಅವರಿಗೆ ಚರ್ಚೆಯೇ ಬೇಡ. ಈಗ ಯಾರು ಓಡಿಹೋಗುತ್ತಿದ್ದಾರೆಂದು ಜನರೇ ನಿರ್ಧರಿಸಲಿ. ಇಂದಿಗೂ ನಾನು ಹೇಳುತ್ತೇನೆ, ಇಂದು ಮಧ್ಯಾಹ್ನ 3:00 ಗಂಟೆಯೊಳಗೆ ಸ್ಪೀಕರ್‌ಗೆ ಪತ್ರ ನೀಡಲಿ' ಎಂದರು.

ಬುಧವಾರ ಮಧ್ಯಾಹ್ನ 3:00 ಗಂಟೆಗೆ ಚರ್ಚೆ ಆರಂಭವಾಗಿ, ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಕ್ತಾಯಗೊಳಿಸೋಣ ಎಂದು ಗೃಹ ಸಚಿವರು ಪ್ರಸ್ತಾಪಿಸಿದರು. ಚರ್ಚೆಯ ಸಮಯದಲ್ಲಿ ವಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವುದಾಗಿಯೂ ಅವರು ಭರವಸೆ ನೀಡಿದರು.

ಬಲಪ್ರಯೋಗದ ಬಗ್ಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ಇದೇ ವೇಳೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶಾದ್ಯಂತ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಲಾಠಿ ಮತ್ತು ಪೆಲ್ಲೆಟ್ ಗನ್‌ಗಳನ್ನು ಬಳಸಿರುವ ಬಗ್ಗೆ ಸರ್ಕಾರದ ಹೊಣೆಗಾರಿಕೆಯನ್ನು ಅವರು ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಯುವಕರು ತಮ್ಮ ಭವಿಷ್ಯಕ್ಕಾಗಿ ಧ್ವನಿ ಎತ್ತಿದಾಗ ಅವರ ಮೇಲೆ ಈ ರೀತಿ ದೌರ್ಜನ್ಯ ನಡೆಸುವುದಕ್ಕೆ ಯಾರು ಹೊಣೆ ಎಂದು ನೀವು ಭಾವಿಸುತ್ತೀರಿ? ಸಾವಿರಾರು ವಿದ್ಯಾರ್ಥಿಗಳು ಒಂದೇ ಒಂದು ಬೇಡಿಕೆಯೊಂದಿಗೆ ಸೇರಿದಾಗ, ನೀವು ಅವರ ಮೇಲೆ ಲಾಠಿ ಬೀಸುತ್ತೀರಿ, ಪೆಲ್ಲೆಟ್ ಗನ್ ಹಾರಿಸುತ್ತೀರಿ, ಬಿಹಾರದಲ್ಲಿ ಅವರ ವಿರುದ್ಧ ಎಕೆ-47 ಬಳಸುತ್ತೀರಿ' ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

'ಸಮಯದ ಮಿತಿ' ಬಗ್ಗೆ ಅಖಿಲೇಶ್ ಯಾದವ್ ಕಿಡಿ

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ಸಂಸತ್ತಿನಲ್ಲಿ ಉತ್ತರ ನೀಡಲು 'ಸಮಯದ ಮಿತಿ'ಯನ್ನು ನಿಗದಿಪಡಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವುದನ್ನು 'ಪ್ರಜಾಪ್ರಭುತ್ವ ವಿರೋಧಿ' ಎಂದು ಕರೆದಿದ್ದಾರೆ. ಇದು ನಿಜವಾದ ಉತ್ತರಗಳ ಬದಲು 'ಖಾಲಿ ಹೇಳಿಕೆ'ಗಳನ್ನು ನೀಡುವ ಪ್ರಯತ್ನ ಎಂದು ಅವರು ಟೀಕಿಸಿದ್ದಾರೆ.

ನೀಟ್ ಪೇಪರ್ ಲೀಕ್ ಕುರಿತ ವಿದ್ಯಾರ್ಥಿಗಳ ಪ್ರತಿಭಟನೆಗಳ ಬಗ್ಗೆ ಮಧ್ಯಾಹ್ನ 3 ಗಂಟೆಯಿಂದ ಸಂಸತ್ತಿನಲ್ಲಿ ವಿವರವಾದ ಚರ್ಚೆ ನಡೆಸುವ ಅಮಿತ್ ಶಾ ಅವರ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ ಅಖಿಲೇಶ್ ಯಾದವ್ ಸಾಮಾಜಿಕ ಮಾಧ್ಯಮದಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ. 'ಸಂಸತ್ತಿನಲ್ಲಿ ಪ್ರತಿಕ್ರಿಯಿಸಲು ಸರ್ಕಾರ ನಿಗದಿಪಡಿಸಲು ಬಯಸುವ ಸಮಯದ ಮಿತಿಯೇ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ವಾಸ್ತವವಾಗಿ, ಇದು ಉತ್ತರವಾಗುವುದಿಲ್ಲ; ಇದು ಖಾಲಿ ಹೇಳಿಕೆಯಾಗುತ್ತದೆ' ಎಂದು ಯಾದವ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರ ಖಡಕ್ ನಿಲುವು

ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷಗಳು ಸಂಸತ್ತಿನಲ್ಲಿ ತಮ್ಮ ನಿಲುವನ್ನು ಮುಂದುವರಿಸಲಿವೆ ಎಂದು ಹೇಳಿದ್ದಾರೆ. ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗದ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಉತ್ತರವನ್ನು ಅವರು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ನಾಳೆ ಏನೂ ಆಗುವುದಿಲ್ಲ. ನಾವು ಇದುವರೆಗೆ ಏನು ಮಾಡುತ್ತಿದ್ದೇವೆಯೋ ಅದನ್ನೇ ಮುಂದುವರಿಸುತ್ತೇವೆ ಎಂದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿ, 'ಅಮಿತ್ ಶಾ ನಮಗೆ ಉಪನ್ಯಾಸ ನೀಡುವುದರಲ್ಲಿ ನಮಗೆ ಆಸಕ್ತಿಯಿಲ್ಲ ಎಂದು ವಿಪಕ್ಷಗಳು ಸ್ಪಷ್ಟವಾಗಿ ಹೇಳಿವೆ. 'ನಾವು' ಎಂದರೆ ಈ ದೇಶದ ಯುವ ಪೀಳಿಗೆ. ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದು ಯಾರು? ಮೊಳೆಗಳಿದ್ದ ಲಾಠಿಗಳಿಂದ ವಿದ್ಯಾರ್ಥಿಗಳನ್ನು ಥಳಿಸಲು ಆದೇಶ ನೀಡಿದ್ದು ಯಾರು? ನಮ್ಮ ಮಕ್ಕಳ ಮೇಲೆ ಗುಂಡು ಹಾರಿಸಲು ಅಮಿತ್ ಶಾ ಈ ಆದೇಶ ನೀಡಿದ್ದಾರೆಯೇ? ಹಾಗಿದ್ದರೆ, ಅವರು ರಾಜೀನಾಮೆ ನೀಡಬೇಕು. ಕಳೆದ 20 ದಿನಗಳಿಂದ ಅಮಿತ್ ಶಾ ಕಾಣೆಯಾಗಿದ್ದಾರೆ. ಭಾರತದ ಗೃಹ ಸಚಿವರಿಗೆ ಧೈರ್ಯವಿಲ್ಲ; ಅವರು ಸದನಕ್ಕೆ ಬರಲು ಸಾಧ್ಯವಿಲ್ಲ' ಎಂದು ಹೇಳಿದರು.

ಬಿಜೆಪಿ ಸಂಸದರಿಂದ ತಿರುಗುಬಾಣ

ಇದೇ ವೇಳೆ, ಜಾರ್ಖಂಡ್‌ನ ಬಿಜೆಪಿ ಸಂಸದರು ಬುಧವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ರಾಂಚಿಯಲ್ಲಿ ವಿದ್ಯಾರ್ಥಿಗಳ ಮೇಲೆ ಇತ್ತೀಚೆಗೆ ನಡೆದ ಲಾಠಿಚಾರ್ಜ್ ಅನ್ನು ಖಂಡಿಸಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸುವ ರಾಹುಲ್ ಗಾಂಧಿ, ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ವಿದ್ಯಾರ್ಥಿಗಳ ಮೇಲೆ ನಡೆಸಿದ 'ಅಮಾನವೀಯ' ದೌರ್ಜನ್ಯದ ಬಗ್ಗೆ ಮೌನವಾಗಿದ್ದಾರೆ. ಇದು ಅವರ 'ದ್ವಂದ್ವ ನೀತಿ'ಯನ್ನು ತೋರಿಸುತ್ತದೆ ಎಂದು ಬಿಜೆಪಿ ಸಂಸದರು ಆರೋಪಿಸಿದರು.

ಈ ಪ್ರತಿಭಟನೆಯ ನಡುವೆಯೂ, ವಿಪಕ್ಷ ನಾಯಕರು 'ಅಮಿತ್ ಶಾ ಜವಾಬ್ ದೋ' ಎಂದು ಘೋಷಣೆ ಕೂಗುತ್ತಾ ಕೇಂದ್ರದ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. (ANI)

(ಈ ಸುದ್ದಿಯ ಶೀರ್ಷಿಕೆ ಹೊರತುಪಡಿಸಿ, ಉಳಿದ ಭಾಗವನ್ನು ಏಷ್ಯಾನೆಟ್ ನ್ಯೂಸಬಲ್ ಇಂಗ್ಲಿಷ್ ಸಿಬ್ಬಂದಿ ಸಂಪಾದಿಸಿಲ್ಲ ಮತ್ತು ಸಿಂಡಿಕೇಟೆಡ್ ಫೀಡ್‌ನಿಂದ ಪ್ರಕಟಿಸಲಾಗಿದೆ.)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ ಸಂಪುಟದ ಸಚಿವರಿಗೆ ಕೊನೆಗೂ ಸಿಕ್ತು ಖಾತೆ: ಯಾರಿಗೆ ಯಾವ ಇಲಾಖೆ? ಇಲ್ಲಿದೆ ಅಧಿಕೃತ ಪಟ್ಟಿ!
B Nagendra: ವಾಲ್ಮೀಕಿ ನಿಗಮ ಹಗರಣ: ಬಿ ನಾಗೇಂದ್ರ ಪರ ನಿಂತ ಬಳ್ಳಾರಿ ವಾಲ್ಮೀಕಿ ಸಂಘಟನೆ ಜಿಲ್ಲಾ ಮುಖಂಡ!