ವರ್ಗಾವಣೆ ದಂಧೆ ಆರೋಪಕ್ಕೆ ಸಿಎಂ ಬ್ರೇಕ್: ಇನ್ನು ಸಿಎಂ ಅನುಮತಿ ಇಲ್ಲದೆ ಟ್ರಾನ್ಸ್​​ಫರ್ ಮಾಡುವಂತಿಲ್ಲ

Published : Sep 03, 2023, 01:40 AM IST
ವರ್ಗಾವಣೆ ದಂಧೆ ಆರೋಪಕ್ಕೆ ಸಿಎಂ ಬ್ರೇಕ್: ಇನ್ನು ಸಿಎಂ ಅನುಮತಿ ಇಲ್ಲದೆ ಟ್ರಾನ್ಸ್​​ಫರ್ ಮಾಡುವಂತಿಲ್ಲ

ಸಾರಾಂಶ

ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿದ್ದರೂ ಮುಖ್ಯಮಂತ್ರಿಗಳ ಪೂರ್ವ ಅನುಮತಿ ಇಲ್ಲದೆ ಇಲಾಖಾ ಹಂತದಲ್ಲೇ ಎ, ಬಿ,ಸಿ ಹಾಗೂ ಡಿ ಗ್ರೂಪ್‌ನ ಸಿಬ್ಬಂದಿಯ ವರ್ಗಾವಣೆ ಆದೇಶ ಹೊರಡಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿಗಳ ಪೂರ್ವಾನುಮತಿ ಇಲ್ಲದೆ ವರ್ಗಾವಣೆ ಆದೇಶ ಮಾಡಿದರೆ ಇಲಾಖಾ ಮುಖ್ಯಸ್ಥರನ್ನೇ ಹೊಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಬೆಂಗಳೂರು (ಸೆ.03): ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿದ್ದರೂ ಮುಖ್ಯಮಂತ್ರಿಗಳ ಪೂರ್ವ ಅನುಮತಿ ಇಲ್ಲದೆ ಇಲಾಖಾ ಹಂತದಲ್ಲೇ ಎ, ಬಿ,ಸಿ ಹಾಗೂ ಡಿ ಗ್ರೂಪ್‌ನ ಸಿಬ್ಬಂದಿಯ ವರ್ಗಾವಣೆ ಆದೇಶ ಹೊರಡಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿಗಳ ಪೂರ್ವಾನುಮತಿ ಇಲ್ಲದೆ ವರ್ಗಾವಣೆ ಆದೇಶ ಮಾಡಿದರೆ ಇಲಾಖಾ ಮುಖ್ಯಸ್ಥರನ್ನೇ ಹೊಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಗ್ರೂಪ್‌ -ಎ, ಬಿ,ಸಿ ಮತ್ತು ಡಿ ವರ್ಗದ ಅಧಿಕಾರಿ, ನೌಕರರಿಗೆ ಶೇ.6ರಷ್ಟುಮೀರದಂತೆ ಜೂ.1 ರಿಂದ ಜು.3ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿತ್ತು. ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದ ಬಳಿಕ ಯಾವುದೇ ವರ್ಗಾವಣೆ ಮಾಡಬೇಕಿದ್ದರೂ ಮುಖ್ಯಮಂತ್ರಿಗಳ ಅನುಮೋದನೆ ಕಡ್ಡಾಯ ಎಂದು ಮೊದಲೇ ತಿಳಿಸಲಾಗಿತ್ತು.

ಆದರೂ, ಕೆಲ ಇಲಾಖೆಗಳಲ್ಲಿ ಅಧಿಕಾರಿಗಳು ಹಾಗೂ ಸಚಿವರು ಇಲಾಖಾ ಮಟ್ಟದಲ್ಲೇ ವರ್ಗಾವಣೆ ನಡೆಸುತ್ತಿದ್ದಾರೆ. ಬಳಿಕ ಘಟನೋತ್ತರ ಅನುಮೋದನೆಗಾಗಿ ಮುಖ್ಯಮಂತ್ರಿಗಳಿಗೆ ಕಡತ ಸಲ್ಲಿಸುತ್ತಿದ್ದಾರೆ ಎಂಬ ಆರೋಪಗಳು ಹೆಚ್ಚಾಗಿತ್ತು. ಈ ಬಗ್ಗೆ ಕೆಲಸ ಶಾಸಕರು ಮುಖ್ಯಮಂತ್ರಿಗಳಿಗೆ ದೂರನ್ನೂ ನೀಡಿದ್ದರು. ಅಲ್ಲದೆ ಮುಖ್ಯಮಂತ್ರಿಗಳ ಕಚೇರಿಗೂ ವರ್ಗಾವಣೆ ಆಗಿರುವ ಆದೇಶಗಳ ಘಟನೋತ್ತರ ಅನುಮೋದನೆಗೆ ಹಲವು ಕಡತಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಡನ್ನು ಉಳಿಸಿದರೆ ಕಾಡು ನಮ್ಮನ್ನು ಉಳಿಸುತ್ತದೆ: ಸಚಿವ ಮಹದೇವಪ್ಪ

ಇಲಾಖಾ ಮುಖ್ಯಸ್ಥರೇ ಹೊಣೆ: ಈ ಹಿನ್ನೆಲೆಯಲ್ಲಿ ಸೆ.1 ರಂದು ಶುಕ್ರವಾರ ಸುತ್ತೋಲೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ನಿಗದಿತ ವರ್ಗಾವಣೆ ಅವಧಿ ಮುಗಿದ ಬಳಿಕ ಯಾವುದೇ ವರ್ಗಾವಣೆ ಮಾಡುವಂತಿಲ್ಲ. ಒಂದು ವೇಳೆ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಬೇಕಾದರೆ ಮುಖ್ಯಮಂತ್ರಿಗಳ ಪೂರ್ವ ಅನುಮೋದನೆ ಪಡೆಯಬೇಕು. ಪೂರ್ವ ಅನುಮೋದನೆ ಪಡೆಯದೆ ಯಾವುದೇ ವರ್ಗಾವಣೆ ಮಾಡಿದರೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ