ಸಂಪುಟ ಪುನಾರಚನೆಗೆ ಮಾನಸಿಕವಾಗಿ ಸಿದ್ಧಆಗಿರಿ : ಮಂತ್ರಿಗಳಿಗೆ ಸಿದ್ದು ಖುದ್ದು ಸೂಚನೆ

Kannadaprabha News   | Kannada Prabha
Published : Oct 14, 2025, 04:28 AM IST
Siddaramaiah Koppal

ಸಾರಾಂಶ

ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜ್ಯಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವ ಹಂತದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟದ ಹಿರಿಯ ಸಚಿವರಿಗೆ ಇಂಥ ಬೆಳವಣಿಗೆ ನಡೆಯುವ ಸಾಧ್ಯತೆಯ ಸುಳಿವು ನೀಡಿ ಮಾನಸಿಕವಾಗಿ ಸಿದ್ಧರಾಗಿರುವಂತೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜ್ಯಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವ ಹಂತದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟದ ಹಿರಿಯ ಸಚಿವರಿಗೆ ಇಂಥ ಬೆಳವಣಿಗೆ ನಡೆಯುವ ಸಾಧ್ಯತೆಯ ಸುಳಿವು ನೀಡಿ ಮಾನಸಿಕವಾಗಿ ಸಿದ್ಧರಾಗಿರುವಂತೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಂಪುಟ ಸದಸ್ಯರಿಗೆ ಸೋಮವಾರ ಔತಣಕೂಟ ನೀಡಿದ್ದ ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆಯ ವಿಶೇಷ ಹೊಣೆಗಾರಿಕೆ ಹೊರಲು ಸಂಪುಟದ ಹಿರಿಯ ಸಚಿವರು ಮಾನಸಿಕ ಸಿದ್ಧರಾಗಿರಬೇಕು ಎಂದು ನೇರ ಸೂಚನೆ ನೀಡಿದರು ಎಂದು ತಿಳಿದುಬಂದಿದೆ.

‘ಅಲ್ಲದೆ, ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಹೊಸಬರಿಗೆ ಅವಕಾಶ ನೀಡಲು ಸಂಪುಟ ಪುನಾರಚನೆ ಅನಿವಾರ್ಯ ಎಂದು ಹೈಕಮಾಂಡ್‌ ತಿಳಿಸಿದೆ. ಹೀಗಾಗಿ ಸಚಿವರು ಸಂಪುಟ ಪುನರ್‌ರಚನೆಗೆ ಮಾನಸಿಕವಾಗಿ ಸಿದ್ಧವಾಗಿರಿ’ ಎಂದೂ ಹೇಳಿದರು ಎನ್ನಲಾಗಿದೆ.

ಸಂಪುಟದಿಂದ ಕೆಲವರನ್ನು ಕೈಬಿಟ್ಟು ಬೇರೆಯವರಿಗೆ ಅವಕಾಶ ನೀಡಬೇಕಾಗಬಹುದು. ಸಚಿವ ಸ್ಥಾನ ತ್ಯಾಗ ಮಾಡಿದವರಿಗೆ ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಲಿದ್ದು, ಪಕ್ಷದ ಸಂಘಟನೆಯ ಮಹತ್ವದ ಜವಾಬ್ದಾರಿಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೈಕಮಾಂಡ್‌ಗೆ ಆಸಕ್ತಿ:

ಹೈಕಮಾಂಡ್‌ ಪುನಾರಚನೆಗೆ ಆಸಕ್ತಿ ಹೊಂದಿದೆ. ಹೊಸಬರಿಗೆ ಅವಕಾಶ ನೀಡಲು ಇದು ಅನಿವಾರ್ಯವೂ ಕೂಡ. ಹೈಕಮಾಂಡ್‌ ಬಳಿ ಸಚಿವರ ರಿಪೋರ್ಟ್‌ ಕಾರ್ಡ್‌ ಇದ್ದು, ಅದರ ಆಧಾರದ ಮೇಲೆ ಯಾವಾಗ ಬೇಕಾದರೂ ಸೂಚನೆ ನೀಡಬಹುದು. ಹೀಗಾಗಿ ಮಾನಸಿಕವಾಗಿ ಸಿದ್ಧವಾಗಿರಿ ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಪಕ್ಷ ಸಂಘಟನೆ ಮುಖ್ಯ:

ಸರ್ಕಾರದ ಆಡಳಿತದ ಜತೆಗೆ ಮುಂದಿನ ಬಾರಿಗೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಕ್ಷ ಸಂಘಟನೆಯೂ ಮುಖ್ಯ. ಪಕ್ಷವನ್ನು ಬಲವಾಗಿ ಸಂಘಟಿಸಿ ಮುಂದಿನ ಜಿಬಿಎ ಚುನಾವಣೆ, ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಜತೆಗೆ 2028ರ ಚುನಾವಣೆಗೂ ಸಿದ್ಧತೆ ನಡೆಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿರುವುದಾಗಿ ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌