
ಆಳಂದ (ಕಲಬುರಗಿ): ಆಳಂದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್ ಸಹೋದರ, ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಬಸವರಾಜ ಪಾಟೀಲ ಮರುಮ್(Basavaraj Patil) ಅವರು ಧಾರಾಶಿವ- ಲಾತೂರ- ಬೀಡ ಜಿಲ್ಲೆಗಳ ಸ್ಥಳೀಯ ಸಂಘ–ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದಲ್ಲಿ 850 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಗೆಲುವು ಆಳಂದದಲ್ಲಿ ಸಂಭ್ರಮ ಮತ್ತು ಸಡಗರ ಮೂಡಿಸಿದ್ದು, ಕುಟುಂಬಸ್ಥರು, ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಉತ್ಸಾಹದಿಂದ ವಿಜಯೋತ್ಸವ ಆಚರಿಸಿದರು. 2 ಬಾರಿ ಶಾಸಕರಾಗಿ ಹಾಗೂ ಒಮ್ಮೆ ಸಚಿವರಾಗಿ ಮಹಾರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ಬಸವರಾಜ ಪಾಟೀಲ ಮರುಮ್ ಅವರು, ಈ ಗೆಲುವಿನ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.
ವಿಜಯೋತ್ಸವದಲ್ಲಿ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್, ‘ನಮ್ಮ ಮನೆತನದ ಕುಡಿ ಶಾಸಕರಾಗಿ, ಸಚಿವರಾಗಿ ಅನುಪಮ ಸೇವೆ ಸಲ್ಲಿಸಿ, ಈಗ ಮತ್ತೊಮ್ಮೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವುದು ನಮ್ಮ ಇಡೀ ಕುಟುಂಬಕ್ಕೆ ಅಪಾರ ಹೆಮ್ಮೆ ಮತ್ತು ಸಂತಸ ತಂದಿದೆ. ಅವರ ಜನಪ್ರಿಯತೆ ಮತ್ತು ಸಮಾಜ ಸೇವೆ ಮತದಾರರು ಮತ್ತೊಮ್ಮೆ ಗುರುತಿಸಿ ಅಭೂತಪೂರ್ವ ಬೆಂಬಲ ನೀಡಿದ್ದಾರೆ’ ಎಂದು ಭಾವುಕರಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.