ಆಪ್ತಗೆ ಸಚಿವ ಸ್ಥಾನ ನೀಡಲು ಸಿಎಂಗೆ ಜಾರಕಿಹೊಳಿ ಒತ್ತಡ

Kannadaprabha News   | Asianet News
Published : Aug 09, 2021, 01:04 PM ISTUpdated : Aug 09, 2021, 01:56 PM IST
ಆಪ್ತಗೆ ಸಚಿವ ಸ್ಥಾನ ನೀಡಲು ಸಿಎಂಗೆ ಜಾರಕಿಹೊಳಿ ಒತ್ತಡ

ಸಾರಾಂಶ

ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾದ ಬಳಿಕ ಹಲವು ರೀತಿಯ ಅಸಮಾಧಾನ ತಮ್ಮ ಅಪ್ತಗೆ ಸಚಿವ ಸ್ಥಾನ ಕೊಡಿಸಲು ಜಾರಕಿಹೊಳಿಯಿಂದ ಸಿಎಂಗೆ ಒತ್ತಡ ಈ ಸಂಬಂಧ ನಡೆಯಲಿದೆ ಅಸಮಾಧಾನಗೊಂಡ ಶಾಸಕರ ಜೊತೆ ಸಭೆ

ಬೆಂಗಳೂರು (ಆ.09): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾದ ಬಳಿಕ ಹಲವು ರೀತಿಯ ಅಸಮಾಧಾನಗಳು ಸ್ಪೋಟವಾಗುತ್ತಿದೆ.  ಇದೇ ವೇಳೆ  ಶ್ರೀಮಂತ ಪಾಟೀಲ್ ಗೆ ಸಚಿವಗಿರಿ ಕೊಡಿಸಲು ಬಾಲಚಂದ್ರ ಜಾರಕಿಹೊಳಿ ಮುಂದಾಗಿದ್ದಾರೆ. 

ಶ್ರೀಮಂತ ಪಾಟೀಲ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಬೊಮ್ಮಾಯಿಗೆ ಬಾಲಚಂದ್ರ ಜಾರಕಿಹೊಳಿ ಒತ್ತಡ ಹಾಕಿದ್ದಾರೆನ್ನಲಾಗಿದೆ. ಈ ಸಂಬಂಧ ನಾಳೆ ಬೆಂಗಳೂರಿನಲ್ಲಿ ಸಭೆ ನಡೆಸಲು ತಿರ್ಮಾನ ನಡೆಸಿದ್ದು,  ಆಪ್ತ ವಲಯದ ಶಾಸಕರ ಜೊತೆ ಬಾಲಚಂದ್ರ ಜಾರಕಿಹೊಳಿ ಈ ಸಂಬಂಧ ಸಭೆ ನಡೆಸಲಿದ್ದಾರೆ.  

ಎಂಟಿಬಿ, ಆನಂದ್‌ ಸಿಂಗ್‌ಗೆ ಟಾಂಗ್‌ : ಮುನಿರತ್ನ ಬೆಂಬಲಿಸಿದ H.ವಿಶ್ವನಾಥ್

ಸಭೆಯಲ್ಲಿ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದು, ಹೇಗೆ ,ಯಾರಿಗೆ ,ಯಾವಾಗ ವಿಷಯ ತಲುಪಿಸಬೇಕೆಂದು ಸಭೆಯಲ್ಲಿ ತೀರ್ಮಾನ ಮಾಡಲಿದ್ದಾರೆ.  ಸಭೆಗೆ ಯಾವೆಲ್ಲಾ ಶಾಸಕರು ಭಾಗಿಯಾಗುತ್ತಾರೆ ಎನ್ನುವ ಬಗ್ಗೆಯೂ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.ಆದರೆ ಸಚಿವ ಸ್ಥಾನ ಸಿಗದ ಒಂದಿಷ್ಟು ಶಾಸಕರನ್ನು ಬಾಲಚಂದ್ರ ಜಾರಕಿಹೊಳಿ ಸಂಪರ್ಕಿಸಿದ್ದಾರೆ ಎನ್ನಲಾಗಿದೆ.  

ಸೆಲೆಕ್ಟೆಡ್ ಎಂಎಲ್ ಗಳನ್ನು ಮಾತ್ರ ಸಭೆಗೆ ಆಹ್ವಾನಿಸಿದ್ದಾರೆನ್ನುವ ಮಾಹಿತಿ ಇದ್ದು, ರೇಣುಕಾಚಾರ್ಯ, ಯತ್ನಾಳ್  ಸೇರಿದಂತೆ ಕೆಲವರಿಗೆ ಅಹ್ವಾನ ನೀಡಿಲ್ಲ. ಇನ್ನು ಈ ಸಭೆಗೆ ಮುಖ್ಯಮಂತ್ರಿ ಸ್ಥಾನಾಕಾಂಕ್ಷಿಯಾಗಿದ್ದ ಬೆಲ್ಲದ್ ಬರುತ್ತಾರಾ ಎನ್ನುವ ಕುತೂಹಲವೂ ಇದೆ. ಸಭೆಯ ಸಮಯ, ಎಲ್ಲಿ ಎಷ್ಟು ಜನ ಬರಲಿದ್ದಾರೆ ಎನ್ನುವುದು ಸಂಜೆಯ ವೇಳೆಗೆ ಸ್ಪಷ್ಟವಾಗಲಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ