
ಬೆಂಗಳೂರು, (ಆ.11): ಪ್ರಬಲ ಖಾತೆ ಸಿಕ್ಕಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ಸಚಿವ ಆನಂದ್ ಸಿಂಗ್ ಇದೀಗ ಕೊಂಚ ಕೂಲ್ ಆಗಿದ್ದಾರೆ.
ತಮ್ಮ ಕ್ಷೇತ್ರವಾದ ವಿಜಯನಗರದಲ್ಲಿ ಶಾಸಕರ ಭವನ ಕೋರ್ಡ್ ತೆರವುಗೊಳಿಸಿ ರಾಜೀನಾಮೆಗೆ ಮುಂದಾಗಿದ್ದು ಆನಂದ್ ಸಿಂಗ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಕರೆದು ಸುಮಾರು 2 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.
ಸಚಿವ ಆನಂದ್ ಸಿಂಗ್ ರಾಜೀನಾಮೆ? ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ
ಸಿಎಂ ಜತೆ ಮಾತುಕತೆಯ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಆನಂದ್ ಸಿಂಗ್, ತಾವು ರಾಜೀನಾಮೆ ನೀಡುತ್ತೇನೆಂದು ಎಲ್ಲೂ ಹೇಳಿಲ್ಲ. ಸಿಎಂ ಉತ್ತಮ ರೀತಿಯಲ್ಲಿ ನಮಗೆ ಸ್ಪಂದಿಸಿದ್ದಾರೆ. ಖಾತೆ ಬದಲಾವಣೆ ಮಾಡಿರುವಂತೆ ಕೇಳಿರುವುದು ಸತ್ಯ. ಸಿಎಂ ಮಾತಿಗೆ ಗೌರವ ಕೊಟ್ಟು ಕಾಯುತ್ತೇನೆ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರವಾಸೋದ್ಯಮ ಖಾತೆ ಕೊಟ್ಟಿರುವುದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಆನಂದ್ ಸಿಂಗ ಖಾತೆ ಬದಲಾವಣೆ ಮಾಡಿ ಎಂದು ಬಿಗಿಪಟ್ಟು ಹಿಡಿದಿದ್ದರು. ಅಲ್ಲದೇ ಯಾವುದು ಬೇಡ ಶಾಸಕನಾಗಿಯೇ ಇರುತ್ತೇನೆ ಎಂದು ಪರೋಕ್ಷವಾಗಿ ಸಚಿವ ಸ್ಥಾನ ಬೇಡ ಎಂದು ಹೇಳಿದ್ದರು.
ಇಷ್ಟೇ ಅಲ್ಲದೇ ವಿಜಯನಗರದಲ್ಲಿನ ತಮ್ಮ ಶಾಸಕರ ಭವನದ ಬೋರ್ಡ್ ತೆರವುಗೊಳಿಸಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದರು. ಕೊನೆಗೆ ಬಿಎಸ್ವೈ, ಹೆಲಿಕಾಪ್ಟರ್ ಕೊಟ್ಟು ಬೆಂಗಳೂರಿಗೆ ಕರೆಯಿಸಿ ಇದೀಗ ಸಮಾಧಾನಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.