
ಬೆಂಗಳೂರು, (ಮಾ.03): ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು (ಬುಧವಾರ) ಸಚಿವ ಸಂಪುಟದ ಸಭೆಯಲ್ಲಿ ಹಲವು ನಿರ್ಣಯ ತೆಗೆದುಕೊಂಡಿದ್ದೇವೆ. ಪಂಚಮಸಾಲಿ ಮೀಸಲಾತಿ ಬಗ್ಗೆ ಚರ್ಚೆಯಾಗಿದೆ ಎಂದು ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ವಾಲ್ಮೀಕಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಒತ್ತಾಯವಿದೆ. ಇತರ ಸಮುದಾಯಗಳು ಮೀಸಲಾತಿಗೆ ಒತ್ತಾಯಿಸಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಒಪ್ಪಿಗೆ ಸೂಚಿಸಲಾಗಿದೆ ಎಂದರು.
ಜಾರಕಿಹೊಳಿ ರಾಜೀನಾಮೆಯಿಂದ ತೆರವಾದ ಖಾತೆ ಯಾರ ಹೆಗಲಿಗೆ..?
ಇನ್ನು ಹಾಲುಮತದ ಕುಲಶಾಸ್ತ್ರ ಅಧ್ಯಯನಕ್ಕೆ ಕೊಡಲಾಗಿದೆ. ಇವುಗಳಿಗೆ ಮೀಸಲಾತಿ ಕೊಡಲು ಶೇ.50ರಷ್ಟು ಹೆಚ್ಚಾಗುತ್ತದೆ. ಬೇರೆ ಬೇರೆ ರಾಜ್ಯಗಳಲ್ಲಿ ಶೇ.50ರಷ್ಟು ಹೆಚ್ಚು ಮಾಡಲಾಗಿದೆ. ಈ ಹೆಚ್ಚು ಮಾಡಿರುವುದನ್ನ ಸುಪ್ರೀಂ ರದ್ಧುಪಡಿಸಿದೆ. ಹಾಗಾಗಿ ಇದಕ್ಕೆ ಹೆಚ್ಚಿನ ಕಾನೂನು ಅಭಿಪ್ರಾಯಬೇಕಿದೆ. ಸಂವಿಧಾನದ ಚೌಕಟ್ಟಿನಲ್ಲಿ ಪರಾಮರ್ಶಿಸಬೇಕಿದೆ. ಇದು ಸರ್ಕಾರದ ಕೈಯಿಂದ ಆಗುವುದಿಲ್ಲ, ಹಾಗಾಗಿ ಸಮಗ್ರ ವರದಿ ನೀಡಲು ಸಮಿತಿ ರಚನೆ ಮಾಡಿದೆ ಎಂದು ತಿಳಿಸಿದರು.
ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಧ್ಯಾಹ್ನ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟದಲ್ಲಿ ಇದರ ಬಗ್ಗೆ ಚರ್ಚೆಯಾಗಲಿಲ್ಲ, ಕಬ್ಬನ್ ಪಾರ್ಕ್ ಸ್ಟೇಷನ್ನಲ್ಲಿ ಕಂಪ್ಲೈಂಟ್ ಲಾಡ್ಜ್ ಆಗಿದೆ. ಯಾವ ತನಿಖೆ ಮಾಡಬೇಕು ಅನ್ನೋದು ನಿರ್ಧಾರವಾಗಿಲ್ಲ, ತನಿಖೆಯಾಗಲಿದೆ, ಯಾವುದು ಅನ್ನೋದು ನಂತರ ನಿರ್ಧರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.