ಅಮಿತ್‌ ಶಾ ಸಂಧಾನ: ಮಣಿಪುರ ಸರ್ಕಾರ ಪತನದಿಂದ ಬಚಾವ್‌!

Published : Jun 25, 2020, 02:28 PM ISTUpdated : Jun 25, 2020, 02:58 PM IST
ಅಮಿತ್‌ ಶಾ ಸಂಧಾನ: ಮಣಿಪುರ ಸರ್ಕಾರ ಪತನದಿಂದ ಬಚಾವ್‌!

ಸಾರಾಂಶ

ಅಮಿತ್‌ ಶಾ ಸಂಧಾನ: ಮಣಿಪುರ ಸರ್ಕಾರ ಪತನದಿಂದ ಬಚಾವ್‌| ಶಾಸಕರ ರಾಜೀನಾಮೆಯಿಂದಾಗಿ ಪತನದ ಭೀತಿಗೆ ಸಿಲುಕಿದ್ದ ಮಣಿಪುರದ ಬೀರೇನ್‌ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರ 

ಗುವಾಹಟಿ(ಜೂ.25): ಶಾಸಕರ ರಾಜೀನಾಮೆಯಿಂದಾಗಿ ಪತನದ ಭೀತಿಗೆ ಸಿಲುಕಿದ್ದ ಮಣಿಪುರದ ಬೀರೇನ್‌ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರ ಸದ್ಯ ಅಪಾಯದಿಂದ ಪಾರಾಗಿದೆ.

ಮೇಘಾಲಯ ಮುಖ್ಯಮಂತ್ರಿಯೂ ಆಗಿರುವ ಎನ್‌ಪಿಪಿ ನಾಯಕ ಕಾನ್ರಾಡ್‌ ಸಂಗ್ಮಾ ಹಾಗೂ ರಾಜೀನಾಮೆ ನೀಡಿದ್ದ ಉಪಮುಖ್ಯಮಂತ್ರಿ ವೈ. ಜಾಯ್‌ಕುಮಾರ್‌ ಸಿಂಗ್‌ ಅವರು ದೆಹಲಿಯಲ್ಲಿ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಣಿಪುರದ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಕಾನ್ರಾಡ್‌ ಅವರು ತಿಳಿಸಿದರು. ರಾಜೀನಾಮೆ ನೀಡಿದ್ದ ಎಲ್ಲ 9 ಶಾಸಕರನ್ನೂ ದೆಹಲಿಗೆ ಕರೆತರಲಾಗಿತ್ತು.

ಲಾಲುಗೆ ನಿತೀಶ್‌ ಶಾಕ್‌: 5 ಎಂಎಲ್ಸಿಗಳು ಜೆಡಿಯುಗೆ!

ಕಳೆದ ವಾರ ಎನ್‌ಪಿಪಿಯ ನಾಲ್ವರು ಹಾಗೂ ಬಿಜೆಪಿಯ ಮೂವರು ಶಾಸಕರು ರಾಜೀನಾಮೆ ನೀಡಿ, ಬೀರೇನ್‌ ಸಿಂಗ್‌ ನೇತೃತ್ವದ ಸರ್ಕಾರಕ್ಕೆ ಬೆಂಬಲ ವಾಪಸ್‌ ಪಡೆದಿತ್ತು. ಹೀಗಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದು, ಕಾಂಗ್ರೆಸ್‌ ಹಕ್ಕು ಮಂಡನೆ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!