
ಕೊಪ್ಪಳ (ಆ.12): ದಲಿತರು ಮತ್ತು ಹಿಂದುಳಿದವರನ್ನು ಕಂಡರೇ ಬಿಜೆಪಿಯವರಿಗೆ ಆಗಲ್ಲ. ಅದಕ್ಕಾಗಿಯೇ ನನ್ನ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ. ಈಗ ನಾನು ಏಟು ತಿಂದ ಹುಲಿಯಾಗಿದ್ದು, ರಾಜ್ಯ ಮೆಚ್ಚುವಂತಹ ಕೆಲಸ ಮಾಡಿ ಬಿಜೆಪಿಯವರ ಆರೋಪಗಳಿಗೆ ಉತ್ತರ, ಸ್ಪಷ್ಟನೆ ನೀಡುತ್ತೇನೆ ಎಂದು ಸಚಿವ ಬಿ.ನಾಗೇಂದ್ರ ತಿರುಗೇಟು ನೀಡಿದ್ದಾರೆ.
ನಾಗೇಂದ್ರ ರಾಜಿನಾಮೆ ನೀಡದಿದ್ದರೆ ಸದನ ನಡೆಯಲು ಬಿಡಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅವರಿಗೆ ದಿಟ್ಟ ಉತ್ತರವನ್ನ ಕೊಡಲಿಕ್ಕೆ ನಾವು ಸದನದಲ್ಲಿ ತಯಾರಾಗಿದ್ದೇವೆ. ನಾನು ಅಪರಾಧಿಯಲ್ಲ, ಆರೋಪಿಯಷ್ಟೇ. ಆದರೂ ಕೂಡ ನನಗೆ ಸಚಿವ ಸ್ಥಾನ ನೀಡಿದ್ದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವುದು ವಿರೋಧಪಕ್ಷದವರ ಕೆಲಸ. ಅವರು ಪ್ರಶ್ನೆಗಳಿಗೆ ಸಚಿವ ಸಂಪುಟದ ಎಲ್ಲರೂ ಅದಕ್ಕೆ ಉತ್ತರ ಕೊಡುತ್ತೇವೆ. ನಮ್ಮ ಪಕ್ಷದ ಸಿದ್ಧಾಂತಗಳಿಗೆ ನಾವು ಬದ್ಧರಾಗಿದ್ದೇವೆ
ಬಿಜೆಪಿಯವರು ಸದನದಲ್ಲಿ ಕೇಳಿದರೇ ನಾನು ಸ್ಪಷ್ಟನೆ ನೀಡುತ್ತೇನೆ. ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಈ ಕುರಿತು ಹೇಳಿದ್ದಾರೆ. ಇಷ್ಟಾದರೂ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ದೆಹಲಿ ಸೇರಿದಂತೆ ವಿವಿಧೆಡೆ ಪರವಾನಗಿ ಪಡೆದು ಹೋಗಿ ಬಂದಿದ್ದೇನೆ. ಬಿಜೆಪಿಯವರಿಗೆ ಮಾಹಿತಿ ಕೊರತೆ ಇದೆ. ದಲಿತರನ್ನ ಬೆಳೆಯಲು ಬಿಡಬಾರದೆಂದು ತುಳಿಯಲು ಹೋರಾಟ ಮಾಡುತ್ತಿದ್ದಾರೆ ಎಂದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ನಾನು ಮುಕ್ತನಾಗುತ್ತೇನೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಹೋಗಿದ್ದ ಹಣವನ್ನು ವಾಪಸ್ ತರುತ್ತಿದ್ದೇವೆ. ಅದು ಯಾವ ರೀತಿ ಪೋಲಾಗಿದೆ ಅನ್ನೋದು ಪ್ರಪಂಚಕ್ಕೆ ಗೊತ್ತು. ಆ ಪ್ರಕರಣ ನ್ಯಾಯಾಲಯದಲ್ಲಿದೆ. ನಾನು ಆ ಕೇಸ್ನಿಂದ ನಿರಪರಾಧಿಯಾಗಿ ಹೊರಗಡೆ ಬರುತ್ತೇನೆ. ಈ ವಿಷಯದಲ್ಲಿ ದೇವರ ಮೇಲೆ ನಂಬಿಕೆ ಇದೆ ಎಂದು ನಾಗೇಂದ್ರ ಹೇಳಿದರು.
- ಬಿಜೆಪಿಯವರಿಗೆ ದಲಿತರನ್ನು ಕಂಡರೇ ಆಗುವುದಿಲ್ಲ
- ವಾಲ್ಮೀಕಿ ಹಗರಣದಿಂದ ಮುಕ್ತನಾಗುವೆ: ಸಚಿವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.