Chikkamagaluru: ದತ್ತಮಾಲಾಧಾರಿ ಸಿ.ಟಿ.ರವಿಯಿಂದ ಕಾಫಿನಾಡಿನ ಮನೆಗಳಲ್ಲಿ ಭಿಕ್ಷಾಟನೆ!

Published : Dec 25, 2023, 10:20 AM IST
Chikkamagaluru: ದತ್ತಮಾಲಾಧಾರಿ ಸಿ.ಟಿ.ರವಿಯಿಂದ ಕಾಫಿನಾಡಿನ ಮನೆಗಳಲ್ಲಿ ಭಿಕ್ಷಾಟನೆ!

ಸಾರಾಂಶ

ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ದತ್ತಮಾಲಾಧಾರಿ ಸಿ.ಟಿ.ರವಿ ಭಿಕ್ಷಾಟನೆ ಮಾಡಿದ್ದಾರೆ. ಹೌದು! ಮನೆ-ಮನೆಗೆ ತೆರಳಿ ಸಿ.ಟಿ.ರವಿ ಪಡಿ ಸಂಗ್ರಹಿಸಿದ್ದಾರೆ. 

ಚಿಕ್ಕಮಗಳೂರು (ಡಿ.25): ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ದತ್ತಮಾಲಾಧಾರಿ ಸಿ.ಟಿ.ರವಿ ಭಿಕ್ಷಾಟನೆ ಮಾಡಿದ್ದಾರೆ. ಹೌದು! ಮನೆ-ಮನೆಗೆ ತೆರಳಿ ಸಿ.ಟಿ.ರವಿ ಪಡಿ ಸಂಗ್ರಹಿಸಿದ್ದಾರೆ. ಚಿಕ್ಕಮಗಳೂರು ನಗರದ ನಾರಾಯಣಪುರದಲ್ಲಿ ಪಡಿ ಸಂಗ್ರಹಿಸುತ್ತಿರುವ ಸಿ.ಟಿ.ರವಿಗೆ 20ಕ್ಕೂ ಹೆಚ್ಚು ಮಾಲಾಧಾರಿಗಳ ಸಾಥ್ ನೀಡಿದ್ದಾರೆ.  9 ಮನೆಯಲ್ಲಿ ಭಿಕ್ಷೆ ಬೇಡಿ ಪಡಿ ಸಂಗ್ರಹಿಸಿದ ಸಿ.ಟಿ.ರವಿ, ಆ ಪಡಿ ಸಂಗ್ರಹ ವಸ್ತುಗಳನ್ನ ಇರುಮುಡಿ ರೂಪದಲ್ಲಿ ನಾಳೆ ದತ್ತಪೀಠಕ್ಕೆ ಹೊತ್ತೊಯ್ಯುತ್ತಾರೆ. ಅಕ್ಕಿ, ಬೇಳೆ, ಕಾಯಿ, ಬೆಲ್ಲ ಎಲೆ, ಅಡಿಕೆಯನ್ನು ಚಿಕ್ಕಮಗಳೂರು ನಗರದ ನಾರಾಯಣಪುರ ಬಡಾವಣೆಯಲ್ಲಿ ಜನರು ಸಿ.ಟಿ.ರವಿ ಅವರಿಗೆ ನೀಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ದತ್ತಮಾಲೆ ಧರಿಸಿದ ಆರ್.ಅಶೋಕ್: ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಅವರು ಭಾನುವಾರ ಚಿಕ್ಕಮಗಳೂರಿನಲ್ಲಿ ದತ್ತಮಾಲೆ ಧರಿಸಿದರು. ವಿಶ್ವಹಿಂದೂ ಪರಿಷತ್‌ ಹಾಗೂ ಭಜರಂಗದಳ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ದತ್ತ ಜಯಂತಿ ಮೊದಲ ದಿನವಾದ ಭಾನುವಾರದಂದು ಇಲ್ಲಿನ ಶ್ರೀ ಕಾಮಧೇನು ಗಣಪತಿ ದೇವಾಲಯದಲ್ಲಿ ಸಂಜೆ ಆರ್‌. ಅಶೋಕ್‌ ದತ್ತಮಾಲೆಯನ್ನು ಧರಿಸಿದರು.

ಯಾರು ಬುರುಡೆ ಬಿಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತು: ಸಿದ್ದುಗೆ ಸಿಂಹ ತಿರುಗೇಟು!

ದತ್ತಮಾಲೆ ಧರಿಸಿದ ಭಕ್ತರು ಸೋಮವಾರ ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡು, ಮಂಗಳವಾರ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆದ ಬಳಿಕ ದತ್ತಮಾಲೆ ವಿಸರ್ಜಿಸುವುದು ಪ್ರತೀತಿ. ಹಾಗಾಗಿ ಎರಡು ದಿನಗಳ ಈ ಕಾರ್ಯಕ್ರಮಗಳಲ್ಲಿ ಆರ್‌. ಆಶೋಕ್‌ ಭಾಗವಹಿಸುವ ಸಾಧ್ಯತೆ ಇದೆ.

ದತ್ತಮಾಲೆ ಧರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌. ಅಶೋಕ್‌, ದತ್ತಪೀಠ ಎನ್ನುವ ಕುರುಹುಗಳು ಅಲ್ಲಿವೆ. ಆದರೆ, ದತ್ತಪೀಠ ಸೇರಿದಂತೆ ಶ್ರೀರಂಗಪಟ್ಟಣ, ಅಯೋಧ್ಯ, ಮಥುರಾ, ಕಾಶಿ ಹೀಗೆ ಹಲವೆಡೆ ಅಕ್ರಮಣ ಆಗಿದೆ. ಇದೊಂದು ಶ್ರದ್ಧಾ ಕೇಂದ್ರ, ನಮ್ಮ ಸರ್ಕಾರ ಇದ್ದಾಗ ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡಿತ್ತು. ಇದು, ಧಾರ್ಮಿಕ ಸ್ಥಳ ಆಗಬೇಕು. ಆದರೆ, ಆ ಭಾವನೆಯನ್ನು ಮಟ್ಟ ಹಾಕುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದರು.

ಲೋಕಸಭೆ ಚುನಾವಣೆ ಫಲಿತಾಂಶ ಇತಿಹಾಸದ ಪುಟದಲ್ಲಿ ಬರೆಯುವಂತಿರಲಿ: ಬಿ.ವೈ.ವಿಜಯೇಂದ್ರ

ನ್ಯಾಯಾಲಯ ದಾಖಲೆಗಳು ದತ್ತಪೀಠ ಬೇರೆ, ದರ್ಗಾ ಬೇರೆ ಎಂದು ಹೇಳುತ್ತಿವೆ. ನ್ಯಾಯಾಧೀಶರನ್ನು ನೇಮಕ ಮಾಡಿ ಇಲ್ಲಿನ ಸಮಸ್ಯೆ ಬಗೆಹರಿಸಬೇಕು. ಹಿಂದೂಗಳ ಭಾವನೆ ಕೆರಳಿಸುವ ಕೆಲಸ ಆಗಬಾರದು. ಇದು ಹಿಂದೂಸ್ಥಾನ, ದತ್ತಪೀಠ ಆಗಿಯೇ ಉಳಿಯಬೇಕು. ದತ್ತಪೀಠದ ಘನತೆಯನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ