ಕಾರ್ಯಕರ್ತರೇ ಬಿಜೆಪಿ ಆಸ್ತಿ: ಬಾಲಚಂದ್ರ ಜಾರಕಿಹೊಳಿ

Published : Jan 22, 2023, 07:07 PM IST
ಕಾರ್ಯಕರ್ತರೇ ಬಿಜೆಪಿ ಆಸ್ತಿ:  ಬಾಲಚಂದ್ರ ಜಾರಕಿಹೊಳಿ

ಸಾರಾಂಶ

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಯೋಜನೆಗಳನ್ನು ಜನರಿಗೆ ರೂಪಿಸಿದ್ದಾರೆ. ಸಾಕಷ್ಟು ಅಭಿವೃದ್ಧಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ(ಜ.22): ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ, ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ, ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀ ದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರ ಬಿಜೆಪಿ ಅರಭಾವಿ ಮಂಡಲದಿಂದ ನಡೆದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನಿಂದ ಕಾರ್ಯಕರ್ತರು ತಮ್ಮೆಲ್ಲ ಕೆಲಸಗಳನ್ನು ಕೇವಲ ಪಕ್ಷಕ್ಕೆ ಮಾತ್ರ ಮೀಸಲಿಟ್ಟು ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಯೋಜನೆಗಳನ್ನು ಜನರಿಗೆ ರೂಪಿಸಿದ್ದಾರೆ. ಸಾಕಷ್ಟುಅಭಿವೃದ್ಧಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು. ಉಭಯ ಸರ್ಕಾರಗಳ ಸಾಧನೆಗಳನ್ನು ತಿಳಿಸಲು ಕರಪತ್ರಗಳನ್ನು ಮತ್ತು ಸ್ಟೀಕರಗಳನ್ನು ವಿತರಿಸಬೇಕು. ವಿಜಯ ಸಂಕಲ್ಪ ಅಭಿಯಾನದ ವೇಳೆ ಪ್ರತಿ ಮನೆಗಳಿಗೆ ಕಾರ್ಯಕರ್ತರು ಭೇಟಿ ನೀಡಬೇಕು. ಸಮಯ ಪ್ರಜ್ಞೆ ರೂಢಿಸಿಕೊಂಡು ಪಕ್ಷದ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಜ.29ರ ತನಕ ಶಿಸ್ತಿನಿಂದ ಕೆಲಸ ನಿರ್ವಹಿಸಬೇಕು. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿಯಾಗಿದ್ದು, ಕಾರ್ಯಕರ್ತರನ್ನು ಗೌರವದಿಂದ ನಡೆಸಿಕೊಳ್ಳುತ್ತಿರುವ ಏಕೈಕ ಪಕ್ಷವೇ ನಮ್ಮ ಬಿಜೆಪಿಯಾಗಿದೆ ಎಂದು ತಿಳಿಸಿದರು.

Assembly election: ಗ್ರಾಮೀಣ ಉತ್ಸವ ಮಾಡಿದ್ದೇನೆ ಹೊರತು ಯಾರಿಗೂ ಗಿಪ್ಟ್‌ ಕೊಟ್ಟಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ನಮ್ಮ ಪಕ್ಷದ ವಿರುದ್ದ ನಮ್ಮ ವಿರೋಧಿ ಪಕ್ಷಗಳು ಎಷ್ಟೇ ಅಪಪ್ರಚಾರಗಳನ್ನು ನಡೆಸುತ್ತಿದ್ದರೂ ಅದಕ್ಕೆಲ್ಲ ಸೊಪ್ಪು ಹಾಕಬೇಡಿ. ಕಾರ್ಯಕರ್ತರು ಶ್ರಮ ವಹಿಸಿದರೇ ಖಂಡಿತವಾಗಿಯೂ ರಾಜ್ಯದಲ್ಲಿ 120 ಸ್ಥಾನಗಳನ್ನು ಗಳಿಸಿ ಸರಳ ಬಹುಮತವನ್ನು ಪಡೆದು ಅಧಿಕಾರ ಚುಕ್ಕಾಣಿ ಹಿಡಿಯುತ್ತೇವೆ ಎಂದು ಹೇಳಿದರು.

ಅರಭಾವಿ ಮಂಡಲದ ವಿಸ್ತಾರಕ ವೆಂಕಟೇಶ ಲಾಳೆ ಮಾತನಾಡಿ, ಕಾಂಗ್ರೆಸ್‌ ಈ ಚುನಾವಣೆಯಲ್ಲಿ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮ್ಮ ಪಕ್ಷ ಈಗಾಗಲೇ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿ ನಡೆದ ಕಾಮಗಾರಿಗಳನ್ನು ಜನರಿಗೆ ವಿವರಿಸೋಣ. ಜೊತೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೈಗೊಂಡಿರುವ ಪ್ರಗತಿಪರ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸೋಣಾ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶಕ್ಕಿ ವಹಿಸಿದ್ದರು.

ಎಪಿಎಂಸಿ ಮಾಜಿ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ, ಪ್ರಭಾ ಶುಗರ್‌ ನಿರ್ದೇಶಕ ಸಿದ್ದಲಿಂಗ ಕಂಬಳಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಅಪ್ಪಯ್ಯ ಬಡನಿಂಗಗೋಳ, ಉಪಾಧ್ಯಕ್ಷ ರಾಜು ಬೈರಗೋಳ, ಮುತ್ತಪ್ಪ ಕುಳ್ಳೂರ, ಬಸವರಾಜ ಹಿಡಲಕ್‌, ಹಣಮಂತ ತೇರದಾಳ, ಬಸವರಾಜ ಭುಜನ್ನವರ, ಭರಮಪ್ಪ ಆಸಿರೊಟ್ಟಿ, ಭರಮಣ್ಣ ಗಂಗನ್ನವರ, ಆನಂದ ಹೊಸಕೋಟಿ, ಪತ್ರಯ್ಯ ಚರಂತಿಮಠ, ಬಾಳಪ್ಪ ತಿಗಡಿ, ಕೆಂಚಪ್ಪ ಶಿಂತ್ರಿ, ಬಿಜೆಪಿಯ ಪದಾಧಿಕಾರಿಗಳಾದ ಭೀಮಶಿ ಮಾಳೆದವರ, ದುಂಡಪ್ಪ ನಂದಗಾವಿ, ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಪಾಂಡುರಂಗ ಮಹೇಂದ್ರಕರ, ಪ್ರಮೋದ ನುಗ್ಗಾನಟ್ಟಿ, ನಾಗರಾಜ ಕುದರಿ, ಅಲ್ಪಾವಧಿ ವಿಸ್ತಾರಕರು, ಶಕ್ತಿಕೇಂದ್ರಗಳ ಪ್ರಮುಖರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ