
ಪುದುಚೆರಿ, (ಫೆ.19): ಕಾಂಗ್ರೆಸ್ನ ಮತ್ತೆ ಮೂವರು ಶಾಸಕರು ರಾಜೀನಾಮೆ ನೀಡಲಿದ್ದು, ವಿಧಾನಸಭೆಯಲ್ಲಿ ಆಡಳಿತದ ಸರ್ಕಾರ ಯಾವುದೇ ಕಾರಣಕ್ಕೂ ಬಹುಮತ ಸಾಬೀತು ಪಡಿಸುವುದಿಲ್ಲ ಎಂದು ಬಿಜೆಪಿ ನಾಯಕ ನಿರ್ಮಲ್ ಕುಮಾರ್ ಸುರನಾ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಲ್ವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು, ಇದರಲ್ಲಿ ಇಬ್ಬರು ಶಾಸಕರು ಈಗಾಗಲೇ ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ನಿರ್ಮಲ್ ಕುಮಾರ್, ಕೃಷ್ಣರಾವ್, ಜಾನ್ ಕುಮಾರ್ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.
ಫೆ.22ಕ್ಕೆ ವಿಶ್ವಾಸಮತ ಯಾಚನೆಗೆ ಪುದುಚೇರಿ ಸಿಎಂಗೆ ಸೂಚನೆ
ಹೊಸದಾಗಿ ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಆಗಿ ತಮಿಳಿಸಾಯಿ ಸುಂದರರಾಜನ್ ಅವರು ಆಯ್ಕೆಯಾದ ಬಳಿಕ, ಫೆ.22ರಂದು ವಿಶ್ವಾಸ ಮತಯಾಚನೆ ಮಾಡಲು ಸೂಚನೆ ನೀಡಿದ್ದಾರೆ. 33 ಸಂಖ್ಯಾಬಲದ ವಿಧಾನಸಭೆಯಲ್ಲಿ 30 ಜನವರು ನೇರವಾಗಿ ಆಯ್ಕೆ ಆಗುತ್ತಾರೆ. ಉಳಿದ ಮೂವರನ್ನು ನಾಮಿನೆಟ್ ಮಾಡುತ್ತಾರೆ.
ವಿಶ್ವಾಸಮತ ಸಾಬೀತು ಪಡಿಸಲು 16 ಶಾಸಕರ ಬೆಂಬಲ ಅಗತ್ಯವಿದ್ದು, ಈ ಹಿಂದೆ 15 ಕಾಂಗ್ರೆಸ್, ಡಿಎಂಕೆ ಮೂರು ಶಾಸಕರು ಹಾಗೂ ಓರ್ವ ಸ್ವತಂತ್ರ ಅಭ್ಯರ್ಥಿ ಬೆಂಬಲದಿಂದ ಬಹುಮತ ಪಡೆದುಕೊಂಡಿತ್ತು. ಆದರೆ ಈಗ ನಾಲ್ವರು ಶಾಸಕರು ರಾಜೀನಾಮೆ ನೀಡಿದ್ದು, ವಿಶ್ವಾಸ ಮತ ಸಾಬೀತು ಪಡಿಸಿರುವ ಅಗತ್ಯ ಎದುರಾಗಿದೆ.
ಸದ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ನ 10 ಸದಸ್ಯರು (ಸ್ಪೀಕರ್ ಸೇರಿ), ಡಿಎಂಕೆಯ ಮೂವರು, ಆಲ್ಇಂಡಿಯಾ ಕಾಂಗ್ರೆಸ್ ಪಕ್ಷ 7, ಎಐಎಎಂಡಿಕೆ 4 ಮತ್ತು ಬಿಜೆಪ 3 (ನಾಮನಿರ್ದೇನ) ಹಾಗೂ ಸ್ವತಂತ್ರ ಅಭ್ಯರ್ಥಿ ಒಬ್ಬರು ಇದ್ದು, ಇದೇ ಫೆ.22ರಂದು. ವಿಶ್ವಾಸ ಮತಯಾಚನೆಗೆ ಮುಹೂರ್ತ ಫಿಕ್ಸ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.