ಬೆಳಗಾವಿ: ಯಮಕನಮರಡಿಯಲ್ಲಿ ಪ್ರಚಾರ ಆರಂಭಿಸಿದ ಬಸವರಾಜ ಹುಂದ್ರಿ..!

Published : Apr 05, 2023, 01:30 AM IST
ಬೆಳಗಾವಿ: ಯಮಕನಮರಡಿಯಲ್ಲಿ ಪ್ರಚಾರ ಆರಂಭಿಸಿದ ಬಸವರಾಜ ಹುಂದ್ರಿ..!

ಸಾರಾಂಶ

ಕಾಂಗ್ರೆಸ್ ಭದ್ರ ಕೋಟೆ ಆಗಿರುವ ಯಮಕನಮರಡಿ ಕ್ಷೇತ್ರದ ಮೇಲೆ ಈ ಬಾರಿಯಾದರೂ ಬಿಜೆಪಿ ಗೆಲ್ಲುತ್ತಾ ಕಾದು ನೋಡಬೇಕು.  

ವರದಿ: ಮುಷ್ತಾಕ್ ಪೀರಜಾದೇ, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕೋಡಿ

ಚಿಕ್ಕೋಡಿ(ಏ.05): ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೆ ದಿನಗಳು ಬಾಕಿ ಉಳಿದುಕೊಂಡಿದ್ದು ಕಾಂಗ್ರೆಸ್ ಮಾತ್ರ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಮಾತ್ರ ಇನ್ನೂವರೆಗೆ ಟಿಕೆಟ್ ಘೋಷಣೆ ಮಾಡಿಲ್ಲ ಆದ್ರು ಕಾಂಗ್ರೆಸ್ ಭದ್ರ ಕೋಟೆ ಆಗಿರುವ ಯಮಕನಮರಡಿಯಲ್ಲಿ ಟಿಕೆಟ್‌ಗಾಗಿ ಬಸವರಾಜ್ ಹಂದ್ರಿ ಹಾಗೂ ಮಾರುತಿ ಅಷ್ಟಿಗಿ ಮಧ್ಯೆ ಪೈಪೋಟಿ ಏರ್ಪಟ್ಟಿದೆ.  ಈಗಾಗಲೇ ಇಬ್ಬರ ಹೆಸರನ್ನು ಕೇಂದ ಸಂಸದೀಯ ಮಂಡಳಿಗೆ ಬಿಜೆಪಿ ವರಿಷ್ಠರು ರವಾನಿಸಿದ್ದಾರೆ ಎನ್ನಲಾಗಿದೆ.‌ ಟಿಕೆಟ್ ಘೋಷಣೆಗೂ ಮುನ್ನ ಬಸವರಾಜ ಹುಂದ್ರಿ ಫುಲ್ ಆಕ್ಟಿವ್ ಆಗಿ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಆರಂಭಿಸಿದ್ದಾರೆ. ‌

ಹೌದು, ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಯಮಕನಮರಡಿ ಕ್ಷೇತ್ರದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ‌ಟಿಕೆಟ್ ಯಾರಿಗೂ ಹೈಕಮಾಂಡ್ ನೀಡಿದ್ರು ಒಗ್ಗಟ್ಟಿನ ಜಪ ಮಾಡುತ್ತಿರುವ ಬಸವರಾಜ ಹುಂದ್ರಿ ಹಾಗೂ ಮಾರುತಿ ಅಷ್ಠಗಿ ಅವರು ಚುನಾವಣೆ ಎದುರಿಸಲು ಸಿದ್ದರಾಗಿದ್ದಾರೆ. ಆದ್ರೆ ಮಾರುತಿ ಅಷ್ಠಗಿಕ್ಕಿಂತ ಒಂದು ಕೈ ಮೇಲುಗೈ ಸಾಧಿಸಿರುವ ಬಸವರಾಜ ಹುಂದ್ರಿಗೆ ಟಿಕೆಟ್ ಸಿಗುವ ಸುಳಿವು ಸಿಕ್ಕಂತ್ತಾಗಿದೆ. ಹೀಗಾಗಿಯೇ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಿದ್ದಾರೆ. 

ಬೆಳಗಾವಿ ಡಿಫೆರೆಂಟ್ ಪಾಲಿಟಿಕ್ಸ್: ಬಿಜೆಪಿ ಸೈಲೆಂಟ್‌ - ಕಾಂಗ್ರೆಸ್‌ ವೈಲೆಂಟ್‌

ಮನೆ ಮನೆಗೆ ತೆರಳಿ ಕರ ಪತ್ರ ಹಂಚುತ್ತಿರುವ ಬಸವರಾಜ ಹುಂದ್ರಿ ಅವರು ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ಕೇಳಿಕೊಳ್ಳುತ್ತಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್ ಭದ್ರ ಕೋಟೆ ಆಗಿರುವ ಯಮಕನಮರಡಿ ಕ್ಷೇತ್ರದ ಮೇಲೆ ಈ ಬಾರಿಯಾದರೂ ಬಿಜೆಪಿ ಗೆಲ್ಲುತ್ತಾ ಕಾದು ನೋಡಬೇಕು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್