
ಹಾಸನ, (ಜೂನ್.25): ಅರಸೀಕೆರೆ ನಗರಸಭೆ ಜೆಡಿಎಸ್ ಸದಸ್ಯರಿಗೆ ಬಿಜೆಪಿ ಹಣದ ಆಮೀಷವೊಡ್ಡಿದೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಸುದ್ದಿಗೋಷ್ಠಿಯಲ್ಲಿ ಬಂಡಲ್ ಹಣ ಇಟ್ಟು ಗಂಭೀರ ಆರೋಪ ಮಾಡಿದ್ದಾರೆ.
"
ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಹೆಚ್ಡಿ ರೇವಣ್ಣ ಹಾಗೂ ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ನಗರಸಭೆ ಸದಸ್ಯರೊಬ್ಬರ ಮನೆಯಲ್ಲಿ 10 ಲಕ್ಷ ರೂಪಾಯಿ ಇಟ್ಟು ಹೋಗಿದ್ದಾರೆ ಎನ್ನಲಾಗಿರುವ ಹಣವನ್ನ ಮಾಧ್ಯಮಗಳಿಗೆ ಪ್ರದರ್ಶನ ಮಾಡಿದರು.
ಮಾಜಿ ಸಚಿವ ಎಚ್ಡಿ ರೇವಣ್ಣ ವಿರುದ್ಧ ದೂರು ದಾಖಲು
ಬಳಿಕ ಮಾತನಾಡಿದ ರೇವಣ್ಣ, ಅರಸಿಕೆರೆ ಪುರಸಭೆಯಲ್ಲಿ ಮೆಜಾರಿಟಿ ಪಡೆದುಕೊಳ್ಳಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಹಣದ ಆಮಿಷವೊಡ್ಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಬರುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಬೆಂಬಲಿಗರು ಹಣವನ್ನ ನೀಡಿ ಹೋಗಿದ್ದಾರೆ ಎಂದು ಆರೋಪಿಸಿದರು.
ಎರಡನೇ ವಾರ್ಡ್ನ ನಗರಸಭೆ ಸದಸ್ಯೆ ಕಲೈರಸಿಗೆ 10 ಲಕ್ಷ ಹಣ ಸಂತೋಷ್ ನೀಡಿದ್ದಾರೆ. ಈಗ 10 ಲಕ್ಷ ಕೊಟ್ಟಿದ್ದಾರೆ, ಬಂದ ನಂತರ 15 ಲಕ್ಷ ಕೊಡುತ್ತೇವೆ ಎಂದು ಸಂತೋಷ್ ಹೇಳಿದ್ದಾರೆ. ಇದರ ಹಿಂದೆ ಸಿಎಂ ಕೈವಾಡವೂ ಇರಬಹುದು. ಹಾಗಾಗಿ ಇದರ ತನಿಖೆಯನ್ನು ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.