
ಬೆಂಗಳೂರು (ಜ.23): ಶ್ರೀರಾಮಚಂದ್ರ ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ? ಅಯೋಧ್ಯೆ ರಾಮಮಂದಿರ ಕೇವಲ ಬಿಜೆಪಿಯವರಿಗೆ ಸಂಬಂಧಿಸಿದ್ದು ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಮ ಬಿಜೆಪಿಯವರಿಗೆ ಮಾತ್ರ ಸೀಮಿತವಲ್ಲ, ಸಿದ್ದ'ರಾಮ'ನಯ್ಯವರಲ್ಲೂ ರಾಮನಿದ್ದಾನೆ, ನನ್ನ ಹೆಸರಿನಲ್ಲಿ ಶಿವನಿದ್ದಾನೆ ಅಷ್ಟೇ ಅಲ್ಲ ಶಿವನ ಮಗ ಕುಮಾರನೂ ಇದ್ದಾನೆ. ನಾವೆಲ್ಲ ಹಿಂದುಗಳಲ್ವ? ರಾಮಭಕ್ತರು ಅಲ್ವಾ ಎಂದು ಪ್ರಶ್ನಿಸಿದರು.
ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಮರಾಜ್ಯದ ಕನಸು ನನಸಾಗಿದೆ: ಡಿಕೆ ಶಿವಕುಮಾರ
ಬಿಜೆಪಿಯವರಿಗೆ ಹೊಟ್ಟೆ ಉರಿಯಾಗಿದೆ. ಹೇಗಾದ್ರೂ ಮಾಡಿ ಜನರ ದೃಷ್ಟಿಯಲ್ಲಿ ಕಾಂಗ್ರೆಸ್ ಪಕ್ಷ, ಮುಖಂಡರನ್ನು ಹಿಂದು ವಿರೋಧಿಗಳನ್ನಾಗಿ ಮಾಡಬೇಕು ಆ ಮೂಲಕ ಚುನಾವಣೆಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳಬೇಕು ಕುತಂತ್ರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಯೋಧ್ಯೆ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ರಾಜ್ಯಾದ್ಯಂತ ಮುಜುರಾಯಿ ಇಲಾಖೆ ದೇವಸ್ಥಾನಗಳಲ್ಲಿ ಪೂಜೆ ನಡೆಸುವಂತೆ ನಾವು ಆದೇಶ ನೀಡಿದ್ದೆವು. ಈ ಬಗ್ಗೆ ಸಭೆ ನಡೆಸಿ ಪೂಜೆ ಮಾಡಲು ನಮ್ಮ ಸರ್ಕಾರವೇ ಆದೇಶ ಮಾಡಿತ್ತು. ನಾವು ಹಿಂದೂ ವಿರೋಧಿಗಳಲ್ಲ, ರಾಮನನ್ನೂ ಪೂಜಿಸುತ್ತೇವೆ. ಸೀತೆಯನ್ನೂ ಪೂಜಿಸುತ್ತೇವೆ ಎಂದು ತಿರುಗೇಟು ನೀಡಿದರು. ಅಯೋಧ್ಯೆ ಉದ್ಘಾಟನೆ ದಿನ ಪೂಜೆಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಆರೋಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.