ಬಿಜೆಪಿಯಲ್ಲಿ ಮತ್ತೆ ಅತೃಪ್ತಿ ಸ್ಫೋಟ: ಸಭೆಗೆ ಯತ್ನಾಳ್-ಜಾರಕಿಹೊಳಿ ಬಹಿಷ್ಕಾರ

Published : Nov 18, 2023, 07:03 AM IST
ಬಿಜೆಪಿಯಲ್ಲಿ ಮತ್ತೆ ಅತೃಪ್ತಿ ಸ್ಫೋಟ: ಸಭೆಗೆ ಯತ್ನಾಳ್-ಜಾರಕಿಹೊಳಿ ಬಹಿಷ್ಕಾರ

ಸಾರಾಂಶ

ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಹಿರಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ ಅವರು ಆರ್‌. ಅಶೋಕ್‌ ಅವರನ್ನು ವಿಧಾನಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿ ಕೆಲಹೊತ್ತಿನಲ್ಲೇ, ಅಲ್ಲಿಂದ ನಿರ್ಗಮಿಸಿ ಸಭೆಗೆ ಬಹಿಷ್ಕಾರ ಹಾಕಿದ್ದಾರೆ.   

ಬೆಂಗಳೂರು (ನ.18): ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಹಿರಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ ಅವರು ಆರ್‌. ಅಶೋಕ್‌ ಅವರನ್ನು ವಿಧಾನಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿ ಕೆಲಹೊತ್ತಿನಲ್ಲೇ, ಅಲ್ಲಿಂದ ನಿರ್ಗಮಿಸಿ ಸಭೆಗೆ ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಅಸಮಾಧಾನದ ಮೂಲ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಿಸಿರುವುದು. ಬಳಿಕ ಅದು ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆಯೊಂದಿಗೆ ತಳಕು ಹಾಕಿಕೊಂಡಿತು.

ಶುಕ್ರವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿತ್ತು. ಬೆಳಗ್ಗೆಯೇ ಶಾಸಕರಾದ ಯತ್ನಾಳ, ಜಾರಕಿಹೊಳಿ ಮತ್ತು ಅರವಿಂದ ಬೆಲ್ಲದ್‌ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದರು. ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉತ್ತರ ಕರ್ನಾಟಕದವರನ್ನೇ ಪರಿಗಣಿಸಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೊಂದರೆಯಾಗಲಿದೆ. ಮೇಲಾಗಿ, ಪಕ್ಷಕ್ಕೆ ಮೊದಲಿನಿಂದಲೂ ಗಟ್ಟಿಯಾಗಿ ಬೆಂಬಲಿಸಿಕೊಂಡು ಬಂದಿರುವ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ವಿಜಯೇಂದ್ರ ನೇಮಕಕ್ಕೆ ಬೊಮ್ಮಾಯಿ ಬಳಿ ವಿರೋಧವನ್ನೂ ವ್ಯಕ್ತಪಡಿಸಿದರು ಎನ್ನಲಾಗಿದೆ.

ನಂತರ ಶಾಸಕಾಂಗ ಸಭೆಯ ಹಿನ್ನೆಲೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಕ್ಷದ ನಾಯಕ ದುಷ್ಯಂತ್ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿದ ವೇಳೆಯೂ ಯತ್ನಾಳ ಅವರು ವಿಜಯೇಂದ್ರ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿದರು. ಸಂಜೆ ಶಾಸಕಾಂಗ ಸಭೆ ನಿಗದಿಯಾಗಿದ್ದ ಖಾಸಗಿ ಹೋಟೆಲ್‌ಗೆ ಜತೆಯಾಗಿ ಆಗಮಿಸಿದ ಯತ್ನಾಳ ಮತ್ತು ಜಾರಕಿಹೊಳಿ ಅವರು ವೀಕ್ಷಕರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆರ್.ಅಶೋಕ್ ಅವರನ್ನು ನೇಮಿಸುವ ಸುಳಿವನ್ನು ಅರಿತ ಅವರು ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಸಿಗಬೇಕು ಎಂದು ಪ್ರತಿಪಾದಿಸಿ ಸಭೆ ಆರಂಭಕ್ಕೂ ಮೊದಲೇ ಬಹಿಷ್ಕಾರ ಹಾಕಿ ತೆರಳಿದರು. ಬಳಿಕ ಅಶೋಕ್ ಅವರ ಆಯ್ಕೆ ಘೋಷಣೆ ಮಾಡಲಾಯಿತು.

ವಿದ್ಯುತ್ ಕಳವು: 68526 ರು. ದಂಡ ಕಟ್ಟಿ ಕರೆಂಟ್‌ ಕಳ್ಳ ಎನ್ನುವುದನ್ನು ನಿಲ್ಲಿಸಿ ಎಂದ ಎಚ್‌ಡಿಕೆ

ಏನೇನಾಯ್ತು?
- ಶುಕ್ರವಾರ ಬೆಳಗ್ಗೆ ಬೊಮ್ಮಾಯಿ ನಿವಾಸಕ್ಕೆ ಯತ್ನಾಳ, ಜಾರಕಿಹೊಳಿ, ಅರವಿಂದ್ ಬೆಲ್ಲದ್‌
- ಶಾಸಕಾಂಗ ನಾಯಕನ ಸ್ಥಾನಕ್ಕೆ ಉತ್ತರ ಕರ್ನಾಟಕದವರನ್ನೇ ಪರಿಗಣಿಸಬೇಕೆಂದು ಆಗ್ರಹ
- ಇಲ್ಲದಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ತೊಂದರೆ ಆಗುವ ಬಗ್ಗೆ ವಿವರಣೆ
- ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೂ ಬೊಮ್ಮಾಯಿ ಬಳಿ ವಿರೋಧ
- ಈ ಮಧ್ಯೆ ಯತ್ನಾಳ್‌ ಮನೆಗೆ ಕೇಂದ್ರ ವೀಕ್ಷಕರಾದ ನಿರ್ಮಲಾ ಸೀತಾರಾಮನ್‌, ದುಷ್ಯಂತ್ ಭೇಟಿ
- ಅವರ ಬಳಿಯೂ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ ಯತ್ನಾಳ್‌
- ಬಳಿಕ ಶಾಸಕಾಂಗ ಪಕ್ಷದ ಸಭೆಗೆ ಯತ್ನಾಳ, ಜಾರಕಿಹೊಳಿ ಆಗಮನ. ವೀಕ್ಷಕರ ಜತೆ ಚರ್ಚೆ
- ಆರ್‌. ಅಶೋಕ್‌ ನೇಮಕವಾಗುವ ಸುಳಿವು ದೊರೆತಿದ್ದರಿಂದ ಇಬ್ಬರಿಗೂ ಅಸಮಾಧಾನ
- ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಸಿಗಬೇಕೆಂದು ಆಗ್ರಹಿಸಿ ಸಭೆ ಆರಂಭಕ್ಕೂ ಮುನ್ನ ಬಹಿಷ್ಕಾರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!