ಕಾಂಗ್ರೆಸ್‌ಗೆ ಮತ್ತೊಂದು ಆಘಾತ, ಸದ್ದಿಲ್ಲದೆ ಪಕ್ಷ ತೊರೆದ ಶಾಸಕ

Published : Jul 24, 2020, 07:24 PM ISTUpdated : Jul 24, 2020, 07:30 PM IST
ಕಾಂಗ್ರೆಸ್‌ಗೆ ಮತ್ತೊಂದು ಆಘಾತ, ಸದ್ದಿಲ್ಲದೆ ಪಕ್ಷ ತೊರೆದ ಶಾಸಕ

ಸಾರಾಂಶ

ಕಾಂಗ್ರೆಸ್ ಗೆ ಒಂದಾದ ಮೇಲೊಂದು ಆಘಾತ/ ಪಕ್ಷ ತೊರೆದ ಮತ್ತೊಬ್ಬ ಶಾಸಕ/  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾರಾಯಣ ಪಟೇಲ್/ 89 ಕ್ಕೆ ಇಳಿದ ಕಾಂಗ್ರೆಸ್ ಶಾಸಕರ ಸಂಖ್ಯೆ 

ಇಂದೋರ್(ಜು. 24) ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡ ನಂತರ ಕಾಂಗ್ರೆಸ್ ಗೆ ಒಂದಾದ ಮೇಲೆ ಒಂದು ಆಘಾತ ಎದುರಾಗುತ್ತಲೇ ಇದೆ.  ಕಾಂಗ್ರೆಸ್ ಶಾಸಕ ನಾರಾಯಣ ಸಿಂಗ್ ಪಟೇಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ  ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಈ ಮೂಲಕ  230 ಜನರ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲ  89ಕ್ಕೆ ಇಳಿದಿದೆ.  ಮಧ್ಯಪ್ರದೇಶದ 27  ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಾಗಿದೆ.

ಶಾಸಕ ದುರ್ಯೋಧನ ದರ್ಪ, ತಹಶೀಲ್ದಾರ್ ಗೆ ಕಿರುಕುಳ

ಐದು ದಿನಗಳ ಹಿಂದೆ ಪ್ರದ್ಯಮ್ನ ಸಿಂಗ್ ಲೋಧಿ ಕಾಂಗ್ರೆಸ್ ತೊರೆದಿದ್ದರು.  ಮೊದಲ ಸಾರಿ ಎಂಎಲ್ ಎ ಆಗಿದ್ದ ಪಟೇಲ್ ರಾಜೀನಾಮೆ ಸಲ್ಲಿಸಿದ್ದಾರೆ.  ನನ್ನ ಕ್ಷೇತ್ರ ಮಂಧಾಟಾದ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಪಟೇಲ್ ತಿಳಿಸಿದ್ದಾರೆ. ಜ್ಯೋತಿರಾಧಿತ್ಯ ಸಿಂಧಿಯಾ ಜತೆ ಕಾಂಗ್ರೆಸ್ ಶಾಸಕರು ತಂಡೊಪ ತಂಡವಾಗಿ ರಾಜೀನಾಮೆ ನೀಡಿದ್ದರು. ಆ ಪರ್ವ ಮುಂದುವರಿದೆ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!
ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ