ಚುನಾವಣಾ ನಿವೃತ್ತಿ ಘೋಷಣೆ, ಈಶ್ವರಪ್ಪ ನಿರ್ಧಾರ ಯುವಕರಿಗೆ ಸ್ಫೂರ್ತಿ: ತೇಜಸ್ವಿ ಸೂರ್ಯ

Published : Apr 12, 2023, 03:23 AM ISTUpdated : Apr 12, 2023, 03:24 AM IST
ಚುನಾವಣಾ ನಿವೃತ್ತಿ ಘೋಷಣೆ, ಈಶ್ವರಪ್ಪ ನಿರ್ಧಾರ ಯುವಕರಿಗೆ ಸ್ಫೂರ್ತಿ: ತೇಜಸ್ವಿ ಸೂರ್ಯ

ಸಾರಾಂಶ

ಹೊಸ ನಾಯಕತ್ವಕ್ಕೆ ದಾರಿ ಮಾಡಿಕೊಡುವ ಕೆ.ಎಸ್‌.ಈಶ್ವರಪ್ಪ ಅವರ ನಿರ್ಧಾರವು ಯುವ ಕಾರ್ಯಕರ್ತರಾದ ನಮಗೆ ಸ್ಫೂರ್ತಿದಾಯಕವಾಗಿದೆ ಎಂದು ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರು (ಏ.12) : ಹೊಸ ನಾಯಕತ್ವಕ್ಕೆ ದಾರಿ ಮಾಡಿಕೊಡುವ ಕೆ.ಎಸ್‌.ಈಶ್ವರಪ್ಪ ಅವರ ನಿರ್ಧಾರವು ಯುವ ಕಾರ್ಯಕರ್ತರಾದ ನಮಗೆ ಸ್ಫೂರ್ತಿದಾಯಕವಾಗಿದೆ ಎಂದು ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಇವತ್ತು ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಭವಿಷ್ಯ ನಾಯಕತ್ವದ ತಯಾರಿಗೆ 50 ಯುವ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಇದಕ್ಕೆ ಹಿರಿಯ ನಾಯಕರು ಅವಕಾಶ ಕಲ್ಪಿಸಿದ್ದಾರೆ. ಈ ರೀತಿ ಹೊಸಬರಿಗೆ ಅವಕಾಶ ಸಿಗೋದಕ್ಕೆ ಯಡಿಯೂರಪ್ಪನವರು, ಈಶ್ವರಪ್ಪ ನವರು ಮತ್ತು ಹಾಲಾಡಿ ಶ್ರೀನಿವಾಸ್ ರವರು ಮಾರ್ಗದರ್ಶಕರಗಿದ್ದಾರೆ. ಈ ವರ್ಷವೂ ಯಶಸ್ಸನ್ನ ಕಾಣುತ್ತೇವೆ ಅಂತ ಯುವಕರಿಗೆ ನೀಡಿದ್ದಾರೆ ಎಂದರು.

ಚುನಾವಣೆ ನಿವೃತ್ತಿ ಘೋಷಣೆ: ಈಶ್ವರಪ್ಪರದು ‘ಲವ್‌ ಲೆಟರ್‌ ಎಂದ ಡಿಕೆಶಿ

ಈಶ್ವರಪ್ಪ (KS Eshwarappa)ರಾಜ್ಯ ಬಿಜೆಪಿಯಲ್ಲಿ ಎತ್ತರ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ(BS Yadiyurappa) ಮತ್ತು ಅನಂತಕುಮಾರ್‌ ಅವರೊಂದಿಗೆ ತಳಮಟ್ಟದಿಂದ ಬಿಜೆಪಿ ಪಕ್ಷವನ್ನು ಕಟ್ಟಿದ ವ್ಯಕ್ತಿಗಳಲ್ಲಿ ಕೆ.ಎಸ್‌.ಈಶ್ವರಪ್ಪ ಅವರೂ ಇಬ್ಬರು. ಹೊಸಬರಿಗೆ ಜಾಗ ನೀಡುವ ಅವರ ನಿರ್ಧಾರವೇ ಬಿಜೆಪಿಯನ್ನು ಭಿನ್ನ ಪಕ್ಷವನ್ನಾಗಿ ಮಾಡುತ್ತದೆ. ಇದು ಅನುಕರಣೆಗೆ ಯೋಗ್ಯವಾದ ನಿರ್ಧಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯುವ ರಕ್ತ ಮತ್ತು ಹೊಸ ನಾಯಕತ್ವವನ್ನು ಉದ್ದೇಶಪೂರ್ವಕವಾಗಿ ಬೆಳೆಸುವುದು ಬಿಜೆಪಿಯಲ್ಲಿ ಮಾತ್ರ. ಕೆ.ಎಸ್‌.ಈಶ್ವರಪ್ಪ, ಹಾಲಾಡಿ ಸರ್‌ ಮುಂತಾದ ನಾಯಕರ ತೀರ್ಮಾನ ಬಿಜೆಪಿ ಪಕ್ಷವನ್ನು ಇತರೆ ರಾಜಕೀಯ ಪಕ್ಷಗಳಿಗಿಂತ ಭಿನ್ನವಾಗಿಸಿದೆ ಎಂದು ಟ್ವೀಟ್‌ ಮೂಲಕ ಶ್ಲಾಘಿಸಿದ್ದಾರೆ. 

ಮುಂದಿನ ನಾಯಕತ್ವ ಬೆಳೆಸಲು ಹೊಸಬರಿಗೆ ಮಣೆ: ಅರುಣ್ ಸಿಂಗ್ ಸಮರ್ಥನೆ

ಆರ್ ಅಶೋಕ್ ಕನಕಪುರದಲ್ಲಿ ಡಿಕೆಶಿ ವಿರುದ್ಧ ಮತ್ತು ವರುಣಾದಲ್ಲಿ ವಿ ಸೋಮಣ್ಣ ಸಿದ್ದರಾಮಯ್ಯ ವಿರುದ್ಧ ಗೆಲುವನ್ನ ಸಾಧಿಸಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ