
ರಾಯಚೂರು(ಜು.02): ಚುನಾವಣೆ ನೆಪದಲ್ಲಿ ಸಚಿವರ ಸಂಪುಟ ವಿಸ್ತರಣೆ ಮುಂದೂಡಲಾಗಿದೆ. ಚುನಾವಣೆಗಿನ್ನು ಕೇವಲ 6-8 ತಿಂಗಳು ಬಾಕಿ ಉಳಿದಿದೆ. ಈ ಹಂತದಲ್ಲಿ ಸಂಪುಟ ವಿಸ್ತರಣೆ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಹೊಸದಾಗಿ ಸಚಿವರಾದವರು ಅಧಿಕಾರ ನಿರ್ವಹಿಸಲು ಸಮಯವೇ ಸಿಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಈ ಹಿಂದೆ ಪಂಚರಾಜ್ಯ ಚುನಾವಣೆ ಅಂದ್ರು, ಈಗ ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ಎನ್ನುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಗೆ ಚುನಾವಣೆ, ಉಪಚುನಾವಣೆ ಬರುತ್ತವೆ. ಹೀಗಾಗಿ ಇನ್ನು ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಕಡಿಮೆ ಎಂದು ಅಭಿಪ್ರಾಯಪಟ್ಟರು.
ಮಂತ್ರಿ ಸ್ಥಾನಕ್ಕಾಗಿ 10 ಕೋಟಿ ಪಡೆದ ಸ್ವಾಮೀಜಿ: ಯತ್ನಾಳ
ಇದೇ ವೇಳೆ, ಮುಂಬರುವ 2023ನೇ ಸಾಲಿನ ವಿಧಾನಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವ ಶಕ್ತಿ ರಾಜ್ಯದ ಯಾವುದೇ ನಾಯಕರಿಗಿಲ್ಲ. ಹೀಗಾಗಿ ಪ್ರಧಾನಿ ಮೋದಿ ಹೆಸರಲ್ಲಿ ಎದುರಿಸುತ್ತೇವೆ ಎಂದು ಹೇಳಿದ್ದಾರೆ ಎಂದು ಟಾಂಗ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.