ಬಜರಂಗದಳಕ್ಕೂ ಆಂಜನೇಯನಿಗೂ ಸಂಬಂಧವಿಲ್ಲ: ಎಚ್ ವಿಶ್ವನಾಥ್‌

Published : May 05, 2023, 04:19 PM IST
ಬಜರಂಗದಳಕ್ಕೂ ಆಂಜನೇಯನಿಗೂ ಸಂಬಂಧವಿಲ್ಲ: ಎಚ್ ವಿಶ್ವನಾಥ್‌

ಸಾರಾಂಶ

ಜನರಿಗೆ ಕಿರುಕುಳ ನೀಡುವ ಬಜರಂಗ ದಳಕ್ಕೂ ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಡಿಕೇರಿ (ಮೇ.5) : ಜನರಿಗೆ ಕಿರುಕುಳ ನೀಡುವ ಬಜರಂಗ ದಳಕ್ಕೂ ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಡಿಕೇರಿ(Madikeri)ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗ ದಳದವರು ನೈತಿಕ ಪೊಲೀಸ್‌ ಗಿರಿ ಮಾಡುತ್ತಾರೆ. ಜನರಿಗೆ ಪಾರ್ಕಲ್ಲಿ ಒಟ್ಟಿಗೆ ಓಡಾಡಲು ಬಿಡುವುದಿಲ್ಲ. ಇವರು ಸಮಾಜದಲ್ಲಿ ಅಶಾಂತಿಗೆ ಕಾರಣರಾಗಿದ್ದಾರೆ. ಆಂಜನೇಯ ಯಾವತ್ತೂ ಕಿರುಕುಳ ಕೊಟ್ಟವನಲ್ಲ. ಆದರೆ ಬಜರಂಗ ದಳದವರು ಕಾನೂನು ಕೈಗೆ ತೆಗೆದುಕೊಂಡು ಎಷ್ಟೋ ಸಾವುಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.

ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹನುಮ ಜನ್ಮಸ್ಥಳದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ!

ಬಿಜೆಪಿ ನಾಯಕರ ಹೆಣ್ಣು ಮಕ್ಕಳು ಬೇರೆ ಧರ್ಮದವರನ್ನು ಮದುವೆ ಆಗಿಲ್ಲವೇ? ಲವ್‌ ಮಾಡಿಲ್ಲವೇ? ಪ್ರತಿ ಮಾತಿಗೂ ಆಂಜನೇಯ ಎಂದು ಹೇಳುವುದು ಸರಿಯಲ್ಲ. ಬಜರಂಗ ದಳ ಒಂದು ಸಂಘಟನೆ ಮಾತ್ರ. ನಾನು ಹಿಂದೂ, ಆಂಜನೇಯನ ಭಕ್ತ, ನನ್ನ ರಾಮ ವಿರಾಟ್‌ ಅಲ್ಲ ಶಾಂತಿ ಸೌಹಾರ್ದತೆಯ ರಾಮ. ಗಾಂಧಿ ಹೇಳಿಕೊಟ್ಟರಾಮ ಎಂದು ವಿಶ್ವನಾಥ್‌ ಪ್ರತಿಪಾದಿಸಿದರು.

ವಿಶ್ವ ಗುರು ಪ್ರಧಾನಿ ಮೋದಿ(Narendra Modi)ಯನ್ನು ಗೌರವಿಸುತ್ತೇನೆ. ಆದರೆ ಚುನಾವಣೆಯ ಸಮಯದಲ್ಲಿ ಇಷ್ಟುಬಾರಿ ಒಂದು ರಾಜ್ಯಕ್ಕೆ ಬರಬೇಕಾ..? ಒಂದು ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಪದೇ ಪದೇ ಬರುವುದು ಚುನಾವಣೆಯ ಮೇಲಿನ ಭಯದಿಂದಲಾ ಎಂದು ವಿಧಾನ ಪರಿಷತ್‌ ಸದಸ್ಯ ವಿಶ್ವನಾಥ್‌ ಪ್ರಶ್ನಿಸಿದರು.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನಿಷೇಧದ ಭರವಸೆ, ದೇಶದ ಬಲ 'ಭಜರಂಗದಳ' ಟ್ವಿಟರ್‌ನಲ್ಲಿ ಟ್ರೆಂಡ್‌!

ನಿಮ್ಮ ಮೇಲೆ ಕರ್ನಾಟಕದ ಜನತೆಗೆ ನಂಬಿಕೆ ಹಾಳಾಗಿದೆಯೇ. ಕರ್ನಾಟಕದ ಜನ ಪ್ರಧಾನಮಂತ್ರಿ ಮೋದಿ ಹಾಗೂ ಬಿಜೆಪಿ ಬಗ್ಗೆ ನಂಬಿಕೆ ಕಳೆದುಕೊಂಡಿದ್ದಾರೆ. ನಂಬಿಕೆಯನ್ನು ಮೂಡಿಸಲು ಪದೇ ಪದೇ ಬರುತ್ತಾ ಇದ್ದೀನಿ ಎಂದು ನೀವೇ ಜಗಜ್ಜಾಹೀರು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ನಾನೀಗ ಮನೆಯನ್ನು ಕಂಟ್ರೋಲ್‌ ಮಾಡಲಾಗ್ತಿಲ್ಲ, ವಿಲನ್‌ ಬಂದ್ರು ಎಂದು ನಡುಗಿದ Bigg Boss