ಸೋಲಿನಿಂದ ವಿಚಲಿತರಾಗಬೇಡಿ: ಸೋಮಣ್ಣ, ಸುಧಾಕರ್‌ಗೆ ಬೊಮ್ಮಾಯಿ ಸಮಾಧಾನ

Published : May 17, 2023, 06:37 AM IST
ಸೋಲಿನಿಂದ ವಿಚಲಿತರಾಗಬೇಡಿ: ಸೋಮಣ್ಣ, ಸುಧಾಕರ್‌ಗೆ ಬೊಮ್ಮಾಯಿ ಸಮಾಧಾನ

ಸಾರಾಂಶ

ಚುನಾವಣೆಯಲ್ಲಿ ಸೋಲು ಅನುಭವಿಸಿದ ತಮ್ಮ ಸಂಪುಟ ಸಹೋದ್ಯೋಗಿಗಳಾಗಿರುವ ಡಾ.ಕೆ. ಸುಧಾಕರ್‌ ಮತ್ತು ವಿ. ಸೋಮಣ್ಣ ಅವರನ್ನು ಖುದ್ದಾಗಿ ಭೇಟಿ ಮಾಡಿ ಸಮಾಧಾನ ಮಾಡಿದ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಮೇ.17):  ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆಯಲ್ಲಿ ಸೋಲು ಅನುಭವಿಸಿದ ತಮ್ಮ ಸಂಪುಟ ಸಹೋದ್ಯೋಗಿಗಳಾಗಿರುವ ಡಾ.ಕೆ. ಸುಧಾಕರ್‌ ಮತ್ತು ವಿ. ಸೋಮಣ್ಣ ಅವರನ್ನು ಖುದ್ದಾಗಿ ಭೇಟಿ ಮಾಡಿ ಸಮಾಧಾನ ಮಾಡಿದ್ದಾರೆ.

ಮಂಗಳವಾರ ಉಭಯ ಸಚಿವರ ನಿವಾಸಕ್ಕೆ ತೆರಳಿದ ಬೊಮ್ಮಾಯಿ ಅವರು ಕೆಲಕಾಲ ಮಾತನಾಡಿ ಚುನಾವಣೆಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ, ಸೋಲಿನಿಂದ ವಿಚಲಿತರಾಗದೆ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ಬಲಪಡಿಸುವತ್ತ ಗಮನಹರಿಸೋಣ ಎಂಬ ಮಾತನ್ನೂ ಹೇಳಿದರು.

ಬಿಜೆಪಿ ಸೋಲಿನ ಬಗ್ಗೆ ಆರ್‌ಎಸ್‌ಎಸ್‌ಗೆ ಬೊಮ್ಮಾಯಿ ವಿವರಣೆ

ಸೋಮಣ್ಣ ಅವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ‘ಸೋಮಣ್ಣನವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ’ ಎಂದರು.

‘ಸೋಮಣ್ಣ ನಮ್ಮ ಹಿರಿಯ ನಾಯಕರು. ಸುಮಾರು 40 ವರ್ಷ ಜನಸೇವೆ ಮಾಡಿದವರು. ವಸತಿ ಸಚಿವರಾಗಿ ಅವರು ಬೆಂಗಳೂರಿನ ಅಭಿವೃದ್ಧಿಗೆ ಅನೇಕ ಕೊಡುಗೆ ಕೊಟ್ಟಿದ್ದಾರೆ. ಗೋವಿಂದರಾಜ ನಗರವನ್ನು ಮಾದರಿ ಕ್ಷೇತ್ರ ಮಾಡಿದ್ದಾರೆ. ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ. ಅದನ್ನು ಮೀರಿ ಮತ್ತೆ ಬರಬೇಕು. ಸೋಮಣ್ಣ ಮತ್ತು ಪಕ್ಷ ಎರಡು ಕೂಡ ಆ ಕೆಲಸ ಮಾಡಲಿದೆ’ ಎಂದು ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್