ಉಪಚುನಾವಣೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಸಚಿವ ಶಿವಾನಂದ ಪಾಟೀಲ

Published : Mar 24, 2026, 10:25 PM IST
shivanand patil

ಸಾರಾಂಶ

ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಾನಗಳೇ ಇದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ಬಾಗಲಕೋಟೆ (ಮಾ.24): ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆ ಹಿರಿಯ ಶಾಸಕರ ಅಗಲಿಕೆಯಿಂದ ತೆರವಾಗಿ ಆಕಸ್ಮಿಕವಾಗಿ ಎದುರಾದ ಚುನಾವಣೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಾನಗಳೇ ಇದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ಬಾಗಲಕೋಟೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಉಮೇದುವಾರಿಕೆ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ, 2028ರಲ್ಲಿ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈ ಉಪಚುನಾವಣೆಗಳು ದಿಕ್ಸೂಚಿಯಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದಿಕ್ಸೂಚಿ ಎಂದಿರುವುದು ರಾಜಕೀಯ ಹೇಳಿಕೆಯಷ್ಟೇ. ಶಾಸಕರ ಅನಿರೀಕ್ಷಿತ ನಿಧನದಿಂದ ತೆರವಾದ ಎರಡು ಶಾಸಕ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಮುಂದಿನ ಚುನಾವಣೆ ದಿಕ್ಸೂಚಿ ಎನ್ನಲಾಗದು ಎಂದ ಅವರು, ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸು ಹಾಗೂ ಸರ್ಕಾರದ ಸಾಧನೆ ಆಕಸ್ಮಿಕವಾಗಿ ಎದುರಾಗಿರುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ಹಂಚಿಕೆ ಗೊಂದಲವಲ್ಲ, ಟಿಕೆಟ್ ಒಂದೇ ಇದ್ದು, ಹಲವು ಆಕಾಂಕ್ಷಿಗಳಿರುತ್ತಾರೆ. ಮೇಟಿ ಕುಟುಂಬದ ಒಬ್ಬರಿಗೆ ಕೊಡುವಂತೆ ಕಾರ್ಯಕರ್ತರು ಹಾಗೂ ಜನಾಭಿಪ್ರಾಯದಂತೆ ಪಕ್ಷ ಮೇಟಿ ಕುಟುಂಬದ ಸದಸ್ಯರಲ್ಲಿ ಒಬ್ಬರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ ಅವರಿಗೆ ಅವರ ತಂದೆ ಎಚ್.ವೈ. ಮೇಟಿ ಅವರು ಶಾಸಕರಾಗಿ ಮಾಡಿರುವ ಉತ್ತಮ ಕೆಲಸಗಳು ಗೆಲುವಿಗೆ ನೆರವಾಗಲಿವೆ. ಬಿಜೆಪಿಯಲ್ಲಿ ಅನಂತಕುಮಾರ ಹೆಗಡೆ ಅವರ ಕುಟುಂಬಕ್ಕೆ ಟಿಕೆಟ್ ತಪ್ಪಿಸಲಾಗಿತ್ತು, ನಮ್ಮಲ್ಲಿ ಹಾಗೇ ಆಗಿಲ್ಲವಲ್ಲ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂಬುದೇ ಇತ್ತು. ಟಿಕೆಟ್ ನೀಡಿದವುದು ಎಂದು ಹೇಳಿದರು.

ರಾಜಕೀಯ ಇಲ್ಲಿ ನಡೆಯಲ್ಲ

ಪಂಕಾ ಮಸೀದಿ ಗಲಾಟೆ ಇಟ್ಟುಕೊಂಡು ಬಿಜೆಪಿ ಚುನಾವಣೆ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದು, ಇದೆಲ್ಲ ಕ್ಷಣಿಕ. ಎಚ್.ವೈ. ಮೇಟಿ ಬಂದ ಬಳಿಕ ಬಾಗಲಕೋಟೆಯಲ್ಲಿ ಸಾಮರಸ್ಯ ಮೂಡಿದ್ದು, ಬಿಜೆಪಿ ರಾಜಕೀಯ ಇಲ್ಲಿ ನಡೆಯಲ್ಲ, ಬದಲಾಗಿ ನಾವು ಗೆಲ್ಲುತ್ತೇವೆ ಎಂದ ಅವರು, ಶಿಗ್ಗಾಂವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸಿಎಂ ಆಗಿದ್ದವರ ಪುತ್ರನನ್ನೇ ಸೋಲಿಸಿ, ನಾವು ಗೆದ್ದಿದ್ದೇವೆ, ಹೀಗಾಗಿ ಈಗ ಎದುರಾಗಿರುವ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ವಿಜಯ ಸಾಧಿಸುವುದು ಖಚಿತ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಕರ್ನಾಟಕವನ್ನ ದೇವರೇ ಉಳಿಸಬೇಕು': ರಾಜ್ಯ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಹೆಚ್.ಡಿ. ದೇವೇಗೌಡರ ಗುಡುಗು!
ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?