2ನೇ ಹಂತದ ಚುನಾವಣೆ: ನಾಮಪತ್ರಕ್ಕೆ ಇಂದು ಕೊನೆಯ ದಿನ

Published : Apr 19, 2024, 09:00 AM IST
2ನೇ ಹಂತದ ಚುನಾವಣೆ: ನಾಮಪತ್ರಕ್ಕೆ ಇಂದು ಕೊನೆಯ ದಿನ

ಸಾರಾಂಶ

ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ 90 ಅಭ್ಯರ್ಥಿಗಳ ಪೈಕಿ 83 ಪುರುಷರು, 1 ಮಹಿಳೆಯರಿದ್ದಾರೆ. ಈವರೆಗೆ ನಾಮಪತ್ರ ಸಲ್ಲಿಕೆ ಮಾಡಿದ 241 ಅಭ್ಯರ್ಥಿ ಗಳಲ್ಲಿ 221 ಪುರುಷರು, 20 ಮಹಿಳೆಯರಿದ್ದಾರೆ. ಬಿಜೆಪಿಯಿಂದ 45, ಕಾಂಗ್ರೆಸ್‌ನಿಂದ 48, ಬಿಎಸ್‌ಪಿ 15. ಎಎಪಿ 1, ಜೆಡಿಎಸ್‌ 1, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳಿಂದ 98, ಪಕ್ಷೇತರರಿಂದ 143 ನಾಡುಪತ್ರಗಳು ಸಲ್ಲಿಕೆಯಾಗಿವೆ.

ಬೆಂಗಳೂರು(ಏ.19): ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಿರುಸಾಗಿದ್ದು ಗುರುವಾರ ಬಿ.ವೈ, ರಾಘವೇಂದ್ರ, ಉಮೇಶ್ ಜಾಧವ್ ಸೇರಿ 90 ಅಭ್ಯರ್ಥಿಗಳಿಂದ 104 ಉಮೇದುವಾರಿಕೆ ಸಲ್ಲಿಕೆಯಾಗಿದೆ. ಈವರೆಗೆ ಒಟ್ಟು 241 ಅಭ್ಯರ್ಥಿಗಳಿಂದ 351 ನಾಮಪತ್ರ ಸಲ್ಲಿಕೆಯಾದಂತಾಗಿದೆ. ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ.

ಗುರುವಾರ ವಿವಿಧ ಪಕ್ಷದ ಅಭ್ಯರ್ಥಿಗಳು ಬೃಹತ್ ಯಾಲಿ ಮತ್ತು ಸಮಾವೇಶಗಳನ್ನು ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿದರು. ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಕಲಬುರಗಿಯಲ್ಲಿ ಬಿಜೆಪಿ ಉಮೇಶ್ ಜಾಧವ್, ಬಾಗಲಕೋಟೆಯಲ್ಲಿ ಬಿಜೆಪಿ ಸಂಸದ ಗದ್ದಿಗೌಡರ್, ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕಾ ಜಾರಕಿಹೊಳಿ, ಧಾರವಾಡದಲ್ಲಿ ಪಕ್ಷೇತರ ಅಭ್ಯರ್ಥಿ ಯಾಗಿ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಸಿದರು.

2ನೇ ಹಂತಕ್ಕೆ ನಾಮಪತ್ರ ಸಲ್ಲಿಕೆ ಭರಾಟೆ ಜೋರು; ಜೋಶಿ, ಶೆಟ್ಟರ್, ಬೊಮ್ಮಾಯಿ ಸೇರಿ 52 ಮಂದಿ ಉಮೇದುವಾರಿಕೆ

ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ 90 ಅಭ್ಯರ್ಥಿಗಳ ಪೈಕಿ 83 ಪುರುಷರು, 1 ಮಹಿಳೆಯರಿದ್ದಾರೆ. ಈವರೆಗೆ ನಾಮಪತ್ರ ಸಲ್ಲಿಕೆ ಮಾಡಿದ 241 ಅಭ್ಯರ್ಥಿ ಗಳಲ್ಲಿ 221 ಪುರುಷರು, 20 ಮಹಿಳೆಯರಿದ್ದಾರೆ. ಬಿಜೆಪಿಯಿಂದ 45, ಕಾಂಗ್ರೆಸ್‌ನಿಂದ 48, ಬಿಎಸ್‌ಪಿ 15. ಎಎಪಿ 1, ಜೆಡಿಎಸ್‌ 1, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳಿಂದ 98, ಪಕ್ಷೇತರರಿಂದ 143 ನಾಡುಪತ್ರಗಳು ಸಲ್ಲಿಕೆಯಾಗಿವೆ.

ಸುರಪುರ ವಿಧಾನಸಭೆ: 

ಈ ನಡುವೆ, ಸುರಪುರ ವಿಧಾನಸಭಾ ಉಪಚುನಾವಣೆಗೆ ಮೂವರು ಅಭ್ಯರ್ಥಿಗಳಿಂದ ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್‌, ಬಿಜೆಪಿ ಮತ್ತು ಪಕ್ಷೇತರರಿಂದ ಉಮೇದುವಾರಿಕೆ ಸಲ್ಲಿಕೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?