ಕರ್ನಾಟಕದಲ್ಲಿ ಲೂಟಿಕೋರ ಕಾಂಗ್ರೆಸ್ ಸರ್ಕಾರದಿಂದ ಜನರು ರೋಸಿ ಹೋಗಿದ್ದಾರೆ: ಅಮಿತ್‌ ಶಾ

Published : Apr 24, 2024, 11:02 AM ISTUpdated : Apr 24, 2024, 11:38 AM IST
ಕರ್ನಾಟಕದಲ್ಲಿ ಲೂಟಿಕೋರ ಕಾಂಗ್ರೆಸ್ ಸರ್ಕಾರದಿಂದ ಜನರು ರೋಸಿ ಹೋಗಿದ್ದಾರೆ: ಅಮಿತ್‌ ಶಾ

ಸಾರಾಂಶ

ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಬೆಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸುವ ಸಂಬಂಧ ನನ್ನ ಮನವಿಯನ್ನು ಕೇಂದ್ರ ಗೃಹಸಚಿವ ಅಮಿತ್ ಸಾ ಅವರು ಪುರಸ್ಕರಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಅನೇಕ ಜನಪರ ಕಾರ್ಯಗಳು ಯಶಸ್ವಿಯಾಗಿ ಜಾರಿಗೊಂಡಿವೆ: ತೇಜಸ್ವಿ ಸೂರ್ಯ 

ಬೆಂಗಳೂರು(ಏ.24):  ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ರಾತ್ರಿ ಕ್ಷೇತ್ರದಲ್ಲಿ ರೋಡ್ ತೋ ಮಾಡಿ ಭರ್ಜರಿ ಪ್ರಚಾರ ನಡೆಸಿದರು. ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ಮೂರು ದಿನ ಬಾಕಿ ಇರುವ ಹೊತ್ತಿನಲ್ಲಿ ಅಮಿತ್ ಶಾ ಅವರು ನಗರಕ್ಕೆ ಬಂದು ತೇಜಸ್ವಿ ಸೂರ್ಯ ಪರ ತೆರೆದ ವಾಹನದಲ್ಲಿ ಮಿಂಚಿನ ರೋಡ್ ಶೋ ನಡೆಸಿದರು. ಅಮಿತ್ ಶಾ ಆಗಮನದಿಂದ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಯಿತು.

ಮೋದಿ, ಜೈ ಅಮಿತ್ ಶಾ ಘೋಷಣೆಗಳು ಮೊಳಗಿದವು. ಬೊಮ್ಮನಹಳ್ಳಿ ವಿಧಾನಸಭಾಕ್ಷೇತ್ರದ ವಿವೇಕಾನಂದ ಸರ್ಕಲ್‌ನಿಂದ ಆರಂಭವಾದ ಅಮಿತ್ ಶಾ ಅವರ ರೋಡ್ ತೋ ಬನ್ನೇರುಘಟ್ಟದ ಐಐಎಂಬಿ ವರೆಗೆ ಸಾಗಿತು. ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಭಾರೀ ಸಂಖ್ಯೆಯ ಕಾರ್ಯಕರ್ತರು, ಸಾರ್ವಜನಿಕರು ಜಮಾಯಿಸಿದ್ದರು. ಅಮಿತ್ ಶಾ ಅವರ ಮೇಲೆ ಹೂಮಳೆಗರೆದು ಜೈಕಾರ ಕೂಗಿ ಸಂಭ್ರಮಿಸಿದರು.

ನಿಮ್ಮ ಆಸ್ತಿಯನ್ನು ಎಕ್ಸ್‌ರೇ ಮಾಡಿ ಕಾಂಗ್ರೆಸ್‌ ಜಪ್ತಿ ಮಾಡುತ್ತೆ: ಮೋದಿ

ಈ ವೇಳೆ ಮಾತನಾಡಿದ ಅಮಿತ್ ಶಾ, ಕರ್ನಾಟಕದಲ್ಲಿ ಲೂಟಿಕೋರ, ಓಲೈಕೆಯ, ಸ್ವಜನಪಕ್ಷಪಾತದ ಕಾಂಗ್ರೆಸ್ ಸರ್ಕಾರದಿಂದ ಜನರು ರೋಸಿ ಹೋಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವಾಗಿ ಸಮಾಜಘಾತುಕ ಶಕ್ತಿಗಳ, ಮತೀಯವಾದಿಗಳ ಮೆರೆದಾಟ ಹೆಚ್ಚಾಗಿದೆ. ಶಾಂತಿಗೆ ಹೆಸರಾದ ನಾಡಿನಲ್ಲಿ ಕೊಲೆ, ರಕ್ತಪಾತ, ಭಯೋತ್ಪಾದಕ ಚಟುವಟಿಕೆಗಳೂ ಹೆಚ್ಚಾಗುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ಗೆ ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವ ಎಸ್‌ಡಿಪಿಐ ಬೆಂಬಲವಿದೆ. ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿರುವವರನ್ನು ಅದರ ಹಿಂದಿರುವವರನ್ನು ಕಾಂಗ್ರೆಸ್ ಪೋಷಿಸುತ್ತಿದೆ. ಇದು ದೇಶಕ್ಕೆ ದೇಶಕ್ಕೆ ಮತ್ತು ರಾಜ್ಯದ ಸುರಕ್ಷತೆಗೆ ದೊಡ್ಡ ಬೆದರಿಕೆಯಾಗಿದೆ. ಇತ್ತೀಚೆಗೆ ಬೆಂಗಳೂರಿನ ಹೊಟೆಲ್ ವೊಂದರಲ್ಲಿ ನಡೆದ ಬಾಂಬ್ ಸ್ಫೋಟವು ನಗರವನ್ನು ಬೆಚ್ಚಿ ಬೀಳಿಸಿತ್ತು. ಈ ಕೃತ್ಯದ ಹಿಂದಿನ ಜಾಲವನ್ನು ಭೇದಿಸಿರುವ ಎನ್‌ಐಎ, ಸ್ಫೋಟಕ್ಕೆ ಕಾರಣರಾದವರನ್ನು ಬಂಧಿಸಿದೆ. ಬೆಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸಿದ್ದರಿಂದ ಇಂತಹ ಕೃತ್ಯಗಳನ್ನು ನಿಗ್ರಹಿಸಲು ಸಾಧ್ಯವಾಗಿದೆ. ತೇಜಸ್ವಿ ಸೂರ್ಯ ಅವರು ಎನ್‌ಐಎ ಕಚೇರಿ ಸ್ಥಾಪನೆಗೆ ಮನವಿ ಮಾಡಿದ್ದರು ಎಂದು ಹೇಳಿದರು.

ಭಯೋತ್ಪಾದನೆ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ: ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಪ್ರಗತಿ ಪಥದತ್ತ ಸಾಗಿದ್ದು, ಅವರ ಕೈ ಬಲಪಡಿಸಿದರೆ ದೇಶ ಸುಭದ್ರವಾಗಿರುತ್ತದೆ. ಭಯೋತ್ಪಾದನೆ ವಿಷಯದಲ್ಲಿ ಶೂನ್ಯ ಸಹಿಷ್ಣುತೆ ಹೊಂದಿರುವ ಸರ್ಕಾರ, ದೇಶದ ಹೊರಗೂ ನುಗ್ಗಿ ಭಯೋತ್ಪಾದಕರನ್ನು ನಿರ್ಣಾಮ ಮಾಡುವ ಸಾಹಸ ತೋರಿದೆ. ಸರ್ಜಿಕಲ್ ಸ್ಟೈಕ್ ಮತ್ತು ಏರ್ ಸ್ಟೈಕ್ ಗಳಿಂದ ಭಯೋತ್ಪಾದಕ ಗುಂಪುಗಳು ಮತ್ತು ಶತ್ರು ರಾಷ್ಟ್ರಗಳು ಹೆದರಿವೆ. ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಗಳಿಂದ ದೇಶದಲ್ಲಿ ಚಟುವಟಿಕೆಗಳಲ್ಲೂ ಶೇ.75 ರಷ್ಟು ಕಡಿಮೆಯಾಗಿದ್ದು, ಈ ಹಾವಳಿಯ ಸಂಪೂರ್ಣ ನಿಗ್ರಹ ದೂರವಿಲ್ಲ ಎಂದರು. 

ಕಾಂಗ್ರೆಸ್‌ನಿಂದ ದೇಶ ಒಡೆಯುವ ತಂತ್ರ: ಮೋದಿ ತೀವ್ರ ವಾಗ್ದಾಳಿ

ಇದೇ ವೇಳೆ ಮಾತನಾಡಿದ ಅಭ್ಯರ್ಥಿ ತೇಜಸ್ವಿ ಸೂರ್ಯ, ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಬೆಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸುವ ಸಂಬಂಧ ನನ್ನ ಮನವಿಯನ್ನು ಕೇಂದ್ರ ಗೃಹಸಚಿವ ಅಮಿತ್ ಸಾ ಅವರು ಪುರಸ್ಕರಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಅನೇಕ ಜನಪರ ಕಾರ್ಯಗಳು ಯಶಸ್ವಿಯಾಗಿ ಜಾರಿಗೊಂಡಿವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಸಿ.ಕೆ.ರಾಮಮೂರ್ತಿ, ಸತೀಶ್ ರೆಡ್ಡಿ ರೋಡ್ ಶೋನಲ್ಲಿ ಪಾಲ್ಗೊಂಡು ಅಮಿತ್ ಶಾಗೆ ಸಾಥ್ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌