
ಕಾಗವಾಡ(ನ.16): ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರು. ಆಫರ್ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆಂದರೆ ಅವರ ಬಳಿ ದಾಖಲೆ ಇರಬೇಕು. ಬಿಜೆಪಿಯವರು ಎಷ್ಟೇ ಆಮಿಷವೊಡ್ಡಿದರೂ ನಮ್ಮಲ್ಲಿ ಯಾರೂ ಮಾರಾಟಕ್ಕಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿ ಹೇಳಿಕೆ ನೀಡಿದ್ದಾರೆ ಎಂದರೆ ಅವರ ಬಳಿ ಏನಾದರೂ ಮಾಹಿತಿ ಇರಬಹುದು. ಆದರೆ, ಬಿಜೆಪಿಯವರು 50 ಕೋಟಿ ಕೊಡಲಿ, 100 ಕೋಟಿ ಕೊಡಲಿ. ಕಾಂಗ್ರೆಸ್ ಶಾಸಕರಾರೂ ಬಿಜೆಪಿಗೆ ಹೋಗಲ್ಲ ಎಂದು ತಿಳಿಸಿದ್ದಾರೆ.
ಶಿಗ್ಗಾಂವಿಯಲ್ಲಿ ನಾವೇ ಗೆಲ್ಲೋದು: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ
ಅವರು ಎಷ್ಟೇ ಡಿಮ್ಯಾಂಡ್ ಮಾಡಲಿ, ನಮ್ಮ ಶಾಸಕರು ಮಾರಾಟಕ್ಕಿಲ್ಲ. ಎಲ್ಲ ಶಾಸಕರು ಸ್ವಾಭಿಮಾನದಿಂದ ಇದ್ದಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.