
ಬೆಂಗಳೂರು, (ಆ.08): ಖಾತೆ ಹಂಚಿಕೆ ಬೆನ್ನಲ್ಲೆ ಭುಗಿಲೆದ್ದಿದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ಕಾಲಿಕ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು.... ಖಾತೆ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಆನಂದ್ ಸಿಂಗ್ ಅವರ ಮನವೊಲಿಸುವಲ್ಲಿ ಬೊಮ್ಮಾಯಿ ಸಕ್ಸಸ್ ಆಗಿದ್ದು, ಈ ಮೂಲಕ ಬೀಸೋ ದೊಣ್ಣೆಯಿಂದ ಪಾರಾದಂತಾಗಿದೆ.
2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ, ಸಂಚಲನ ಮೂಡಿಸಿದ ಎಂಟಿಬಿ ಹೇಳಿಕೆ
ಖಾತೆ ಸಂಬಂಧ ಬೇಸರಗೊಂಡಿದ್ದ ಎಂಟಿಬಿ ನಾಗರಾಜ್ ಹಾಗೂ ಆನಂದ್ ಸಿಂಗ್ ಅವರು ಇಂದು (ಭಾನುವಾರ) ಪ್ರತ್ಯೇಕವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಮಾತುಕತೆ ಮಾಡಿದರು. ಈ ವೇಳೆ ಬೊಮ್ಮಾಯಿ ಇಬ್ಬರಿಗೂ ಭರವಸೆ ನೀಡುವ ಮೂಲಕ ಸಮಧಾನಪಡಿಸಿದ್ದಾರೆ.
ಇನ್ನು ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ, ನನಗೆ ಎ ಗ್ರೇಡ್ ನಿಂದ ಬಿ ಗ್ರೇಡ್ ಗೆ ತಂದಿದಾರೆ. ಖಾತೆ ಬದಲಾವಣೆ ಮಾಡಲು ಕೇಳಿದ್ದೇನೆ. ವರಿಷ್ಠರ ಜತೆ ಚರ್ಚಿಸಿ ಹೇಳ್ತೀನಿ ಅಂತ ಸಿಎಂ ಹೇಳಿದಾರೆ. ಖಾತೆ ಬದಲಾಯಿಸೋವರೆಗೂ ಈಗ ಕೊಟ್ಟಿರೋ ಖಾತೆಯಲ್ಲೇ ಮುಂದುವರೀತೇನೆ ಎಂದು ಸ್ಪಷ್ಟಪಡಿಸಿದರು.
ಖಾತೆ ಕ್ಯಾತೆ: ಸಿಎಂ ಬೊಮ್ಮಾಯಿಗೆ ರಾಜೀನಾಮೆ ಎಚ್ಚರಿಕೆ ಕೊಟ್ಟ ಸಚಿವ
ವಸತಿಗಿಂತ ಒಳ್ಳೆ ಖಾತೆ ಕೇಳಿದ್ದೇನೆ. ಇಂಧನ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಸಾರಿಗೆ ಇಲಾಖೆಗಳಲ್ಲಿ ಒಂದು ಕೊಡಲಿ. ಜನರ ಕೆಲಸ, ಬಡವರ ಕೆಲಸ ಮಾಡುವ ಖಾತೆ ಬೇಕು ಎಂದರು.
ಎರಡು ಮೂರು ದಿನಗಳಲ್ಲಿ ನಿರ್ಧಾರ ಪ್ರಕಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಂಟಿಬಿ, ಈಗಲೇ ಆ ನಿರ್ಧಾರ ಪ್ರಕಟ ಮಾಡಿದ್ದೇನೆ. ಬೇರೆ ಖಾತೆ ಕೊಡೋವರೆಗೂ ಈಗಿರುವ ಖಾತೆ ನಿಭಾಯಿಸ್ತೇನೆ ಎಂದು ಹೇಳಿದರು.
ಇನ್ನು ಆನಂದ್ ಸಿಂಗ್ ಮಾತನಾಡಿದ, ಮಾಧ್ಯಮಗಳ ಮುಂದೆ ಯಾವುದೇ ಬಹಿರಂಗ ಹೇಳಿಕೆ ಕೊಡಬೇಡಿ. ನಮ್ಮ-ನಿಮ್ಮ ಚರ್ಚೆ ನಾಲ್ಕು ಗೋಡೆಗಳ ಮಧ್ಯೆಯೇ ಇರಬೇಕು ಎಂದು ಹೇಳಿದ್ದಾರೆ. ಹಾಗಾಗಿ ಅವರ ಮಾತನ್ನು ಪಾಲಿಸುತ್ತೇನೆ ಎಂದು ಹೇಳಿ ಹೋದರು.
ಒಟ್ಟಿನಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾತೆ ಕ್ಯಾತೆ ತೆಗೆದವರನ್ನ ಸಮಾಧಾನಪಡಿಸುವಲ್ಲಿ ಯಶಸ್ವಿಯಾಗಿದ್ದಂತೂ ಸತ್ಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.