
ಬೆಂಗಳೂರು, (ಜ.06) : ಅಭಿವೃದ್ಧಿ ವಿಚಾರವಾಗಿ ಮಾತನಾಡಲು ಹೆದರುವ ಮಗ ನಾನಲ್ಲ ಎಂದು ಪರೋಕ್ಷವಾಗಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿದ್ದಾರೆ.
ಮೊನ್ನೇ ಸಭೆಯಲ್ಲಿ ಯತ್ನಾಳ್, ವಿಜಯೇಂದ್ರ ಅವರ ಹೆಸರು ಪ್ರಸ್ತಾಪ ಮಾಡಿ, ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ನೇರವಾಗಿ ಪ್ರಶ್ನಿಸಿದ್ದರು. ಈ ಬಗ್ಗೆ ರೇಣುಕಾಚಾರ್ಯ ಸೇರಿದಂತೆ ಸಿಎಂ ಆಪ್ತರು ಯತ್ನಾಳ್ ವಿರುದ್ಧ ಕಿಡಿಕಾರಿದ್ದರು.
ಇನ್ನು ಈ ಬಗ್ಗೆ ವಿಧಾನಸೌಧದಲ್ಲಿ ಇಂದು (ಬುಧವಾರ) ಮಾತನಾಡಿದ ಯತ್ನಾಳ್, ನಾನು ಮೊನ್ನೆ ಸಭೆಯಲ್ಲಿ ಮಾತಾಡಿದ್ದು ನಿಜ. ಅಭಿವೃದ್ಧಿ ಬಗ್ಗೆ ನಾನು ಮಾತಾಡಿದ್ದೆ. ಹಾಗಾಗಿ ನನಗೆ ಹಿಂಜರಿಕೆ ಇಲ್ಲ, ನಾನು ಹೆದರೋ ಮಗ ಅಲ್ಲ, ಯಾವಾಗ ಬಾಣ ಬಿಡಬೇಕು, ಯಾವಾಗ ಮೌನವಾಗಿರಬೇಕು ಎಂಬುದು ನನಗೆ ಗೊತ್ತಿದೆ ಎಂದು ಸ್ವಪಕ್ಷದ ನಾಯಕರುಗಳಿಗೆ ತಿರುಗೇಟು ನೀಡಿದರು.
ಸಿಎಂ ಸಭೆಯಲ್ಲಿ ವಿಜಯೇಂದ್ರ ಹೆಸ್ರು ಪ್ರಸ್ತಾಪ: ಯತ್ನಾಳ್- ರೇಣುಕಾಚಾರ್ಯ ಜಟಾಪಟಿ
ಯಡಿಯೂರಪ್ಪನವರ ಮನೆಗೆ ನಾನು ಮಂತ್ರಿ ಸಲುವಾಗಿ ಎಂದೂ ಹೋಗಿಲ್ಲ. ಬದಲಾಗಿ ಜನರ ಭಾವನೆಗಳನ್ನು ಹೇಳುವ ಕೆಲಸ ಮಾಡಿದ್ದೇನೆ. ನಾನು ಯಾವುದಕ್ಕೂ ಅಂಜುವ ಮಗ ಅಲ್ಲ. ನಾನು ಉತ್ತರ ಕರ್ನಾಟಕದವನು, ನಾನು ಕ್ಷಮೆ ಯಾಚಿಸ್ತೇನೆ ಅಂತ ಹೇಳೋನೇ ಅಲ್ಲ, ನನ್ನ ಮಾತನ್ನು ಮಾಧ್ಯಮದವರು ತಿರುಚಿದ್ದಾರೆ ಅಂತ ಹೇಳೋನೂ ನಾನಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನಾನು ಮಾತನಾಡುತ್ತೇನೆ ಜನಪರ ವಿಚಾರಗಳನ್ನೇ ನಾನು ಮಾತನಾಡಿದ್ದೇನೆ ಎಂದು ಹೇಳಿದರು.
ಮೊನ್ನೆ ಕೂಡ ಒಬ್ಬನೇ ಗಲಾಟೆ ಮಾಡಿದ್ದು ಉಳಿದ ಶಾಸಕರು ಎಲ್ಲರೂ ಸುಮ್ಮನಿದ್ದರು ಎಂದರು ಅಲ್ಲದೆ ಹಾದಿ ಬೀದಿಲಿ ಕೆಲವರು ಹೇಳಿಕೆ ಕೊಡುತಿದ್ದಾರಲ್ಲಾ ಯಡಿಯೂರಪ್ಪ ಸಭೆಯಲ್ಲಿ ಒಬ್ಬರೇ ಶಾಸಕರು ಗಲಾಟೆ ಮಾಡಿದ್ದು ಅಂತ ಹಾಗಾಗಿ ಕಾರಜೋಳ ಹೇಳಿದ್ದು ಸತ್ಯ ಇದೆ ಅದರಲ್ಲಿ ಯಾವುದೇ ಸಂದೇಹ ಬೇಡ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.