
ರಾಯಚೂರು (ಮೇ 04): ರಾಜ್ಯದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವವರನ್ನು ಪೊಲೀಸರು ಬೂಟ್ನಿಂದ ಹೊಡೆಯಬೇಕು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
ರಾಯಚೂರಿನಲ್ಲಿ ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ನಗರಸಭೆ ಕಮಿಷನರ್ ಮುಂದೆಯೇ ಇಂತಹ ಹೇಳಿಕೆಯನ್ನ ನೀಡಿದ್ದರು. ಬಷಿರುದ್ದೀನ್ ಹೇಳಿಕೆ ಸದ್ಯ ಸಾಮಾಜಿಲ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಜೈ ಶ್ರೀರಾಮ್ ಎಂದವರಿಗೆ ನಡು ರಸ್ತೆಯಲ್ಲೇ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ಹೇಳಿದ್ದರು. ಬಷಿರುದ್ದೀನ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಫುಲ್ ಗರಂ ಆಗಿದ್ದರು. ಆದರೆ, ಲೋಕಸಭಾ ಚುನಾವಣೆ ಮತದಾನಕ್ಕೆ ಮೂರು ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಇಂತಹ ಹೇಳಿಕೆಯಿಂದ ಕಾಂಗ್ರೆಸ್ಗೆ ಹಿಂದೂಗಳ ಮತಗಳು ಕೈ ತಪ್ಪುವ ಆತಂಕ ಎದುರಾಗಿತ್ತು. ಇದರ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷದ ಮೇಲಾಗುತ್ತಿದ್ದ ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಬಷೀರುದ್ದೀನ್ನನ್ನು ಕಾಂಗ್ರೆಸ್ನಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.