ಕಾಂಗ್ರೆಸ್‌ ವಿರುದ್ಧ ಮತ್ತೆ ಗುಲಾಂ ನಬಿ ಆಜಾದ್ ಗುಡುಗು

Kannadaprabha News   | Asianet News
Published : Aug 28, 2020, 08:42 AM IST
ಕಾಂಗ್ರೆಸ್‌ ವಿರುದ್ಧ ಮತ್ತೆ ಗುಲಾಂ ನಬಿ ಆಜಾದ್ ಗುಡುಗು

ಸಾರಾಂಶ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಆಯ್ಕೆಯಾದವರಿಗೆ ಕನಿಷ್ಠ ಶೇ.51 ಮಂದಿಯ ಬೆಂಬಲವಾದರೂ ಇರುತ್ತದೆ. ಆದರೆ ನೇಮಕಗೊಂಡು ಅಧ್ಯಕ್ಷರಾಗುವವರಿಗೆ ಶೇ.1ರಷ್ಟು ಬೆಂಬಲ ಇರುವ ಸಾಧ್ಯತೆಯೂ ಕಡಿಮೆ ಎಂದು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ಆ.28): ಪಕ್ಷದಲ್ಲಿ ಆಮೂಲಾಗ್ರ ಬದಲಾವಣೆ ಕೋರಿ ಇತ್ತೀಚೆಗೆ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ 23 ಮಂದಿ ಪೈಕಿ ಒಬ್ಬರಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಮತ್ತೆ ನಾಯಕತ್ವದ ವಿರುದ್ಧ ತೀಕ್ಷ್ಣ ದನಿ ಎತ್ತಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಆಯ್ಕೆಯಾದವರಿಗೆ ಕನಿಷ್ಠ ಶೇ.51 ಮಂದಿಯ ಬೆಂಬಲವಾದರೂ ಇರುತ್ತದೆ. ಆದರೆ ನೇಮಕಗೊಂಡು ಅಧ್ಯಕ್ಷರಾಗುವವರಿಗೆ ಶೇ.1ರಷ್ಟು ಬೆಂಬಲ ಇರುವ ಸಾಧ್ಯತೆಯೂ ಕಡಿಮೆ. ಕಾಂಗ್ರೆಸ್‌ ಪಕ್ಷ ಸಕ್ರಿಯ ಹಾಗೂ ಬಲಿಷ್ಠವಾಗಬೇಕು ಎಂಬ ಇಚ್ಛೆ ಇದ್ದರೆ, ಪಕ್ಷದ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರನ್ನೂ ಚುನಾವಣೆ ಮೂಲಕ ಆರಿಸಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ಅಧ್ಯಕ್ಷರ ಆಯ್ಕೆಗೆ ಈ ಬಾರಿ ಕಾಂಗ್ರೆಸ್‌ನಲ್ಲಿ ಚುನಾವಣೆ!

ಪಕ್ಷದ ಆಂತರಿಕ ಕಾರ್ಯನಿರ್ವಹಣೆ ಬಗ್ಗೆ ನೈಜ ಆಸಕ್ತಿ ಇರುವ ಯಾವುದೇ ವ್ಯಕ್ತಿ ಪ್ರತಿಯೊಬ್ಬ ರಾಜ್ಯ ಹಾಗೂ ಜಿಲ್ಲಾಧ್ಯಕ್ಷನೂ ಆಯ್ಕೆಯಾಗಬೇಕು ಎಂದು ಬಯಸುತ್ತೇನೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಸುಲಭವಾಗಿ ನೇಮಕಗೊಳ್ಳುವ ಸದಸ್ಯರು ನಮ್ಮ ಪ್ರಸ್ತಾವಗಳನ್ನು ವಿರೋಧಿಸುತ್ತಾರೆ. ಸಿಡಬ್ಲ್ಯುಸಿ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದರೆ ತೊಂದರೆ ಏನು ಎಂದು ಪ್ರಶ್ನಿಸಿದ್ದಾರೆ.

ಪತ್ರಕ್ಕೆ ಸಹಿ ಹಾಕಿದ್ದ ಜಿತಿನ್‌ ವಿರುದ್ಧ ಶಿಸ್ತು ಕ್ರಮಕ್ಕೆ ಪಟ್ಟು

ನವದೆಹೆಲಿ: ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಪತ್ರ ಬರೆದಿದ್ದ 23 ನಾಯಕರ ಪೈಕಿ ಒಬ್ಬರಾಗಿರುವ ಕೇಂದ್ರದ ಮಾಜಿ ಸಚಿವ ಜಿತಿನ್‌ ಪ್ರಸಾದ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಉತ್ತರಪ್ರದೇಶದ ಲಖೀಂಪುರ ಖೇರಿ ಜಿಲ್ಲಾ ಕಾಂಗ್ರೆಸ್‌ ಘಟಕ ನಿರ್ಣಯ ಅಂಗೀಕರಿಸಿದೆ. 

ಅವರು ಸಂಪೂರ್ಣ ಅಶಿಸ್ತಿನಿಂದ ನಡೆದುಕೊಂಡಿದ್ದಾರೆ ಎಂದು ದೂರಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ನಾಯಕ ಕಪಿಲ್‌ ಸಿಬಲ್‌, ಬಿಜೆಪಿ ಮೇಲೆ ಕಾಂಗ್ರೆಸ್‌ ಸರ್ಜಿಕಲ್‌ ಸ್ಟ್ರೈಕ್ ಮಾಡಬೇಕೇ ಹೊರತು, ಸ್ವಪಕ್ಷದ ಜಿತಿನ್‌ ಪ್ರಸಾದ ಮೇಲಲ್ಲ ಎಂದು ಟಾಂಗ್‌ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣಕ್ಕೆ 7 ವರ್ಷ ಜೈಲು: ವಿಧೇಯಕ ಮಂಡಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌
ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ