ಸೋಮಣ್ಣ ಸೇರಿ ಯಾರೇ ನನ್ನ ವಿರುದ್ಧ ಸ್ಪರ್ಧಿಸಿದರೂ ಸ್ವಾಗತ: ಸಿದ್ದರಾಮಯ್ಯ

Published : Apr 13, 2023, 04:40 AM IST
ಸೋಮಣ್ಣ ಸೇರಿ ಯಾರೇ ನನ್ನ ವಿರುದ್ಧ ಸ್ಪರ್ಧಿಸಿದರೂ ಸ್ವಾಗತ: ಸಿದ್ದರಾಮಯ್ಯ

ಸಾರಾಂಶ

‘ವರುಣದಲ್ಲಿ ಸೋಮಣ್ಣ ಮಾತ್ರವಲ್ಲ ನನ್ನ ವಿರುದ್ಧ ಯಾರೇ ಬಂದು ಸ್ಪರ್ಧಿಸಿದರೂ ಸ್ವಾಗತ. ಅವರ ಹೈಕಮಾಂಡ್‌ ಹೇಳಿದ ತಕ್ಷಣ ನಾನು ಸೋಲಲ್ಲ. ಆ ಬಗ್ಗೆ ಜನರು ನಿರ್ಧಾರ ಮಾಡುತ್ತಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.   

ಬೆಂಗಳೂರು (ಏ.13): ‘ವರುಣದಲ್ಲಿ ಸೋಮಣ್ಣ ಮಾತ್ರವಲ್ಲ ನನ್ನ ವಿರುದ್ಧ ಯಾರೇ ಬಂದು ಸ್ಪರ್ಧಿಸಿದರೂ ಸ್ವಾಗತ. ಅವರ ಹೈಕಮಾಂಡ್‌ ಹೇಳಿದ ತಕ್ಷಣ ನಾನು ಸೋಲಲ್ಲ. ಆ ಬಗ್ಗೆ ಜನರು ನಿರ್ಧಾರ ಮಾಡುತ್ತಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ವರುಣ ಕ್ಷೇತ್ರದಲ್ಲಿ ವಿ.ಸೋಮಣ್ಣ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಮಾಡ್ಲಪ್ಪ ಮಾಡ್ಲಿ, ನೀನೂ ಸ್ಪರ್ಧೆ ಮಾಡು. ನನ್ನ ವಿರುದ್ಧ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು. ನಾನು ಅವರನ್ನು ವೆಲ್‌ಕಮ್‌ ಮಾಡುತ್ತೇನೆ. 

ಅವರ ಸ್ಪರ್ಧೆಯ ಹಿಂದಿನ ಉದ್ದೇಶ ಏನು ಎಂಬುದು ಗೊತ್ತಿಲ್ಲ. ನಾನು ಆ ಬಗ್ಗೆ ಮಾತನಾಡುವುದಿಲ್ಲ’ ಎಂದು ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿ ಹೈಕಮಾಂಡ್‌ ನಿಮ್ಮನ್ನು ಸೋಲಿಸಲು ಸೋಮಣ್ಣ ಅವರನ್ನು ಎರಡು ಕಡೆ ಕಣಕ್ಕಿಳಿಸಿದೆಯೇ ಎಂಬ ಪ್ರಶ್ನೆಗೆ, ‘ಹೋ..ಹೋ.. ಅವರ ಹೈಕಮಾಂಡ್‌ ಹೇಳಿದ ತಕ್ಷಣ ನಾನು ಸೋತು ಬಿಡಲ್ಲ. ಆ ಬಗ್ಗೆ ಜನರು ನಿರ್ಧಾರ ಮಾಡುತ್ತಾರೆ. ಇನ್ನು ಅವರು ಎರಡು ಕಡೆ ಸ್ಪರ್ಧೆ ಮಾಡಿದ್ದಾರೆ ಎಂದರೆ ಒಂದು ಕಡೆ ಮಾಡಬೇಡ ವಾಪಸು ತೆಗೆದುಕೋ ಎನ್ನಲೇ?’ ಎಂದು ಪ್ರಶ್ನಿಸಿದರು.

ಬಿಜೆಪಿಗೆ ರಾಜೀನಾಮೆ ನೀಡಲು ಸೊಗಡು ಶಿವಣ್ಣ ತೀರ್ಮಾನ: ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ

ಸಿದ್ದು ನಿವಾಸಕ್ಕೆ ಟಿಕೆಟ್‌ ಆಕಾಂಕ್ಷಿಗಳ ದೌಡು: ಕಾಂಗ್ರೆಸ್‌ನ ಟಿಕೆಟ್‌ ಆಕಾಂಕ್ಷಿಗಳು, ಟಿಕೆಟ್‌ ಕೈತಪ್ಪುವ ಆತಂಕದಲ್ಲಿರುವ ಹಾಲಿ ಶಾಸಕರು ಹಾಗೂ ಟಿಕೆಟ್‌ ಪಡೆದರೂ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಅಭ್ಯರ್ಥಿಗಳು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬುಧವಾರ ಪರೇಡ್‌ ನಡೆಸಿದರು. ಮೊದಲ ಎರಡು ಪಟ್ಟಿಗಳಲ್ಲೂ ಟಿಕೆಟ್‌ ಘೋಷಣೆಯಾಗದ ಹರಿಹರ ಶಾಸಕ ರಾಮಪ್ಪ ಅವರು ಬುಧವಾರವೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಟಿಕೆಟ್‌ಗಾಗಿ ಲಾಬಿ ಮಾಡಿದ್ದಾರೆ. 

ಸದ್ಯದಲ್ಲೇ ಮೂರನೇ ಪಟ್ಟಿ ಬಿಡುಗಡೆಯಾಗಲಿದ್ದು, ನನಗೆ ಟಿಕೆಟ್‌ ಸಿಕ್ಕುವಂತೆ ಮಾಡಿ ಎಂದು ದುಂಬಾಲು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈಗಾಗಲೇ ಸಿದ್ದರಾಮಯ್ಯ ಅವರ ಬದಲಿಗೆ ಬಾದಾಮಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಭೀಮಸೇನ ಚಿಮ್ಮನಕಟ್ಟಿಅವರೂ ಬುಧವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಇದಕ್ಕೂ ಮೊದಲು ಬಾದಾಮಿಯಿಂದ ಆಗಮಿಸಿದ ನೂರಾರು ಮಂದಿ ಕಾರ್ಯಕರ್ತರು ಶತಾಯಗತಾಯ ಸಿದ್ದರಾಮಯ್ಯ ಅವರೇ ಬಾದಾಮಿಯಿಂದ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದರು. ಹೀಗಾಗಿ ಭೀಮಸೇನ ಚಿಮ್ಮನಕಟ್ಟಿಅವರು ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಲು ಯತ್ನಿಸಿದರು. 

ಮಹದೇಶ್ವರನ ಆಶೀರ್ವಾದದಿಂದ ಚಾಮರಾಜನಗರ ಮಾದರಿ ಜಿಲ್ಲೆಯಾಗಿಸುವಾಸೆ: ಸಚಿವ ಸೋಮಣ್ಣ

ಅಸಮಾಧಾನಿತ ಕಾರ್ಯಕರ್ತರು, ಮುಖಂಡರನ್ನು ನೀವೇ ಸಮಾಧಾನಪಡಿಸಬೇಕು. ಒಮ್ಮೆ ಕ್ಷೇತ್ರಕ್ಕೆ ಬಂದು ಅಧಿಕೃತವಾಗಿ ನಿಮ್ಮಿಂದಲೇ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಿ ನನ್ನ ಪರ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಬೇಕು ಎಂದು ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ
ಅಧಿವೇಶನದಲ್ಲಿ ನಾವು ರಾಜ್ಯದ ರೈತರಿಗೋಸ್ಕರ ಹೋರಾಡುತ್ತೇವೆ: ಆರ್‌.ಅಶೋಕ್‌