ನೂತನ ಸಚಿವರ ಕರಾಮತ್ತು, ಶಾ ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು‌...

Published : Jan 16, 2021, 09:48 PM IST
ನೂತನ ಸಚಿವರ ಕರಾಮತ್ತು, ಶಾ ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು‌...

ಸಾರಾಂಶ

ಬಾಗಲಕೋಟೆ ಜಿಲ್ಲೆಗೆ ನಾಳೆ ಅಮಿತ್ ಶಾ ಆಗಮನ ಹಿನ್ನೆಲೆ ಕರೆ ನೀಡಿದ್ದ ಪ್ರತಿಭಟನೆ ಹಿಂದಕ್ಕೆ ಪಡೆದ ರೈತರು...

ಬಾಗಲಕೋಟೆ, (ಜ.16): ಕೇಂದ್ರ ಗೃಹ ಸಚಿವ ಅಮಿತ್ ಶಾ ಅಮಿತ್ ಶಾ ಗೋ ಬ್ಯಾಕ್ ಚಳವಳಿಯನ್ನು ರೈತರು ವಾಪ್ ಪಡೆದುಕೊಂಡಿದ್ದಾರೆ.

ನಾಳೆ (ಜ.16)ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿಯ ಸಚಿವ ಮುರುಗೇಶ ನಿರಾಣಿ ಒಡೆತನದ ಕೇದಾರನಾಥ ಶುಗರ್ ಫ್ಯಾಕ್ಟರಿ ಉದ್ಘಾಟನೆಗೆ  ಅಮಿತ್ ಶಾ ಆಮಿಸುತ್ತಿದ್ದಾರೆ. ಈ ವೇಳೆ ಕಬ್ಬು ಬಾಕಿ ಹಣ ನೀಡದಿರುವುದರಿಂದ ಅಮಿತ್ ಶಾ ಆಗಮನದ ವೇಳೆ ಪ್ರತಿಭಟನೆಗೆ ರೈತರು ಮುಂದಾಗಿದ್ದರು.

ಈ ಬಗ್ಗೆ ಇಂದು (ಶನಿವಾರ) ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ನೂತನ ಸಚಿವ ನಿರಾಣಿ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ಪ್ರತಿಭಟನೆ ಹಿಂದಕ್ಕೆ ಪಡೆದುಕೊಂಡರು.

 ಫೆಬ್ರವರಿ ಮೊದಲ ವಾರ ಸಿಎಂ ಸೇರಿದಂತೆ ರಾಜ್ಯ ಕಬ್ಬು ಆಯುಕ್ತರೊಂದಿಗೆ ಮಾತುಕತೆ ನಡೆಸಿ ಬಾಕಿ ಹಣ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ ಎಂದು ನಿರಾಣಿ ಭರವಸೆ ನೀಡಿದರು.

ಈ ಹಿನ್ನೆಲೆಯಲ್ಲಿ ಸಚಿವ ನಿರಾಣಿ ಅವರ ಮಾತಿನಂತೆ ಅಮಿತ್ ಶಾ ವಿರುದ್ಧದ ಪ್ರತಿಭಟನೆಯನ್ನು ಕಬ್ಬು ಬೆಳೆಗಾರ ರೈತರು ವಾಪಸ್ ಪಡೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌