ಸದನದಲ್ಲಿ ಮಾತನಾಡಲು ಅವಕಾಶ ಸಿಗದ್ದಕ್ಕೆ ಕಾಂಗ್ರೆಸ್‌ ಶಾಸಕ ರಾಯರೆಡ್ಡಿ ವಾಕೌಟ್..!

Published : Dec 06, 2023, 07:59 AM IST
ಸದನದಲ್ಲಿ ಮಾತನಾಡಲು ಅವಕಾಶ ಸಿಗದ್ದಕ್ಕೆ ಕಾಂಗ್ರೆಸ್‌ ಶಾಸಕ ರಾಯರೆಡ್ಡಿ ವಾಕೌಟ್..!

ಸಾರಾಂಶ

ರಾಯರೆಡ್ಡಿ ಅವರ ಸಲಹೆಯನ್ನು ಹಗುರವಾಗಿ ಪರಿಗಣಿಸಿದ ಯು.ಟಿ. ಖಾದರ್, ‘ನೀವು ಹಿರಿಯ ಸದಸ್ಯರಾಗಿ 12 ಗಂಟೆಗೆ ಸದನಕ್ಕೆ ಬಂದಿದ್ದೀರಿ. ತಡವಾಗಿ ಬಂದು ನೀವು ನಿಯಮಗಳ ಬಗ್ಗೆ ಪಾಠ ಮಾಡಿದರೆ ಹೇಗೆ? ಕುಳಿತುಕೊಳ್ಳಿ ಮೊದಲು’ ಎಂದು ಗದರಿದರು.  

ವಿಧಾನಸಭೆ(ಡಿ.06):  ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಆಗುತ್ತಿದ್ದ ಲೋಪಗಳನ್ನು ಪ್ರಸ್ತಾಪಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಕಾಂಗ್ರೆಸ್‌ ಹಿರಿಯ ಸದಸ್ಯ ಬಸವರಾಜ ರಾಯರೆಡ್ಡಿ ಸದನದಿಂದ ಸಭಾತ್ಯಾಗ ಮಾಡಿದ ಘಟನೆ ಮಂಗಳವಾರ ನಡೆಯಿತು.

ಪ್ರಶ್ನೋತ್ತರ ಅವಧಿಯಲ್ಲಿ ಎನ್‌.ಎ. ಹ್ಯಾರಿಸ್‌ ಕೇಳಿದ ಪ್ರಶ್ನೆಗೆ, ಬಿಜೆಪಿಯ ಹಲವು ಸದಸ್ಯರು ಎದ್ದು ನಿಂತು ಪದೇ ಪದೇ ಮಾತನಾಡುತ್ತಿದ್ದರು. ಈ ಹಂತದಲ್ಲಿ ಸದನದ ಒಳಗಡೆ ಬಂದ ಬಸವರಾಜ ರಾಯರೆಡ್ಡಿ ಅವರು, ‘ಇದು ಕ್ವಶ್ಚನ್ ಅವರ್‌ ಅಥವಾ ಕ್ವಶ್ಚನ್‌ ಅವರ್ಸ್? ಒಂದು ಪ್ರಶ್ನೆ ಮೇಲೆ ಗಂಟೆಗಟ್ಟಲೇ ಮಾತನಾಡಲು ಅವಕಾಶ ನೀಡುತ್ತೀರಾ?’ ಎಂದು ಸ್ಪೀಕರ್‌ ಅವರಿಗೆ ಹೇಳಿದರು.

ತೆಲಂಗಾಣ ಸಿಎಂ ಆಯ್ಕೆ: 2ನೇ ದಿನವೂ ಡಿಕೆಶಿ, ಜಮೀರ್‌ ಸದನಕ್ಕೆ ಗೈರು

ರಾಯರೆಡ್ಡಿ ಅವರ ಸಲಹೆಯನ್ನು ಹಗುರವಾಗಿ ಪರಿಗಣಿಸಿದ ಯು.ಟಿ. ಖಾದರ್, ‘ನೀವು ಹಿರಿಯ ಸದಸ್ಯರಾಗಿ 12 ಗಂಟೆಗೆ ಸದನಕ್ಕೆ ಬಂದಿದ್ದೀರಿ. ತಡವಾಗಿ ಬಂದು ನೀವು ನಿಯಮಗಳ ಬಗ್ಗೆ ಪಾಠ ಮಾಡಿದರೆ ಹೇಗೆ? ಕುಳಿತುಕೊಳ್ಳಿ ಮೊದಲು’ ಎಂದು ಗದರಿದರು.

ಇದರಿಂದ ಸಿಟ್ಟಿಗೆದ್ದ ರಾಯರೆಡ್ಡಿ, ‘35 ವರ್ಷದಿಂದ ಈ ಸದನದ ಸದಸ್ಯನಾಗಿ ನನಗೆ ಅನುಭವ ಇದೆ. ನನ್ನ ಬಗ್ಗೆ ಕೇವಲವಾಗಿ ಮಾತನಾಡುತ್ತೀರಿ. ಸದನವನ್ನು ನಿಯಮಾವಳಿ ಪ್ರಕಾರ ನಡೆಸಿ ಎಂದು ಹೇಳಿದ್ದೇ ತಪ್ಪೇ? ನನಗೆ ಗೌರವ ಕೊಡದಿದ್ದರೆ ನಾನೇಕೆ ಇಲ್ಲಿರಬೇಕು. ನಾನು ವಾಕ್ ಔಟ್ ಮಾಡುತ್ತೇನೆ’ ಎಂದು ಹೊರನಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ