
ಬಾಗಲಕೋಟೆ, (ಜೂನ್.02): ಕೊರೋನಾ ವಿರುದ್ಧ ಹೋರಾಡಿ ಗೆದ್ದು ಬಂದವರಿಗೆ ಬ್ಲ್ಯಾಕ್ ಫಂಗಸ್ ಮಹಾಮಾರಿಯಾಗಿ ಕಾಡುತ್ತಿದೆ.
ಹೌದು...ಕೊರೋನಾ ವಿರುದ್ಧ ಗೆದ್ದಿದ್ದ ಕಾಂಗ್ರೆಸ್ ಮುಖಂಡರೊಬ್ಬರು ಬ್ಲಾಕ್ ಫಂಗಸ್ಗೆ ಬಲಿಯಾಗಿದ್ದಾರೆ. ಬಾಗಲಕೋಟೆಯ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಕ್ಷೇತ್ರದ ಜಿಪಂ ಮಾಜಿ ಸದಸ್ಯರಾಗಿದ್ದ ಮಾಂತೇಶ್ ಉದಪುಡಿ ಎನ್ನುವರನ್ನ ಬ್ಲ್ಯಾಕ್ ಫಂಗಸ್ ಬಲಿಪಡೆದಿದೆ.
ರಾಜ್ಯದಲ್ಲಿ 50ರ ಗಡಿ ದಾಟಿದ ಬ್ಲಾಕ್ ಫಂಗಸ್ ಸಾವು
ಮಾಂತೇಶ್ ಕಳೆದ 90 ದಿನಗಳಿಂದ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು (ಬುಧವಾರ) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೊದಲು ಅವರಿಗೆ ಕೊರೋನಾ ಕಾಣಿಸಿಕೊಂಡಿತ್ತು. ತಕ್ಷಣವೇ ಮುಧೋಳ ನಗರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ತದನಂತರ ಬ್ಲ್ಯಾಕ್ ಫಂಗಸ್ನಿಂದ ಕಣ್ಣಿಗೆ ತೀವ್ರ ಗಾಯವಾಗಿತ್ತು. ಹೀಗಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.