ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ: ಲಕ್ಷ್ಮಣ ಸವದಿ

Published : Nov 21, 2023, 10:15 PM IST
ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ: ಲಕ್ಷ್ಮಣ ಸವದಿ

ಸಾರಾಂಶ

ಬಿಜೆಪಿಯಲ್ಲಿ ಆಂತರಿಕ ಕಲಹ ಬಹಳಷ್ಟಿದೆ. ರಾಜ್ಯದ ಜನತೆ ಬಿಜೆಪಿಯಲ್ಲಿನ ಬೆಳವಣಿಗೆ ನೋಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಕ್ಕಪಾಠ ಕಲಿಸಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ 

ವಿಜಯಪುರ(ನ.21):  ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ. ಬಿಜೆಪಿಯಲ್ಲಿ ಭವಿಷ್ಯ ಇಲ್ಲ. ಅದನ್ನು ನಾನು ಅರ್ಥ ಮಾಡಿಕೊಂಡೇ ನಾನು ಬಿಜೆಪಿ ಮನೆಯಿಂದ ಹೊರಗಡೆ ಬಂದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಕಲಹ ಬಹಳಷ್ಟಿದೆ. ರಾಜ್ಯದ ಜನತೆ ಬಿಜೆಪಿಯಲ್ಲಿನ ಬೆಳವಣಿಗೆ ನೋಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಕ್ಕಪಾಠ ಕಲಿಸಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅನಾಥಾಶ್ರಮ ಹೆಸರಲ್ಲಿ ತಾಲಿಬಾನ್ ಮಾದರಿ ಶಿಕ್ಷಣ ನೀಡ್ತಿರೋ ಆರೋಪ ; ಆ ಬಗ್ಗೆ ನನಗೆ ಗೊತ್ತಿಲ್ಲ ಎಂದ ಗೃಹಸಚಿವ! 

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟವಾಗುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಭವಿಷ್ಯವಿಲ್ಲದ ಬಿಜೆಪಿ ಬರುವ 20 ವರ್ಷಗಳ ಕಾಲ ವಿಪಕ್ಷದಲ್ಲೇ ಇರಲಿದೆ. ಬಿಜೆಪಿಯಲ್ಲಿ ತತ್ವ, ಸಿದ್ಧಾಂತಗಳನ್ನು ಗಾಳಿಗೆ ತೂರಿದೆ. ನಾನು ಹೇಳಿದ್ದಲ್ಲ, ಅದೇ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿರುವುದು ಎಂದ ಅವರು, ರಾಮಕೃಷ್ಣ ಹೆಗಡೆ ಅವರ ಅಪ್ಪಟ ಬೆಂಬಲಿಗರಾಗಿದ್ದ ನಾವು, ಅವರು ಇರುವವರೆಗೆ ಅವರ ಜತೆಯಲ್ಲಿದ್ದೆವು. ಹೆಗಡೆಯವರಿಗೆ ಅನಾರೋಗ್ಯಕ್ಕೆ ತುತ್ತಾದ ಬಳಿಕ ಲಾಲಕೃಷ್ಣ ಅಡ್ವಾಣಿ ಅವರು ನಮ್ಮನ್ನು ಸಂಪರ್ಕಿಸಿ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡರು. ಆಗ ಬಿಜೆಪಿಯಲ್ಲಿ ಅನಂತಕುಮಾರ್ ಅವರಂಥ ಉತ್ತಮ ನಾಯಕರಿದ್ದರು. ಈಗ ಆ ಬಿಜೆಪಿ ಪಕ್ಷದಲ್ಲಿ ಅಂಥ ನಾಯಕರಿಲ್ಲ. ಕುಟುಂಬ ರಾಜಕೀಯ ಮತ್ತು ಆಂತರಿಕ ಸಂಘರ್ಷದಿಂದ ಬಿಜೆಪಿ ತತ್ತರಿಸಿದೆ ಎಂದರು.

135 ಶಾಸಕರ ಬಲದೊಂದಿಗೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಯಾವ ಪಕ್ಷವನ್ನು ಯಾರು ತೊರೆಯಲಿದ್ದಾರೆ ಎಂದು ಕಾದು ನೋಡಿ ಎಂದ ಅವರು, ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳಾದ ಗ್ಯಾರಂಟಿ ಯೋಜನೆಗಳಿಂದ ಜನರು ಸಂತೃಪ್ತರಾಗಿದ್ದಾರೆ. ಇದನ್ನು ಸಹಿಸಲಾಗದ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!