ಕನಿಷ್ಠ ಐವರಿಗೆ ಮಂತ್ರಿ ಸ್ಥಾನ ನೀಡಲು ಹೈಕಮಾಂಡ್‌ಗೆ ಮನವಿ

Kannadaprabha News   | Kannada Prabha
Published : Feb 25, 2026, 04:39 AM IST
Siddaramaiah

ಸಾರಾಂಶ

ಹೊಸದಾಗಿ, ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಸಹಿ ಮಾಡಿ ಹೈಮಾಂಡ್‌ಗೆ ಪತ್ರ ಬರೆದಿರುವುದು ಸತ್ಯ. ಕೆಲ ಸಚಿವರಿಗೆ ಕೆಲಸ ಮಾಡಲು ಆಸಕ್ತಿಯೇ ಇಲ್ಲ. ಕೆಲವರು ಯಾವುದಾದರೂ ಕೋಟಾದ ಮೇಲೆ ಪ್ರತಿ ಬಾರಿಯೂ ಸಚಿವರಾಗುತ್ತಲೇ ಇರುತ್ತಾರೆ. ತಮ್ಮ ಕುರ್ಚಿ ಸೇಫ್ ಆಗಿದೆ.

ಕೆ.ಎಂ.ದೊಡ್ಡಿ : ಮುಂಬರುವ ಸಚಿವ ಸಂಪುಟದಲ್ಲಿ ಮೊದಲ ಬಾರಿ ಆಯ್ಕೆಯಾಗಿರುವ ಕನಿಷ್ಠ ಐದು ಶಾಸಕರಿಗೆ ಮಂತ್ರಿ ಸ್ಥಾನ ನೀಡುವಂತೆ ಎಂದು ಹೈಕಮಾಂಡ್ ಬಳಿ ಮನವಿ ಮಾಡಿದ್ದೇವೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಸಮೀಪದ ಮೆಣಸಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಚುರುಕಾಗಿ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಆಡಳಿತ ಯಂತ್ರಕ್ಕೆ ವೇಗ ನೀಡುವ ಹೊಸಬರಿಗೆ ಅವಕಾಶ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದರು.

ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಸಹಿ ಮಾಡಿ ಹೈಮಾಂಡ್‌ಗೆ ಪತ್ರ

ಹೊಸದಾಗಿ, ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಸಹಿ ಮಾಡಿ ಹೈಮಾಂಡ್‌ಗೆ ಪತ್ರ ಬರೆದಿರುವುದು ಸತ್ಯ. ಕೆಲ ಸಚಿವರಿಗೆ ಕೆಲಸ ಮಾಡಲು ಆಸಕ್ತಿಯೇ ಇಲ್ಲ. ಕೆಲವರು ಯಾವುದಾದರೂ ಕೋಟಾದ ಮೇಲೆ ಪ್ರತಿ ಬಾರಿಯೂ ಸಚಿವರಾಗುತ್ತಲೇ ಇರುತ್ತಾರೆ. ತಮ್ಮ ಕುರ್ಚಿ ಸೇಫ್ ಆಗಿದೆ. ಅದಕ್ಕಾಗಿ ಅವರಿಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ. ಇಂತಹವರನ್ನು ಬದಲಾಯಿಸಿ ಎಂಬುದು ನಮ್ಮ ಬೇಡಿಕೆ ಎಂದು ಪ್ರತಿಕ್ರಿಯಿಸಿದರು.

ಮುಂಬರುವ ಬಜೆಟ್‌ನಲ್ಲಿ ಜಿಲ್ಲೆ ಹಾಗೂ ಮದ್ದೂರು ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಬಳಿ ಜಿಲ್ಲೆಯ ಶಾಸಕರು ಮನವಿ ಮಾಡಿದ್ದೇವೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿದೆ ಎಂದರು.

ಶಾಸಕರು ವಿದೇಶ ಪ್ರವಾಸ ಕೈಗೊಳ್ಳವುದು ಅವರ ವೈಯಕ್ತಿಕ ವಿಚಾರ. ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಹುದ್ದೆಗೇರುವುದು ನಿಶ್ಚಿತ. ಕಾಂಗ್ರೆಸ್ ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮದ್ದೂರು ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಸಂಕಲ್ಪ ಕೈಗೊಂಡು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಗ್ರಾಮಗಳಲ್ಲಿನ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಸಮಾಜ ಸೇವಕ ಕದಲೂರು ರವಿ, ಹಾಪ್‌ಕಾಮ್ಸ್ ನಿರ್ದೇಶಕ ಮೆಣಸಗೆರೆ ಪ್ರಕಾಶ್, ಮುಖಂಡರಾದ ಮರಿಸ್ವಾಮಿ, ಎಂ.ಆರ್.ಮಧುಸೂದನ್, ನಟರಾಜು, ರವಿ, ಎಂ.ಪಿ.ರಾಜು, ಮನು, ಕುಮಾರ, ನಂಜುಂಡಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜಯಲಲಿತಾ ಜನ್ಮದಿನದಂದೇ ಹೊಸ ಪಕ್ಷ ಘೋಷಿಸಿದ ಆಪ್ತೆ ಶಶಿಕಲಾ; ತಮಿಳುನಾಡು ರಾಜಕಾರಣದಲ್ಲಿ ಚಿನ್ನಮ್ಮ ಕೋಲಾಹಲ!
Political Row: ಗೋವು, ಟೋಪಿ, ಲಸಿಕೆ, ಪಾಕಿಸ್ತಾನ ಪದಗಳನ್ನ ತೆಗೆದರೆ ಬಿಜೆಪಿ ಸಾಯುತ್ತದೆ.. ಎಂದ ಆ ನಾಯಕ ಯಾರು?