ಬಳ್ಳಾರಿ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಆರ್.ಅಶೋಕ್‌

Published : Aug 14, 2024, 11:38 PM IST
ಬಳ್ಳಾರಿ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಆರ್.ಅಶೋಕ್‌

ಸಾರಾಂಶ

ಪಕ್ಷದ ವೇದಿಕೆಯಲ್ಲಿ ಬಳ್ಳಾರಿ ಪಾದಯಾತ್ರೆ ಕುರಿತು ಇನ್ನೂ ಚರ್ಚೆ ಆಗಿಲ್ಲ. ಪಕ್ಷದ ಹೈಕಮಾಂಡ್‌ ಹೇಳಿದ್ರೇ ಮಾತ್ರ ಪಾದಯಾತ್ರೆ ಮಾಡುತ್ತೇವೆ. ಇನ್ನೂ ಹೈಕಮಾಂಡ್‌ ಪಾದಯಾತ್ರೆಗೆ ಗ್ರಿನ್‌ ಸಿಗ್ನಲ್‌ ನೀಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ತಿಳಿಸಿದರು. 

ಹೊಸಪೇಟೆ (ಆ.14): ಪಕ್ಷದ ವೇದಿಕೆಯಲ್ಲಿ ಬಳ್ಳಾರಿ ಪಾದಯಾತ್ರೆ ಕುರಿತು ಇನ್ನೂ ಚರ್ಚೆ ಆಗಿಲ್ಲ. ಪಕ್ಷದ ಹೈಕಮಾಂಡ್‌ ಹೇಳಿದ್ರೇ ಮಾತ್ರ ಪಾದಯಾತ್ರೆ ಮಾಡುತ್ತೇವೆ. ಇನ್ನೂ ಹೈಕಮಾಂಡ್‌ ಪಾದಯಾತ್ರೆಗೆ ಗ್ರಿನ್‌ ಸಿಗ್ನಲ್‌ ನೀಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ತಿಳಿಸಿದರು. ತುಂಗಭದ್ರಾ ಜಲಾಶಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನ ಕಾರ್ಯದರ್ಶಿ ಸಂತೋಷ್‌ ಜೀ‌ ಹೇಳಿದರೆ ಮಾತ್ರ ಪಾದಯಾತ್ರೆ ಮಾಡ್ತೇವೆ. ಮೈಸೂರು ಪಾದಯಾತ್ರೆಗೆ ಪರವಾನಗಿ ನೀಡಲಾಗಿತ್ತು. ಈಗ ಪಕ್ಷದ ವೇದಿಕೆಯಲ್ಲಿ ಪಾದಯಾತ್ರೆ ಚರ್ಚೆ ನಡೆದಿಲ್ಲ. ನಮಗೆ ಇರುವುದು ಒಂದೇ ಹೈಕಮಾಂಡ್ ಅವರು ಹೇಳಿದ ಹಾಗೇ ಮಾಡ್ತೇವೆ ಎಂದರು.

ಮೈಸೂರು ಪಾದಯಾತ್ರೆ ಬಳಿಕ ಕಾಂಗ್ರೆಸ್‌ ನಾಯಕರಲ್ಲಿ ನಡುಕ ಹುಟ್ಟಿದೆ. ನಮ್ಮ ಪಾದಯಾತ್ರೆ ಎಲ್ಲಿಗೆ ಹೋಗುತ್ತದೆಯೋ ಅದಕ್ಕಿಂತ ಮುನ್ನ ಕಾಂಗ್ರೆಸ್‌ನವರು ಅಲ್ಲಿಗೆ ಹೋಗಿದ್ದಾರೆ. ನಾನು ಕಳ್ಳ ಅಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಪಾದಯಾತ್ರೆ ಬಳಿಕ ಭಯ ಬಂದಿದೆ. ಈಗ ನಾವು ದೂರು ಕೊಟ್ಟಿದ್ದೇವೆ. ಚೆಂಡು ರಾಜ್ಯಪಾಲರ ಅಂಗಳದಲ್ಲಿದೆ. ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಮುಂದೆ ಗೊತ್ತಾಗಲಿದೆ ಎಂದರು. ಇದು ಬರೀ 14 ಸೈಟ್‌ ಹಗರಣವಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಮೂರ್ನಾಲ್ಕು ಸಾವಿರ ಕೋಟಿ ರು. ಮೊತ್ತದ ದೊಡ್ಡ ಹಗರಣ ನಡೆದಿದೆ. 

ರಾಜಭವನಕ್ಕೆ ತೆರಳಿ ದೂರು ಕೊಟ್ಟಿದ್ದೇವೆ. ಪಕ್ಷ ಅವಕಾಶ ನೀಡಿದರೆ ರಾಷ್ಟ್ರಪತಿ‌ ಭವನ ಕದ ತಟ್ಟುತ್ತೇವೆ. ರಾಷ್ಟ್ರಪತಿ ಬಳಿ ದೂರು ಕೊಂಡೊಯ್ಯುತ್ತೇವೆ ಎಂದರು. ಮಾಜಿ ಶಾಸಕ ಸಿ.ಪಿ. ಯೋಗೇಶ್ವರ ಜತೆಗೆ ಮಾತನಾಡಿದ್ದೇವೆ. ಅವರ ಮನೆಗೆ ಹೋಗಿದ್ದೇನೆ, ಪಕ್ಷದ ಚೌಕಟ್ಟಿನಲ್ಲಿರಿ ಎಂದಿರುವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಅವರು ಕೂಡ ಪಕ್ಷದ ಜತೆಗೆ ಇರಲಿದ್ದಾರೆ ಎಂದರು. ರಾಜ್ಯದಲ್ಲಿ ಉಪಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲರಿಗೂ ಇಂಚಾರ್ಜ್‌ ಕೊಟ್ಟಿದ್ದಾರೆ. ಸಮೀಕ್ಷೆ ಮಾಡ್ತೇವೆ. ಸರ್ವ ಸಮ್ಮತ ಅಭ್ಯರ್ಥಿ ಹಾಕಿ ಗೆಲ್ಲಿಸುತ್ತೇವೆ. ಶಾಸಕ ಜನಾರ್ದನ ರೆಡ್ಡಿ ನಮ್ಮ ಜತೆಗೆ ಕ್ಲೋಸ್ ಆಗಿದ್ದಾರೆ.

'ಇಲ್ಲಿ ಬರ್ತ್‌ಡೇ ಪಾರ್ಟಿ ಮಾಡ್ತೀರಿ, ದೇವರ ಪೂಜೆ ಯಾಕಿಲ್ಲ..' ನಾಗಪಾತ್ರಿ ಪ್ರಶ್ನೆಗೆ ತಬ್ಬಿಬ್ಬಾದ ಕಲಾವಿದರು!

ಅವರು ಪಕ್ಕಾ ಬಿಜೆಪಿಯವರಾಗಿದ್ದಾರೆ. ಉಪ ಚುನಾವಣೆಯಲ್ಲಿ ಟಿಕೆಟ್ ದಿಲ್ಲಿಯವರು ಹೇಳಿದವರಿಗೆ ಫೈನಲ್ ಆಗಲಿದೆ. ಸಂಡೂರು ಕ್ಷೇತ್ರದಲ್ಲಿ ಹೊಸ ಮುಖ ನೋಡುತ್ತಿದ್ದೇವೆ ಎಂದರು. ಸಂವಿಧಾನ ರಕ್ಷಣೆ ಮಾಡ್ತೇವೆ ಎಂದು ಪತ್ನಿ ಹೆಸರಲ್ಲಿ ಸಿದ್ದರಾಮಯ್ಯ ಸೈಟ್ ಮಾಡ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಎಲ್ಲೂ ಸಹಿ ಮಾಡಿಲ್ಲ. ಆಗಿನ ಮುಡಾ ಅಧ್ಯಕ್ಷರು ಸಹಿ ಮಾಡಿದ್ದಾರೆ. ಅವರು ತಪ್ಪು ಮಾಡಿದರೆ ಅವರ ಮೇಲೂ ಕ್ರಮ ಆಗಲಿ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಈ ಹಿಂದೆ ನಾವು ಹೇಳಿಕೆ ನೀಡಿದ್ದೇವೆ ಎಂದು ಆರೋಪಿಸುತ್ತಾರೆ. ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರ ಬಗ್ಗೆ ಹೇಳಿಕೆ ನೀಡಿರಲಿಲ್ವಾ? ಜೆಡಿಎಸ್‌- ಬಿಜೆಪಿ ಮೈತ್ರಿ ಆಗಿದ್ದು, ಹಾಲು, ಜೇನಿನಂತೆ ಇದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್