
ಬಾದಾಮಿ (ಜು.06): ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪುನಃ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಮನವಿ ಮಾಡಲು ಕ್ಷೇತ್ರದ 150ಕ್ಕೂ ಹೆಚ್ಚಿನ ಮುಖಂಡರು, ಅಭಿಮಾನಿಗಳು ಸೋಮವಾರ ರಾತ್ರಿ ಬಾದಾಮಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಲಿರುವ ಅಭಿಮಾನಿಗಳು ಬರುವ ಚುನಾವಣೆಯಲ್ಲೂ ಬಾದಾಮಿಯಿಂದಲೇ ಸ್ಪರ್ಧಿಸಬೇಕು.
'ನಾನು ಚಾಮರಾಜಪೇಟೆ ಅಳಿಯ, ಇಲ್ಲಿ ನನ್ನ ಮಾವನ ಮನೆಯಿತ್ತು, ಈಗಲೂ ಇದೆ'
ಈಗಾಗಲೇ ತಾವು ಆಯ್ಕೆಯಾದ ಮೂರು ವರ್ಷಗಳಲ್ಲಿ ಸಾವಿರಾರು ಕೋಟಿ ಅನುದಾನ ಬಾದಾಮಿ ಮತ ಕ್ಷೇತ್ರಕ್ಕೆ ಮಂಜೂರಿ ಮಾಡಿಸಿ ಸಾಕಷ್ಟುಅಭಿವೃದ್ಧಿ ಮಾಡಿದ್ದೀರಿ. ಮುಂದಿನ ಚುನಾವಣೆಗೂ ತಾವೇ ಬಾದಾಮಿಯಿಂದ ಸ್ಪರ್ಧೆ ಮಾಡಬೇಕು ಎಂದು ಮತಕ್ಷೇತ್ರದ ಎಲ್ಲರ ಪರವಾಗಿ ಮನವಿ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.