BJP ಜೊತೆಗೆ ಜೆಡಿಎಸ್ ವಿಲೀನವಾಗುತ್ತಾ? ಬಿಜೆಪಿ ಉಪಾಧ್ಯಕ್ಷ ಸ್ಫೋಟಕ ಸುಳಿವು

Published : Dec 20, 2020, 03:45 PM ISTUpdated : Dec 20, 2020, 03:50 PM IST
BJP ಜೊತೆಗೆ ಜೆಡಿಎಸ್ ವಿಲೀನವಾಗುತ್ತಾ? ಬಿಜೆಪಿ ಉಪಾಧ್ಯಕ್ಷ ಸ್ಫೋಟಕ ಸುಳಿವು

ಸಾರಾಂಶ

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಥವಾ ವಿಲೀನವಾಗುತ್ತಾ ಎನ್ನುವ ಚರ್ಚೆಗಳು ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಇನ್ನು ಈ ಬಗ್ಗೆ ಬಿಜೆಪಿ ಉಪಾಧ್ಯಕ್ಷ ಸುಳಿವು ಕೊಟ್ಟಿದ್ದಾರೆ.

ಬೆಂಗಳೂರು, (ಡಿ.20):  ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್‌ ವಿಲಿನದ ಬಗ್ಗೆ ಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಸ್ಫೋಟಕ ಸುಳಿವು ಒಂದನ್ನು ಕೊಟ್ಟಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕರ್ನಾಟಕದಲ್ಲೂ ಧ್ರುವೀಕರಣ ಆರಂಭವಾಗಲಿದೆ. ಅಭಿವೃದ್ಧಿ ಮಾಡುವ ಪಕ್ಷದ ಕಡೆಗೆ ಎಲ್ಲರೂ ಮುಖ ಮಾಡುತ್ತಾರೆ ಎಂದು ಹೇಳಿದರು.

BJP ಜೊತೆ JDS ವಿಲೀನ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಕುಮಾರಸ್ವಾಮಿ

ರಾಜಕೀಯ ಪಕ್ಷವೊಂದು ವಿಲೀನ ಆಗುತ್ತಾ ಅನ್ನೋ ಪ್ರಶ್ನೆಗೆ ಸುಳಿವು ಕೊಟ್ಟ ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಈ ವೇಳೆ, ನಾನೂ ಮಾಧ್ಯಮದಲ್ಲೇ ನೋಡಿದ್ದೇನೆಂದು ಸ್ಮೈಲ್ ಮಾಡಿ ಸುಮ್ಮನಾದರು.

ಕರ್ನಾಟಕದಲ್ಲಿ ಈಗ ಸ್ಥಿರ ಸರ್ಕಾರ ಇದೆ. ಬರುವಂತ ದಿನಗಳಲ್ಲಿ ರಾಜಕೀಯ ಧ್ರುವೀಕರಣ ಮತ್ತಷ್ಟು ಹೆಚ್ಚಾಗಲಿದೆ. ಮೋದಿ ಅಲೆ, ಬಿಜೆಪಿ ಅಲೆ ಸ್ಪಷ್ಟವಾಗಿದೆ. ಕರ್ನಾಟಕದಲ್ಲೂ ಧ್ರುವೀಕರಣ ಆರಂಭವಾಗಲಿದೆ. ಸಮ್ಮಿಶ್ರ ಸರ್ಕಾರ ಮಾಡಿದವರೇ ಪರಸ್ಪರ ಕಿತ್ತಾಡ್ತಿರೋದು ನೋಡಿದರೆ ಬರುವಂತ ದಿನಗಳಲ್ಲಿ ರಾಜ್ಯದ ಅಭಿವೃದ್ಧಿ ಮಾಡುವ ಪಕ್ಷದ ಕಡೆಗೆ ಎಲ್ಲರು ಮುಖ ಮಾಡ್ತಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಸದ್ಯ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿಗೆ ಬೆಂಬಲಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ವಿಲೀನವಾಗುತ್ತಾ? ಅಥವಾ ಮೈತ್ರಿ ಮಾಡಿಕೊಳ್ಳುತ್ತಾ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ